ಆ್ಯಪ್ನಗರ

#MeToo ಅಭಿಯಾನ ದಾರಿತಪ್ಪುವ ಮುನ್ನ: ಪ್ರಕಾಶ್ ರೈ ಜಸ್ಟ್ ಆಸ್ಕಿಂಗ್

ಶ್ರುತಿ.. ಎಲ್ಲರೂ ದೂಷಿಸುವಂತೆ ಅವಕಾಶವಾದಿ ಹೆಣ್ಣು ಮಗಳಲ್ಲ. ಅಪ್ಪಟ ಪ್ರತಿಭಾವಂತೆ. ದಿಟ್ಟ ಹೆಣ್ಣು. ನಮ್ಮೆಲ್ಲರಂತೆ ಇವರನ್ನೂ ಬೆಳೆಸಿರುವುದು ನಮ್ಮ ಸಮಾಜವೇ.

Vijaya Karnataka Web 26 Oct 2018, 12:38 pm
ಅರ್ಜುನ್ ಸರ್ಜಾ ಮತ್ತು ಶ್ರುತಿ ಹರಿಹನ್ ನಡುವೆ ನಡೆಯುತ್ತಿರುವ #MeToo ಪ್ರಕರಣ ಸ್ಯಾಂಡಲ್‍ವುಡ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವನ್ನು ಒದಗಿಸಿದೆ. ನಟ ಪ್ರಕಾಶ್ ರೈ ಸಹ ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಇದೀಗ #justasking ಹ್ಯಾಶ್‍ಟ್ಯಾಗ್‌ನಡಿ ಇನ್ನೊಂದು ಪೋಸ್ಟ್ ಮಾಡಿದ್ದಾರೆ.
Vijaya Karnataka Web prakash-raj


"ಆಚಾರ..ವಿಚಾರಗಳಿಲ್ಲದ ನಾಲಿಗೆಗಳು..ತಮ್ಮ ನೀಚ ಬುದ್ದಿಯಿಂದ ತಮ್ಮ ತಮ್ಮ ಹಿತಾಸಕ್ತಿಗಳ ಬೇಳೆ ಬೇಯಿಸಿಕೊಳ್ಳುತ್ತಾ #ಮೀಟೂ ಅಭಿಯಾನವನ್ನು ದಾರಿ ತಪ್ಪಿಸುವ ಮುನ್ನ.." ಎಂದು ಒಂದು ಪೋಸ್ಟ್ ಹಾಕಿದ್ದಾರೆ ಅದರಲ್ಲಿ ತಮ್ಮ ಅನಿಸಿಕೆ, ಅಭಿಪ್ರಾಯ ಹಂಚಿಕೊಂಡಿದ್ದಾರೆ.

"ಅರ್ಜುನ್ ನನ್ನ ಬಹುಕಾಲದ ಗೆಳೆಯ. ಸಹಪ್ರಯಾಣಿಕ. ಆತನನ್ನು ನಾನು ತುಂಬಾ ಚೆನ್ನಾಗಿ, ನಿಮ್ಮೆಲ್ಲರಿಗಿಂತ ಆಂತರಿಕವಾಗಿ ಬಲ್ಲೆ. ನಾನು ಎಲ್ಲೂ ಆತನನ್ನು ಸಾರಾಸಗಟಾಗಿ ಅಪರಾಧಿ ಎನ್ನಲಿಲ್ಲ. ಯಾರ ಬಗ್ಗೆಯೂ ಅರ್ಥವಿಲ್ಲದ ದೂಷಣೆ ಮಾಡುವವನೂ ನಾನಲ್ಲ" ಎಂದಿದ್ದಾರೆ.


ಶ್ರುತಿ.. ಎಲ್ಲರೂ ದೂಷಿಸುವಂತೆ ಅವಕಾಶವಾದಿ ಹೆಣ್ಣು ಮಗಳಲ್ಲ. ಅಪ್ಪಟ ಪ್ರತಿಭಾವಂತೆ. ದಿಟ್ಟ ಹೆಣ್ಣು. ನಮ್ಮೆಲ್ಲರಂತೆ ಇವರನ್ನೂ ಬೆಳೆಸಿರುವುದು ನಮ್ಮ ಸಮಾಜವೇ. ಈ ಇಬ್ಬರೂ ಚಿತ್ರರಂಗದಲ್ಲಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಕೆಲಸ ಮಾಡಬೇಕಾದವರೂ, ಮಾಡಲು ಸಾಧ್ಯವಿರುವವರು.

ಈ ಸತ್ಯದ ಹಿನ್ನೆಲೆಯಲ್ಲಿ ನಾನು ತುಂಬಾ ಮಾರ್ಮಿಕವಾಗಿ ಕೇಳುತ್ತಿರುವ ಸೂಕ್ಷ್ಮತೆಯ ಪ್ರತಿಕ್ರಿಯೆ ಎಲ್ಲರಿಗೂ ಅರ್ಥವಾದರೆ ಒಳಿತು. ಪಕ್ಷಪಾತವಿಲ್ಲದೆ, ಪೂರ್ವಾಗ್ರಹಪೀಡಿತರಲ್ಲದ ಕೆಲವು ಹಿರಿಯರು ಇಬ್ಬರನ್ನೂ ಕರೆಸಿ ಕೂರಿಸಿ ತಕ್ಷಣವೆ ಇತ್ಯರ್ಥಿಸಿ" ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌