ಆ್ಯಪ್ನಗರ

ಅಭಿಮಾನಿಗಳಲ್ಲಿ ಕ್ಷಮೆ ಕೋರಿದ ರಾಧಿಕಾ ಪಂಡಿತ್

ಈ ವರ್ಷದ ಹುಟ್ಟುಹಬ್ಬಕ್ಕೆ ರಾಧಿಕಾ ಬೆಂಗಳೂರಿನಲ್ಲಿ ಇಲ್ಲ. ಈ ಬಗ್ಗೆ ವೀಡಿಯೋ ಒಂದನ್ನು ಹಂಚಿಕೊಂಡಿರುವ ರಾಧಿಕಾ ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ. ಹುಟ್ಟುಹಬ್ಬ ದಿನ ಬೆಂಗಳೂರಿನಲ್ಲಿ ಇರಬೇಕು ಎಂದುಕೊಂಡಿದ್ದೆ, ಆದರೆ ಸಾಧ್ಯವಾಗಿಲ್ಲ. ಬೆಂಗಳೂರಿಗೆ ಹಿಂತಿರುಗಿದ ಬಳಿಕ ಅಬಿಮಾನಿಗಳನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.

Vijaya Karnataka Web 7 Mar 2019, 2:48 pm
ಇಂದು (ಮಾರ್ಚ್ 7) ರಾಧಿಕಾ ಪಂಡಿತ್ ಹುಟ್ಟುಹಬ್ಬ. ಈ ವಿಶೇಷ ದಿನ ಅಭಿಮಾನಿಗಳು ರಾಧಿಕಾರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಅಭಿಮಾನ ತಾರೆಯನ್ನು ವೈಯಕ್ತಿಕವಾಗಿ ಕಂಡು ಜನ್ಮ ದಿನ ಶುಭಾಶಯ ಕೋರುವುದು ವಾಡಿಕೆ. ರಾಧಿಕಾ ಸಹ ತಮ್ಮ ಅಭಿಮಾನಿಗಳಿಗೆ ನಿರಾಸೆಪಡಿಸಿದ್ದಿಲ್ಲ. ಆದರೆ ಈ ಬಾರಿಯ ಹುಟ್ಟುಹಬ್ಬಕ್ಕೆ ಅವರು ಅಭಿಮಾನಿಗಳಿಗೆ ಸಿಗುತ್ತಿಲ್ಲ.
Vijaya Karnataka Web radhika-pandit1


ಕಾರಣ ಈ ವರ್ಷದ ಹುಟ್ಟುಹಬ್ಬಕ್ಕೆ ರಾಧಿಕಾ ಬೆಂಗಳೂರಿನಲ್ಲಿ ಇಲ್ಲ. ಈ ಬಗ್ಗೆ ವೀಡಿಯೋ ಒಂದನ್ನು ಹಂಚಿಕೊಂಡಿರುವ ರಾಧಿಕಾ ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ. ಹುಟ್ಟುಹಬ್ಬ ದಿನ ಬೆಂಗಳೂರಿನಲ್ಲಿ ಇರಬೇಕು ಎಂದುಕೊಂಡಿದ್ದೆ, ಆದರೆ ಸಾಧ್ಯವಾಗಿಲ್ಲ. ಬೆಂಗಳೂರಿಗೆ ಹಿಂತಿರುಗಿದ ಬಳಿಕ ಅಬಿಮಾನಿಗಳನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.

"ಪ್ರತಿ ವರ್ಷ ನನ್ನ ಹುಟ್ಟುಹಬ್ಬಕ್ಕೆ ಊರು ಊರಿಂದ ಬಂದು ನನ್ನ ಜತೆಗೆ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡ್ತಿದ್ರಿ. ಆದರೆ ಈ ವರ್ಷ ನಾನು ಬೆಂಗಳೂರಿನಲ್ಲಿ ಇರಲ್ಲ. ಹುಟ್ಟುಹಬ್ಬಕ್ಕೆ ಬರಬೇಕು ಎಂದು ತುಂಬಾ ಪ್ರಯತ್ನ ಪಟ್ಟೆ. ಆದರೆ ಕೆಲವು ಕಾರಣಗಳಿಂದ ಬರಲು ಆಗುತ್ತಿಲ್ಲ. ಸೋ ಪ್ಲೀಸ್ ಪ್ಲೀಸ್ ಬೇಜಾರ್ ಮಾಡಿಕೊಳ್ಳಬೇಡಿ. ವಾಪಸ್ ಬಂದ ಬಳಿಕ ಎಲ್ಲರನ್ನೂ ಭೇಟಿ ಮಾಡ್ತೀನಿ. ಇದೇ ರೀತಿ ನಿಮ್ಮ ಪ್ರೀತಿ ಹಾಗೂ ಆಶೀರ್ವಾದ ಸದಾ ನನ್ನ ಮೇಲೆ ಇರಲಿ. ನಿಮ್ಮೆಲ್ಲಾ ಸಂದೇಶಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಎದುರು ನೋಡುತ್ತಿರುತ್ತೇನೆ" ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌