ಆ್ಯಪ್ನಗರ

ಅಭಿಮಾನಿಗಳನ್ನು ನಿರಾಸೆಗೊಳಿಸಿದ ರಜನಿ

ನಮ್ಮ ತಲೈವ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಹೇಳಬೇಕು ಎಂದು ಬಂದಿದ್ದ ನೂರಾರು ಅಭಿಮಾನಿಗಳಿಗೆ ತಲೈವ ದರ್ಶನ ನೀಡದಿರುವುದರಿಂದ ನಿರಾಸೆ ಉಂಟಾಗಿದೆ.

Vijaya Karnataka Web 12 Dec 2017, 2:52 pm
ಚೆನ್ನೈ: ನಮ್ಮ ತಲೈವ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಹೇಳಬೇಕು ಎಂದು ದೂರದ ಊರುಗಳಿಂದ ಬಂದಿದ್ದ ನೂರಾರು ಅಭಿಮಾನಿಗಳಿಗೆ ತಲೈವ ದರ್ಶನ ನೀಡದಿರುವುದರಿಂದ ನಿರಾಸೆ ಉಂಟಾಗಿದೆ.
Vijaya Karnataka Web rajinikanth disappoints fans on his birthday
ಅಭಿಮಾನಿಗಳನ್ನು ನಿರಾಸೆಗೊಳಿಸಿದ ರಜನಿ


ರಜನಿಕಾಂತ್ 67ನೇ ಹುಟ್ಟುಹಬ್ಬದಂದು ಅವರ ಪೋಯೆಸ್‌ ಗಾರ್ಡನ್‌ ನಿವಾಸಕ್ಕೆ ಬಂದಿದ್ದ ಅಭಿಮಾನಿಗಳನ್ನು ಪೊಲೀಸರು ಹಿಂತಿರುಗಿಸಿ ಕಳುಹಿಸಿದ್ದಾರೆ. ರಜನಿಕಾಂತ್ ಮುಂಜಾನೆಯೆ ಕೇಲಂಬಾಕ್ಕಂ ಫಾರ್ಮ್‌ಹೌಸ್‌ಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದರು. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹುಟ್ಟುಹಬ್ಬಕ್ಕೆ ಅಭಿಮಾನಿಗಳನ್ನು ಭೇಟಿ ಮಾಡುತ್ತಿಲ್ಲವೆಂದು ತಿಳಿಸಿದ್ದರು.

ಒಂದಿಷ್ಟು ಅಭಿಮಾನಿಗಳು ರಜನಿಕಾಂತ್‌ ಅವರ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕಲ್ಯಾಣ ಮಂಟಪದ ಹೊರಗಡೆ ರಜನಿಕಾಂತ್‌ ರಾಜಕೀಯಕ್ಕೆ ಬರಬೇಕೆಂದು ಕೋರಿ ಬರೆದಿರುವ ಬ್ಯಾನರ್‌ಗಳು ರಾರಾಜಿಸುತ್ತಿದ್ದೆವು.

ರಜನಿಕಾಂತ್‌ ಜನವರಿಯಲ್ಲಿ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ ಎಂದು ಅವರ ಸಹೋದರ ತಿಳಿಸಿದ್ದಾರೆ.

ರಜನಿಕಾಂತ್‌ ಅಭಿನಯದ ಬಹುನಿರೀಕ್ಷಿತ ಚಿತ್ರ 2018ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗಲಿದ್ದು, 'ಕಾಲ' ಚಿತ್ರದ ಶೂಟಿಂಗ್ ಮುಗಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌