ಯಶ್ಗೆ ಮಿಸ್ಟರ್ ಷೋ ಆಫ್ ಎಂದು ಕರೆಯುವ ಮೂಲಕ ರಾಕಿಂಗ್ ಸ್ಟಾರ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ರಶ್ಮಿಕಾ ಮಂದಣ್ಣ, ಇದೀಗ ಮೌನ ಮುರಿದಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಬಿಡುಗಡೆಗೂ ಮುನ್ನ ನೀಡಿದ ಸಂದರ್ಶನವನ್ನು ಈಗ ಬಳಸಿಕೊಂಡು ಇಲ್ಲ-ಸಲ್ಲದ ವಿವಾದವನ್ನು ಮಾಧ್ಯಮಗಳು ಹುಟ್ಟುಹಾಕುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಸಂದರ್ಶನವೊಂದರಲ್ಲಿ ರಶ್ಮಿಕಾ ಮಂದಣ್ಣ ಯಶ್ ಅವರಿಗೆ ಮಿಸ್ಟರ್ ಷೋ ಆಫ್ ಎಂಬ ಬಿರುದು ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತು ಯಶ್ ಅಭಿಮಾನಿಗಳು ಅಂತರ್ಜಾಲದಲ್ಲಿ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿ, ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನಟ ಯಶ್ ಟ್ವಿಟ್ಟರ್ ಮತ್ತು ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸುವ ಮೂಲಕ ಇದನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ತಮ್ಮ ಅಭಿಮಾನಿಗಳಿಗೆ ವಿನಂತಿಸಿಕೊಂಡಿದ್ದಾರೆ.
ಇದೀಗ ರಶ್ಮಿಕಾ ಮಂದಣ್ಣ ಸಹ ತಮ್ಮ ಫೇಸ್ಬುಕ್ನಲ್ಲಿ ವಿವಾದದ ಕುರಿತು ಪೋಸ್ಟ್ ಮಾಡಿದ್ದಾರೆ. '7 ತಿಂಗಳ ಹಿಂದೆ ನಡೆದ ಒಂದು ಟಾಕ್ ಶೋ, ಇದೀಗ ಒಮ್ಮೆಲೆ ಸುದ್ದಿಯಾಗುತ್ತಿರುವುದು ನಿಜಕ್ಕೂ ಮನಸ್ಸಿಗೆ ಬೇಸರ ತಂದಿದೆ. ಕಿರಿಕ್ ಪಾರ್ಟಿ ಚಿತ್ರದ ಬಿಡುಗಡೆ ಸಂದರ್ಭದಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ಈ ಕಾರ್ಯಕ್ರಮವನ್ನು ಇತ್ತೀಚೆಗೆ ಮತ್ತೊಮ್ಮೆ ಟೆಲಿಕಾಸ್ಟ್ ಮಾಡಲಾಗಿದೆ.
ಉದ್ದೇಶಪೂರ್ವಕವಾಗಿ ನಾನು ಯಶ್ ಬಗ್ಗೆ ಈ ತರಹ ಮಾತನಾಡಿಲ್ಲ. ರ್ಯಾಪಿಡ್ ಫೈರ್ ಗೇಮ್ನ ಒಂದು ಭಾಗವಾಗಿ ಹೇಳಿದ್ದೇನೆಯೇ ಹೊರತು ಬೇರೆ ಯಾವುದೇ ಕಾರಣಕ್ಕೂ ಅಲ್ಲ. ನಿರ್ದಿಷ್ಟ ಪ್ರಶ್ನೆಗೆ ಉತ್ತರಿಸುವುದು ಅನಿವಾರ್ಯ ವಾಗಿತ್ತು. ನನ್ನಿಂದ ನಿಮ್ಮ ಭಾವನೆಗಳಿಗೆ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ. ಮಾಧ್ಯಮಗಳು ಇದನ್ನು ಇಲ್ಲಿಗೆ ಬಿಟ್ಟು ಬಿಡಿ' ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.
'ನನಗೆ ಯಶ್ ಬಗ್ಗೆ ಗೌರವವಿದೆ. ಹಲವಾರು ಸಂದರ್ಭಗಳಲ್ಲಿ ನಾನು ಯಶ್ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದೇನೆ. ನಿಮ್ಮಂತೆಯೇ ನಾನು ಸಹ ಅವರ ಪ್ರತಿಭೆ ಮತ್ತು ಕೆಲಸಗಳಿಂದ ಸ್ಪೂರ್ತಿಗೊಂಡಿದ್ದೇನೆ. ಅವರ ಸಂತು ಸ್ಟ್ರೈಟ್ ಫಾರ್ವರ್ಡ್ ಚಿತ್ರವನ್ನು ತುಂಬ ಎಂಜಾಯ್ ಮಾಡಿದ್ದೇನೆ. ಆದರೆ ಮಾಧ್ಯಮ ಅದನ್ನು ನಿರ್ಲಕ್ಷಿಸಿದೆ,' ಎಂದು ಹೇಳಿದ್ದಾರೆ.
ಈ ಹಿಂದೆ ಸಂದರ್ಶನವೊಂದರಲ್ಲಿ ರಶ್ಮಿಕಾ ಮಂದಣ್ಣ ಯಶ್ ಅವರಿಗೆ ಮಿಸ್ಟರ್ ಷೋ ಆಫ್ ಎಂಬ ಬಿರುದು ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತು ಯಶ್ ಅಭಿಮಾನಿಗಳು ಅಂತರ್ಜಾಲದಲ್ಲಿ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿ, ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನಟ ಯಶ್ ಟ್ವಿಟ್ಟರ್ ಮತ್ತು ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸುವ ಮೂಲಕ ಇದನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ತಮ್ಮ ಅಭಿಮಾನಿಗಳಿಗೆ ವಿನಂತಿಸಿಕೊಂಡಿದ್ದಾರೆ.
ಇದೀಗ ರಶ್ಮಿಕಾ ಮಂದಣ್ಣ ಸಹ ತಮ್ಮ ಫೇಸ್ಬುಕ್ನಲ್ಲಿ ವಿವಾದದ ಕುರಿತು ಪೋಸ್ಟ್ ಮಾಡಿದ್ದಾರೆ. '7 ತಿಂಗಳ ಹಿಂದೆ ನಡೆದ ಒಂದು ಟಾಕ್ ಶೋ, ಇದೀಗ ಒಮ್ಮೆಲೆ ಸುದ್ದಿಯಾಗುತ್ತಿರುವುದು ನಿಜಕ್ಕೂ ಮನಸ್ಸಿಗೆ ಬೇಸರ ತಂದಿದೆ. ಕಿರಿಕ್ ಪಾರ್ಟಿ ಚಿತ್ರದ ಬಿಡುಗಡೆ ಸಂದರ್ಭದಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ಈ ಕಾರ್ಯಕ್ರಮವನ್ನು ಇತ್ತೀಚೆಗೆ ಮತ್ತೊಮ್ಮೆ ಟೆಲಿಕಾಸ್ಟ್ ಮಾಡಲಾಗಿದೆ.
ಉದ್ದೇಶಪೂರ್ವಕವಾಗಿ ನಾನು ಯಶ್ ಬಗ್ಗೆ ಈ ತರಹ ಮಾತನಾಡಿಲ್ಲ. ರ್ಯಾಪಿಡ್ ಫೈರ್ ಗೇಮ್ನ ಒಂದು ಭಾಗವಾಗಿ ಹೇಳಿದ್ದೇನೆಯೇ ಹೊರತು ಬೇರೆ ಯಾವುದೇ ಕಾರಣಕ್ಕೂ ಅಲ್ಲ. ನಿರ್ದಿಷ್ಟ ಪ್ರಶ್ನೆಗೆ ಉತ್ತರಿಸುವುದು ಅನಿವಾರ್ಯ ವಾಗಿತ್ತು. ನನ್ನಿಂದ ನಿಮ್ಮ ಭಾವನೆಗಳಿಗೆ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ. ಮಾಧ್ಯಮಗಳು ಇದನ್ನು ಇಲ್ಲಿಗೆ ಬಿಟ್ಟು ಬಿಡಿ' ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.
'ನನಗೆ ಯಶ್ ಬಗ್ಗೆ ಗೌರವವಿದೆ. ಹಲವಾರು ಸಂದರ್ಭಗಳಲ್ಲಿ ನಾನು ಯಶ್ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದೇನೆ. ನಿಮ್ಮಂತೆಯೇ ನಾನು ಸಹ ಅವರ ಪ್ರತಿಭೆ ಮತ್ತು ಕೆಲಸಗಳಿಂದ ಸ್ಪೂರ್ತಿಗೊಂಡಿದ್ದೇನೆ. ಅವರ ಸಂತು ಸ್ಟ್ರೈಟ್ ಫಾರ್ವರ್ಡ್ ಚಿತ್ರವನ್ನು ತುಂಬ ಎಂಜಾಯ್ ಮಾಡಿದ್ದೇನೆ. ಆದರೆ ಮಾಧ್ಯಮ ಅದನ್ನು ನಿರ್ಲಕ್ಷಿಸಿದೆ,' ಎಂದು ಹೇಳಿದ್ದಾರೆ.