ಆ್ಯಪ್ನಗರ

ರಾಜಕೀಯ ಪ್ರವೇಶದ ಬಗ್ಗೆ ಮೌನ ಮುರಿದ ರಜನಿಕಾಂತ್

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಅಡಿಯಿಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಆದರೆ ಈ ಬಗ್ಗೆ ರಜನಿಕಾಂತ್ ಸ್ಪಷ್ಟವಾಗಿ ಏನು ಹೇಳಿರಲಿಲ್ಲ. ಈಗ ಮತ್ತೊಮ್ಮೆ ತಮ್ಮ ನಿಲುವನ್ನು ಪ್ರಕಟಿಸಿದ್ದಾರೆ. ಈಗ ರಾಜಕೀಯಕ್ಕೆ ಅಡಿಯಿಡಬೇಕಾದ ಅವಸರ ಏನು ಇಲ್ಲ ಎಂದು ಭಾವಿಸಿರುವುದಾಗಿ ಅವರು ತಿಳಿಸಿದ್ದಾರೆ.

TNN 23 Nov 2017, 5:30 pm
ಚೆನ್ನೈ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಅಡಿಯಿಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಆದರೆ ಈ ಬಗ್ಗೆ ರಜನಿಕಾಂತ್ ಸ್ಪಷ್ಟವಾಗಿ ಏನು ಹೇಳಿರಲಿಲ್ಲ. ಈಗ ಮತ್ತೊಮ್ಮೆ ತಮ್ಮ ನಿಲುವನ್ನು ಪ್ರಕಟಿಸಿದ್ದಾರೆ. ಈಗ ರಾಜಕೀಯಕ್ಕೆ ಅಡಿಯಿಡಬೇಕಾದ ಅವಸರ ಏನು ಇಲ್ಲ ಎಂದು ಭಾವಿಸಿರುವುದಾಗಿ ಅವರು ತಿಳಿಸಿದ್ದಾರೆ.
Vijaya Karnataka Web no urgency to enter politics rajinikanth
ರಾಜಕೀಯ ಪ್ರವೇಶದ ಬಗ್ಗೆ ಮೌನ ಮುರಿದ ರಜನಿಕಾಂತ್


ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಭಾಗ್ಯ ಪಡೆದು ಚೆನ್ನೈಗೆ ಹಿಂತಿರುಗಿದ ಬಳಿಕ ಬುಧವಾರ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಜನಿಕಾಂತ್ ಈ ಹೇಳಿಕೆ ನೀಡಿದ್ದಾರೆ. ರಾಜಕೀಯಕ್ಕೆ ಯಾವಾಗ ಅಡಿಯಿಡುತ್ತಿದ್ದೀರಿ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರಜನಿ ಈ ಹೇಳಿಕೆ ನೀಡಿದ್ದಾರೆ.

ಬರಲಿರುವ ಡಿಸೆಂಬರ್ 12ರಂದು ರಜನಿಕಾಂತ್ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಆ ದಿನ ರಾಜಕೀಯ ಪ್ರವೇಶದ ಬಗ್ಗೆ ಮುಖ್ಯವಾದ ಪ್ರಕಟಣೆ ಮಾಡುವ ಸಾಧ್ಯತೆಗಳಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ರಜನಿ ಮಾತ್ರ ತನ್ನ ಹುಟ್ಟುಹಬ್ಬದ ಬಳಿಕ ಮತ್ತೊಮ್ಮೆ ಅಭಿಮಾನಿಗಳನ್ನು ಭೇಟಿಯಾಗುತ್ತೇನೆಂದು ಹೇಳಿದ್ದಾರೆ. ಈಗಲೇ ರಾಜಕೀಯಕ್ಕೆ ಅಡಿಯಿಡುವ ಅವಸರದ ಪರಿಸ್ಥಿತಿ ಇರುವಂತೆ ತಾನು ಭಾವಿಸಿಲ್ಲ ಎಂದು ರಜನೀಕಾಂತ್ ಸ್ಪಷ್ಟಪಡಿಸಿದ್ದಾರೆ.

ಕಳೆದ ಒಂದು ವರ್ಷದಿಂದ ರಜನಿಕಾಂತ್ ರಾಜಕೀಯಕ್ಕೆ ಅಡಿಯಿಡಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದವು. ಈಗ ರಜನಿಕಾಂತ್ ನೀಡಿರುವ ಹೇಳಿಕೆ ಆ ಎಲ್ಲಾ ಅಂತೆಕಂತೆಗೆ ತೆರೆಎಳೆದಂತಾಗಿದೆ. ರಾಜಕೀಯ ಪ್ರವೇಶದ ಬಗ್ಗೆ ರಜನಿಕಾಂತ್ ಅಭಿಮಾನಿಗಳು ಸ್ವಲ್ಪ ಸಮಯ ಕಾದುನೋಡಬೇಕಾದ ಪರಿಸ್ಥಿತಿ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌