ಅಪೂರ್ವ ಚಿತ್ರಕ್ಕೆ ಪ್ರೇಕ್ಷಕರು ಹಾಗೂ ಸಿನಿ ವಿಮರ್ಶಕರಿಂದ ಮಿಶ್ರಪ್ರತಿಕ್ರಿಯೆ ಬಂದ ಬೆನ್ನಲ್ಲೇ ಕೆಲವರು ಹಿರಿಯ ನಟನನ್ನು ವೈಯಕ್ತಿಕವಾಗಿ ನಿಂದಿಸಿ ಕೊಂಕು ನುಡಿಯುತ್ತಿರುವುದಕ್ಕೆ ಹಿರಿಯ ನಿರ್ದೇಶಕ ಯೋಗರಾಜ್ ಭಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಬಗ್ಗೆ ಟೀಕೆ ಟಿಪ್ಪಣಿ ಮಾಡುವುದನ್ನು ಬಿಟ್ಟು ರವಿಚಂದ್ರನ್ ಬಗ್ಗೆ ಅಪಹಾಸ್ಯ ಮಾಡಿ ಕೊಂಕು ಮಾತನಾಡುವುದು ತಪ್ಪು ಎಂದು ಅವರು ಹೇಳಿದ್ದಾರೆ ಎಂದು ಅವರು ಬರೆದಿರುವ ಬಹಿರಂಗ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರತಿಯೊಂದು ಚಿತ್ರವೂ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂದು ಹೇಳಲಾಗದು. ಇಷ್ಟವಾಗಲಿಲ್ಲ ಎಂದು ಚಿತ್ರವನ್ನು ತಿರಸ್ಕರಿಸಬಹುದು. ಇನ್ನೂ ಚೆನ್ನಾಗಿ ಮಾಡಬಹುದಿತ್ತು ಎಂದು ಹೇಳಬಹುದು. ಅದರ ಹೊರತಾಗಿ ಹಿರಿಯ ನಟನನ್ನು ವೈಯಕ್ತಿಕವಾಗಿ ನಿಂದಿಸುವುದು ಸರಿಯಲ್ಲ ಎಂದು ಭಟ್ಟರು ಬೇಸರ ವ್ಯಕ್ತಪಡಿಸಿದ್ದಾರೆ.