ಆ್ಯಪ್ನಗರ

#JusticeForMadhu: ಮಧು ಸಾವು ಖಂಡಿಸಿ ಯೋಗರಾಜ್ ಭಟ್ ಪತ್ರ

ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ‌. ಬಂಧಿತನನ್ನು ಸುದರ್ಶನ ಯಾದವ್ (26) ಎಂದು ಗುರುತಿಸಲಾಗಿದೆ. ಬಂಧಿತನ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

Vijaya Karnataka Web 20 Apr 2019, 5:28 pm
ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಸಾವು ಖಂಡಿಸಿ ನಿರ್ದೇಶಕ ಯೋಗರಾಜ್ ಭಟ್ ಅವರು ಮನಮಿಡಿಯುವ ಪತ್ರ ಬರೆದಿದ್ದಾರೆ. ರಾಯಚೂರಿನ ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ 'ಮಧು' ಸಾವು 'ಅತ್ಯಾಚಾರ ಹಾಗೂ ಅಮಾನುಷ ಹತ್ಯೆ' ಎನ್ನಲಾಗಿದ್ದು, ಇದನ್ನು ಖಂಡಿಸಿ ಸ್ಯಾಂಡಲ್‌ವುಡ್ ನಿರ್ದೇಶಕರಾದ ಯೋಗರಾಜ್ ಭಟ್ ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಸುದೀರ್ಘ ಪತ್ರವೊಂದನ್ನು ಬರೆದು ಈ ಹೇಯ ಕೃತ್ಯಕ್ಕೆ ಕಂಬನಿ ಮಿಡಿದಿದ್ದಾರೆ.
Vijaya Karnataka Web yogarajbhat2004


ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಸಾವು ಖಂಡಿಸಿ 'ಕರ್ನಾಟಕ ಫಿಲ್ಮ್ ಚೇಂಬರ್'ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಭಾಮಾ ಹರೀಶ್, ಶಿಲ್ಪಾ ಶ್ರೀನಿವಾಸ್, ನಿರ್ಮಾಪಕರು ಹಾಗೂ ಸಿಂಡಿಕೇಟ್ ಸದಸ್ಯರಾದ ವಿಜಯ್ ಕುಮಾರ್ ಸಿಂಹ, ನಿರ್ಮಾಪಕರುಗಳಾದ ಆಸ್ಕರ್ ಕೃಷ್ಣ, ಡಾಕ್ಟರ್ ಸುನಿಲ್ ಕುಮಾರ್, ದಶಾವರ ಚಂದ್ರು, ಕಲಾವಿದರುಗಳಾದ ಸಂತೋಷ್, ಶರಣ್ಯ, ವಿಕ್ಟರಿ ವಾಸು ಮುಂತಾದವರು ಭಾಗವಹಿಸಿದ್ದರು. ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ಆಗ್ರಹಿಸಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಿನ್ನೆ ಸಂಜೆ ಕ್ಯಾಂಡಲ್ ಹಚ್ಚುವ ಮೂಲಕ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ‌. ಬಂಧಿತನನ್ನು ಸುದರ್ಶನ ಯಾದವ್ (26) ಎಂದು ಗುರುತಿಸಲಾಗಿದೆ. ಬಂಧಿತನ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದು, ಮತ್ತೊಂದೆಡೆ ಮೃತಳ ಶವದ ಮರಣೋತ್ತರ ಹೆಚ್ಚುವರಿ ಪರೀಕ್ಷೆಗೆ ಕಲಬುರಗಿಗೆ ದೇಹದ ಕೆಲ ಭಾಗದ ಮಾದರಿ ಕಳಿಸಿಕೊಡಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿಯ ಶವ ಅನುಮಾನಾಸ್ಪದ ರೀತಿಯಲ್ಲಿ, ನಗರದ ಉಸುಕಿನ ಹುನುಮಾನ್ ದೇವಸ್ಥಾನದ ಬಳಿಯ ಗುಡ್ಡದಲ್ಲಿ ಸುಟ್ಟ ಗಾಯಗಳಿಂದ ಕೂಡಿದ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪೊಲೀಸರಿಗೆ ಪತ್ತೆಯಾಗಿತ್ತು. ಪೋಲೀಸರು ಇದನ್ನು ಆತ್ಮಹತ್ಯೆ ಕೇಸ್ ಎಂದು ದಾಖಲಿಸಿಕೊಂಡಿದ್ದು ಮೃತಳ ಪಾಲಕರು ಇದೊಂದು ಕೊಲೆ ಎಂದು ನೇತಾಜಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ವಿಚಾರಣೆ ಚುರುಕುಗೊಳಿಸಿರುವ ಪೊಲೀಸರು ಗುರುವಾರ ರಾತ್ರಿ ಶಂಕಿತ ಆರೋಪಿ ಸುದರ್ಶನ ಯಾದವ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌