ಆ್ಯಪ್ನಗರ

ಬಂಡಿಪುರ ಕಾಡ್ಗಿಚ್ಚು ದುರಂತಕ್ಕೆ ಕಂಬನಿ ಮಿಡಿದ ಪುನೀತ್ ರಾಜ್‌ಕುಮಾರ್

ಚಾಮರಾಜನಗರ ಜಿಲ್ಲೆ, ಬಂಡೀಪುರ ಅರಣ್ಯ ವಲಯದಲ್ಲಿ ಸುಮಾರು 8 ಕೀ. ಮೀ. ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿದ್ದು ಬಹಳಷ್ಟು ಪ್ರಾಣಿ-ಪಕ್ಷಿಗಳು ಪ್ರಾಣ ಕಳೆದುಕೊಮಡಿದ್ದು ಕಂಡು ಬಂದಿದವೆ. ಕೇರಳ ಗಡಿಭಾಗಕ್ಕೂ ಬೆಂಕಿ ವ್ಯಾಪಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ.

Vijaya Karnataka Web 25 Feb 2019, 2:26 pm
ಕರ್ನಾಟಕದ ಚಾಮರಾಜನಗರ ಜಿಲ್ಲೆಯ, ಬಂಡೀಪುರ ಅರಣ್ಯ ವಲಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಅಸಂಖ್ಯಾತ ವನ್ಯ ಸಂಪತ್ತು ಹಾಗೂ ಜೀವಸಂಕುಲಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಚಕಮ್ಮಡದ ನಟ ದರ್ಶನ್ ತೂಗುದೀಪ ಸೇರಿದಂತೆ ಪುನೀತ್ ರಾಜ್‌ಕುಮಾರ್ ಕೂಡ ಧ್ವನಿ ಎತ್ತಿದ್ದಾರೆ.
Vijaya Karnataka Web puneeth25


ಪ್ರಾಣಿ ಪ್ರಿಯರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆ ತಮ್ಮ ಟ್ವೀಟರ್ ಪೇಜ್‌ನಲ್ಲಿ ಪೋಸ್ಟ ಮಾಡುವ ಮೂಲಕ ಜನರಿಗೆ ಮೂಲಕ ಮನವಿ ಮಾಡಿಕೊಂಡಿದ್ದರು. ಇದೀಗ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡಾ ಅದೇ ದಿಸೆಯಲ್ಲಿ ಕಾಲಿಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪುನೀತ್ ರಾಜ್‌ಕುಮಾರ್ ಅವರು " ಬಂಡೀಪುರದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಅರಣ್ಯ ಸಂಪತ್ತು ಮತ್ತು ವನ್ಯ ಜೀವಿಗಳು ಸಂಕಷ್ಟಕ್ಕೀಡಾಗಿವೆ. ಅರಣ್ಯ ಇಲಾಖೆ ಮತ್ತು ಸ್ವಯಂಸೇವಕರ ಜತೆ ನಾವೂ ಕೈ ಜೋಡಿಸೋಣ. 'ಕಾಡಿದ್ದರೆ ನಾಡು, ನಾವು. ವನ್ಯ ಜೀವಿಗಳ ರಕ್ಷಣೆ ನಮ್ಮೆಲ್ಲರ ಹೊಣೆ. ಮನುಷ್ಯನ ಹಾಗೇ ಗಿಡ ಮರ ಮತ್ತು ವನ್ಯ ಜೀವಿಗಳೂ ಒಂದು ಜೀವವೇ' ಎಂದು ಪೋಸ್ಟ್ ಮಾಡಿ ಮನವಿ ಮಾಡಿದ್ದಾರೆ.

ಚಾಮರಾಜನಗರ ಜಿಲ್ಲೆ, ಬಂಡೀಪುರ ಅರಣ್ಯ ವಲಯದಲ್ಲಿ ಸುಮಾರು 8 ಕೀ. ಮೀ. ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿದ್ದು ಬಹಳಷ್ಟು ಪ್ರಾಣಿ-ಪಕ್ಷಿಗಳು ಪ್ರಾಣ ಕಳೆದುಕೊಮಡಿದ್ದು ಕಂಡು ಬಂದಿದವೆ. ಕೇರಳ ಗಡಿಭಾಗಕ್ಕೂ ಬೆಂಕಿ ವ್ಯಾಪಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ. ಅತ್ತ, ತಮಿಳುನಾಡಿನ ಅರಣ್ಯ ಪ್ರದೇಶ ಕೂಡ ಇರುವುದರಿಂದ ಅಲ್ಲಿ ಬೆಂಕಿ ಹರಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಒಟ್ಟಿನಲ್ಲಿ ಈಗ ಸರ್ಕಾರದ ಜೊತೆ ಸಾಕಷ್ಟು ಸಂಘ-ಸಂಸ್ಥೆಗಳು ಬೆಂಕಿ ನಂದಿಸುವ, ಮರಗಿಡಗಳನ್ನು ಸಂರಕ್ಷಿಸುವ ಹಾಗೂ ಪ್ರಾಣಿ-ಪಕ್ಷಿಗಳ ಉಳುವಿಗಾಗಿ ಪಣ ತೊಡಬೇಕಾಗಿದೆ.

ನಿನ್ನೆ ಈ ಬಗ್ಗೆ ಟ್ವೀಟ್ ಮಾಡಿರುವ ಕನ್ನಡದ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಅವರು ""ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ" ಎಂದು ಕನ್ನಡದ 'ಬಾಕ್ಸ್ ಆಫೀಸ್ ಸುಲ್ತಾನ್' ದರ್ಶನ್ ವಿನಂತಿಸಿಕೊಂಡಿದ್ದಾರೆ.
ಒಟ್ಟನಲ್ಲಿ ದರ್ಶನ್ ಸೇರಿದಂತೆ, ಕನ್ನಡದ ಅನೇಕ ಸ್ಟಾರ್ ನಟರುಗಳ ಮನಸ್ಸು ಸಿನಿಮಾ ಮಾತ್ರವಲ್ಲದೇ ಪರಿಸರ, ಜೀವಸಂಕುಲ ಹಾಗೂ ಸಾಮಾಜಿಕ ಕಳಕಳಿಯ ಬಗ್ಗೆಯೂ ಮಿಡಿಯುತ್ತದೆ ಎಂದಂತಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌