ಆ್ಯಪ್ನಗರ

ತಲ್ಲೂರು ಕೆರೆಗೆ ಬಾಗಿನ ಅರ್ಪಿಸಿದ ಯಶ್‌ ದಂಪತಿ

ರಾಕಿಂಗ್‌ ಸ್ಟಾರ್‌ ಯಶ್‌ ತೆರೆ ಮೇಲಷ್ಟೇ ನಾಯಕನಲ್ಲ, ಯಶೋಮಾರ್ಗವನ್ನು ಹುಟ್ಟುಹಾಕಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ.

Vijaya Karnataka Web 27 Nov 2017, 1:32 pm
ಕೊಪ್ಪಳ : ರಾಕಿಂಗ್‌ ಸ್ಟಾರ್‌ ಯಶ್‌ ತೆರೆ ಮೇಲಷ್ಟೇ ನಾಯಕನಾಗಿ ಮೆರೆಯುತ್ತಿಲ್ಲ, ಯಶೋಮಾರ್ಗವನ್ನು ಹುಟ್ಟುಹಾಕಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಅದರಲ್ಲಿ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆಯ ಹೂಳೆತ್ತುವ ಕಾಮಗಾರಿಯೂ ಒಂದು.
Vijaya Karnataka Web rocking star yash and radhika visited tallur lake
ತಲ್ಲೂರು ಕೆರೆಗೆ ಬಾಗಿನ ಅರ್ಪಿಸಿದ ಯಶ್‌ ದಂಪತಿ


ಯಶೋಮಾರ್ಗ ಫೌಂಡೇಶನ್‌ ಮೂಲಕ ಫೆಬ್ರವರಿ 28ರಂದು 1 ಕೋಟಿ ವೆಚ್ಚದಲ್ಲಿ ಈ ಕೆರೆಯ ಹೂಳು ತೆಗೆಯುವ ಕಾಮಗಾರಿಗೆ ಚಾಲನೆ ನೀಡಿದ್ದರು ಯಶ್‌. ಇದಾದ ಕೆಲವೇ ದಿನಗಳ ಬಳಿಕ ಕೆರೆಯಲ್ಲಿ ಅಂತರ್ಜಲ ಉಕ್ಕಿ ಹರಿದಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಕೆರೆ ಮತ್ತಷ್ಟು ತುಂಬಿರುವುದು ಗ್ರಾಮಸ್ಥರ ಮೊಗದಲ್ಲಿ ಸಂತಸ ಮೂಡಿಸಿದೆ.



ಈ ಭಾಗದ ಜನರ ಪಾಲಿಗೆ ರಾಕಿಂಗ್‌ ಸ್ಟಾರ್‌ ಯಶ್‌ ಒಬ್ಬ ಭಗೀರಥನಾಗಿರುವುದು ಸುಳ್ಳಲ್ಲ. ನೀರಿನಿಂದ ತುಂಬಿಕೊಂಡಿರುವ ತಲ್ಲೂರು ಕೆರೆಗೆ ಯಶ್‌ ಹಾಗೂ ಪತ್ನಿ ರಾಧಿಕಾ ಪಂಡಿತ್‌ ಸೋಮವಾರ ಬಾಗಿನ ಅರ್ಪಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಕೆರೆ ವೀಕ್ಷಿಸಿದ ಯಶ್‌-ರಾಧಿಕಾ, ನೆರೆದಿದ್ದ ಸಾವಿರಾರು ಅಭಿಮಾನಿಗಳತ್ತ ಕೈ ಬೀಸಿದರು. ಸ್ಯಾಂಡಲ್‌ವುಡ್‌ನ ಮಿಸ್ಟರ್‌ ಅಂಡ್‌ ಮಿಸಸ್‌ ರಾಮಾಚಾರಿಯನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌