ಆ್ಯಪ್ನಗರ

ಮಂತ್ರಾಲಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಭೇಟಿ

ಆಂಧ್ರಪ್ರದೇಶದ ಕರ್ನೂರು ಜಿಲ್ಲೆಯ ವಿಶ್ವವಿಖ್ಯಾತ ಪುಣ್ಯಕ್ಷೇತ್ರ ಮಂತ್ರಾಲಯಕ್ಕೆ ಮಂಗಳವಾರ (ನ.21) ಮುಂಜಾನೆ ಸೂಪರ್ ಸ್ಟಾರ್ ರಜನಿಕಾಂತ್ ಭೇಟಿ ನೀಡಿ ರಾಯರ ದರ್ಶನ ಭಾಗ್ಯ ಪಡೆದರು.

Vijaya Karnataka Web 21 Nov 2017, 2:24 pm
ಆಂಧ್ರಪ್ರದೇಶದ ಕರ್ನೂರು ಜಿಲ್ಲೆಯ ವಿಶ್ವವಿಖ್ಯಾತ ಪುಣ್ಯಕ್ಷೇತ್ರ ಮಂತ್ರಾಲಯಕ್ಕೆ ಮಂಗಳವಾರ (ನ.21) ಮುಂಜಾನೆ ಸೂಪರ್ ಸ್ಟಾರ್ ರಜನಿಕಾಂತ್ ಭೇಟಿ ನೀಡಿ ರಾಯರ ದರ್ಶನ ಭಾಗ್ಯ ಪಡೆದರು. ರಜನಿಕಾಂತ್ ಅಭಿನಯದ '2.0' ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವರು ರಾಯರ ದರ್ಶನ ಪಡೆದಿದ್ದಾರೆ.
Vijaya Karnataka Web rajinikanth visits mantralaya
ಮಂತ್ರಾಲಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಭೇಟಿ


ಮೊದಲು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿದ ಬಳಿಕ ಗ್ರಾಮದೇವತೆ ಮಂಚಾಲಮ್ಮ, ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ದರ್ಶನ ಪಡೆದರು. ಮಂತ್ರಾಲಯದ ಪೀಠಾಧಿಪತಿ ಸುಬುಧೀಂದ್ರ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು.

ಮಂತ್ರಾಲಯಕ್ಕೆ ಭೇಟಿ ನೀಡುತ್ತಿರುವುದಾಗಿ ರಜನಿಕಾಂತ್ ಮೊದಲೇ ತಿಳಿಸದೆ ನೇರವಾಗಿ ಮಠಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ಸ್ನಾನ ಮಾಡಲು ತುಂಗಭದ್ರಾ ನದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕೆಲವು ಅಭಿಮಾನಿಗಳು ಅವರನ್ನು ನೋಡಿ ಶಾಕ್ ಆಗಿದ್ದರು. ಆದರೆ ಅಧಿಕಾರಿಗಳು ಯಾರೋ ತಮಿಳುನಾಡಿನ ಸಚಿವರು ಬಂದಿದ್ದಾರೆ ಎಂದು ಹೇಳಿ ಅಭಿಮಾನಿಗಳನ್ನು ಸಾಗಹಾಕಲು ನೋಡಿದ್ದಾರೆ.



ಸ್ನಾನದ ಬಳಿಕ ಅವರು ಮಠಕ್ಕೆ ಆಗಮಿಸುತ್ತಿದ್ದಂತೆ ರಜನಿಕಾಂತ್‌ರನ್ನು ಗುರುತಿಸಿದ ಅಭಿಮಾನಿಗಳು ಅವರ ಜತೆ ಫೋಟೋ ತೆಗೆದುಕೊಳ್ಳಲು, ಕರಚಾಲನೆ ಮಾಡಲು ಹಾತೊರೆಯುತ್ತಿದ್ದರು. ರಜನಿಕಾಂತ್ ಆಗಮನದಿಂದ ಮಠದಲ್ಲಿ ಅಭಿಮಾನಿಗಳ ಗದ್ದಲ ಜೋರಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌