ಆ್ಯಪ್ನಗರ

Rashmika Mandanna: ಫೇಸ್‌ಬುಕ್‌ನಲ್ಲಿ ಮೌನ ಮುರಿದ ರಶ್ಮಿಕಾ ಮಂದಣ್ಣ

ಕಿರಿಕ್ ಪಾರ್ಟಿ' ಬೆಡಗಿ ರಶ್ಮಿಕಾ ಮಂದಣ್ಣ ಕೊನೆಗೂ ಮೌನ ಮುರಿದಿದ್ದಾರೆ. ತನ್ನ ವಿರುದ್ಧ ಹರಿದಾಡುತ್ತಿರುವ ಗಾಸಿಪ್ ಸುದ್ದಿಗಳು, ಕಥೆಗಳು, ಲೇಖನಗಳ ಬಗ್ಗೆ ಫೇಸ್‌ಬುಕ್‌ನಲ್ಲಿ ಮೌನ ಮುರಿದಿದ್ದಾರೆ. ಟ್ರೋಲ್ ಮಾಡುತ್ತಿದ್ದವರಿಗೂ ಉತ್ತರ ನೀಡಿದ್ದಾರೆ ರಶ್ಮಿಕಾ ಮಂದಣ್ಣ.

Vijaya Karnataka Web 18 Sep 2018, 9:59 am
ಕಿರಿಕ್ ಪಾರ್ಟಿ' ಬೆಡಗಿ ರಶ್ಮಿಕಾ ಮಂದಣ್ಣ ಕೊನೆಗೂ ಮೌನ ಮುರಿದಿದ್ದಾರೆ. ತನ್ನ ವಿರುದ್ಧ ಹರಿದಾಡುತ್ತಿರುವ ಗಾಸಿಪ್ ಸುದ್ದಿಗಳು, ಲೇಖನಗಳ ಬಗ್ಗೆ ಫೇಸ್‌ಬುಕ್‌ನಲ್ಲಿ ಮೌನ ಮುರಿದಿದ್ದಾರೆ. ಟ್ರೋಲ್ ಮಾಡುತ್ತಿದ್ದವರಿಗೂ ಉತ್ತರ ನೀಡಿದ್ದಾರೆ ರಶ್ಮಿಕಾ ಮಂದಣ್ಣ.
Vijaya Karnataka Web rashmika-mandanna


ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ರಶ್ಮಿಕಾ, "ತುಂಬಾ ಸಮಯದಿಂದ ಮೌನವಹಿಸಿದ್ದಕ್ಕೆ ಕ್ಷಮೆ ಇರಲಿ. ನನ್ನ ಬಗ್ಗೆ ಸಾಕಷ್ಟು ಕಥೆಗಳು, ಲೇಖನಗಳು, ಕಾಮೆಂಟ್ಸ್ ಮತ್ತು ಟ್ರೋಲ್ಸ್ ಬರುತ್ತಿವೆ. ಇದರಿದ ನನಗೆ ಸಾಕಷ್ಟು ತೊಂದರೆಯಾಗಿದೆ. ನಮ್ಮನ್ನು ನನ್ನ ಪಾಡಿಗೆ ಕೆಲಸ ಮಾಡಲು ಬಿಡಿ. ಹಾಗಂತ ನಾನು ನಿಮ್ಮನ್ನು ದೂರಲ್ಲ. ಪ್ರತಿಯೊಂದು ನಾಣ್ಯಕ್ಕೂ ಎರಡು ಮುಖಗಳಿರುವಂತೆ ಪ್ರತಿ ಕಥೆಗೂ ಎರಡು ಆಯಾಮಗಳಿತ್ತವೆ. ನಾನು ಇಲ್ಲಿ ಯಾವುದನ್ನೂ ಸಮರ್ಥಿಸಿಕೊಳ್ಳುತ್ತಿಲ್ಲ. ನಾನು ಕನ್ನಡ ಚಿತ್ರಗಳಲ್ಲೇ ಮುಂದುವರೆಯುತ್ತೇನೆ. ಹಾಗೆಯೇ ಅದು ಯಾವುದೇ ಭಾಷೆಯಾಗಲಿ, ಯಾವುದೇ ಚಿತ್ರೋದ್ಯಮವಾಗಲಿ, ಅತ್ಯುತ್ತಮವಾದದ್ದನ್ನೇ ನೀಡುತ್ತೇನೆ" ಎಂದಿದ್ದಾರೆ ರಶ್ಮಿಕಾ ಮಂದಣ್ಣ.


ರಶ್ಮಿಕಾ ಮಂದಣ್ಣ ಸ್ಯಾಂಡಲ್‌ವುಡ್ ತೊರೆಯುತ್ತಾರೆ, ಇನ್ನು ಅವರು ಟಾಲಿವುಡ್‌ನಲ್ಲೇ ನೆಲೆ ನಿಲ್ಲಲಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಹರಿದಾಡಿದ್ದವು. ಇದಕ್ಕೆ ಸಂಬಂಧಿಸಿದಂತೆ ರಶ್ಮಿಕಾರನ್ನು ಟ್ರೋಲ್ ಸಹ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಫೇಸ್‍ಬುಕ್‌ನಲ್ಲಿ ತನ್ನ ವಿರುದ್ಧದ ಆಪಾದನೆಗಳನ್ನೆಲ್ಲಾ ತಳ್ಳಿಹಾಕಿದ್ದಾರೆ. ತಾನು ಸ್ಯಾಂಡಲ್‍ವುಡ್ ಬಿಡಲ್ಲ. ಇಲ್ಲೇ ಉಳಿಯುತ್ತೇನೆ ಎಂದು ಸ್ಪಷ್ಪಪಡಿಸಿದ್ದಾರೆ.


ಇತ್ತೀಚೆಗಷ್ಟೇ ಕನ್ನಡದ 'ವೃತ್ರ' ಚಿತ್ರದಿಂದ ಹೊರಬಿದ್ದ ಬಗ್ಗೆಯೂ ರಶ್ಮಿಕಾ ಬರೆದುಕೊಂಡಿದ್ದರು. ಕಾರಣಾಂತರಗಳಿಂದ ಆ ಚಿತ್ರದಲ್ಲಿ ಅಭಿನಯಿಸಲು ಸಾಧ್ಯವಾಗುತ್ತಿಲ್ಲ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಪೋಸ್ಟ್ ಮಾಡಿದ್ದರು. ಸದ್ಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜತೆಗೆ ಯಜಮಾನ ಚಿತ್ರದಲ್ಲಿ ರಶ್ಮಿಕಾ ಅಭಿನಯಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌