ಆ್ಯಪ್ನಗರ

ಕನ್ನಡ ಚಿತ್ರರಂಗದ ಉಕ್ಕಿನ ಮಹಿಳೆ ಬಗ್ಗೆ ಬಾಬು ಸ್ಮರಣೆ

ಕನ್ನಡ ಚಿತ್ರೋದ್ಯಮದ ಖ್ಯಾತ ನಿರ್ಮಾಪಕಿ, ಉಕ್ಕಿನ ಮಹಿಳೆ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಕರ್ನಾಟಕ ಚನಲಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಕ ಸುದ್ದಿಲೋಕ 31 May 2017, 2:02 pm
ಕನ್ನಡ ಚಿತ್ರೋದ್ಯಮದ ಖ್ಯಾತ ನಿರ್ಮಾಪಕಿ, ಉಕ್ಕಿನ ಮಹಿಳೆ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಕರ್ನಾಟಕ ಚನಲಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Vijaya Karnataka Web parvathamma rajkumar passes away rajendra singh babu expressed his condolence
ಕನ್ನಡ ಚಿತ್ರರಂಗದ ಉಕ್ಕಿನ ಮಹಿಳೆ ಬಗ್ಗೆ ಬಾಬು ಸ್ಮರಣೆ


ಕಳೆದ 5 ದಶಕಗಳಿಂದ ಕನ್ನಡ ಚಿತ್ರೋದ್ಯಮದ ಬೆನ್ನುಲುಬಾಗಿದ್ದ ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್ ಅವರು, ಕನ್ನಡ ಚಲನಚಿತ್ರರಂಗದ ಹಲವು ಸಮಸ್ಯೆಗಳಿಗೆ ಪರಿಹಾರ ದೊರಕಿಸಿದ್ದರು. ಕನ್ನಡ ನೆಲದಲ್ಲಿ ಕನ್ನಡ ಚಲನಚಿತ್ರ ನೆಲೆಯೂರಲು ಡಾ.ರಾಜ್ ಕುಮಾರ್ ಅವರಿಗೆ ಹೆಗಲು ಕೊಟ್ಟಿದ್ದರು ಎಂದು ಅವರು ನೆನಪಿಸಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರು, ಕಲಾವಿದರು, ತಾಂತ್ರಿಕ ಹಾಗೂ ಕಾರ್ಮಿಕ ವರ್ಗಕ್ಕೆ ಮಾರ್ಗದರ್ಶಿಯಾಗಿದ್ದರು. ಅವರ ನಿಧನದಿಂದ ಭಾರತೀಯ ಚಲನಚಿತ್ರರಂಗ ಅತಿದೊಡ್ಡ ನಿರ್ಮಾಪಕರು ಹಾಗೂ ಚಿತ್ರಪ್ರೇಮಿಯನ್ನು ಕಳೆದುಕೊಂಡಿದೆ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರತಿಷ್ಠಿತ ಕಾರ್ಯಕ್ರಮವಾದ 'ಬೆಳ್ಳಿಹೆಜ್ಜೆ' ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್ ಅವರ ಕಾರ್ಯಕ್ರಮದ ಮೂಲಕ ಆರಂಭವಾಗಿತ್ತು. ಕನ್ನಡ ಚಿತ್ರೋದ್ಯಮದ ಗಣ್ಯರ ಸಾಧನೆಗಳನ್ನು ದಾಖಲು ಮಾಡುವ ಬೆಳ್ಳಿಹೆಜ್ಜೆಗೆ ಪಾರ್ವತಮ್ಮ ಮೊದಲ ಅತಿಥಿಯಾಗುವ ಮೂಲಕ ಈ ಕಾರ್ಯಕ್ರಮದ ಹಿರಿಮೆಯನ್ನು ಹೆಚ್ಚಿಸಿದ್ದರು ಎಂದು ರಾಜೇಂದ್ರ ಸಿಂಗ್ ಬಾಬು ಅವರು ಸ್ಮರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌