ಆ್ಯಪ್ನಗರ

ಹಾಸ್ಯನಟ ದೊಡ್ಡಣ್ಣ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹಾಸ್ಯನಟ ದೊಡ್ಡಣ್ಣ ಅಸ್ವಸ್ಥಗೊಂಡಿದ್ದು ರಾಯಚೂರಿನ ಶಕ್ತಿನಗರದ ಆರ್‌ಟಿಪಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Vijaya Karnataka Web 4 Sep 2018, 4:13 pm
ಹಾಸ್ಯನಟ ದೊಡ್ಡಣ್ಣ ಅಸ್ವಸ್ಥಗೊಂಡಿದ್ದು ರಾಯಚೂರಿನ ಶಕ್ತಿನಗರದ ಆರ್‌ಟಿಪಿಎಸ್ ಆಸ್ಪತ್ರೆಗೆ ದಾಖಲಾಗಿತ್ತು ಇದೀಗ ಹೆಚ್ಚಿನ ಚಿಕಿತ್ಸೆಗೆ ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿಗೆ ರವಾನಿಸಲಾಗುತ್ತಿದೆ. ಶ್ರಾವಣ ಕಡೆಯ ಸೋಮವಾರದ ಹಿನ್ನೆಲೆಯಲ್ಲಿ ಶ್ರೀ ಸೂಗೂರೇಶ್ವರ ದೇವರ ದರ್ಶನಕ್ಕೆ ದೊಡ್ಡಣ್ಣ ಆಗಮಿಸಿದ್ದರು.
Vijaya Karnataka Web doddanna


ದೇವರ ದರ್ಶನಕ್ಕೆ ಸಾವಿರಾರು ಮಂದಿ ಭಕ್ತಾದಿಗಳು ಆಗಮಿಸಿ ‌ನೂಕು ನುಗ್ಗಲು ಉಂಟಾಗಿತ್ತು. ದೇವರ ದರ್ಶನಕ್ಕೆ ಸರದಿಯಲ್ಲಿ ಗಂಟೆಗಟ್ಟೆಲೆ ನಿಂತಿದ್ದ ಕಾರಣ ದೊಡ್ಡಣ್ಣ ಬಳಲಿದ್ದರು. ಕುಟುಂಬಸ್ಥರ ಜತೆ ವಸತಿ ಗೃಹದಲ್ಲಿ ವಾಸ್ತವ್ಯ ಮಾಡಿದ್ದ ಅವರು ವಸತಿ ಗೃಹದ ಬಾತ್ ರೂಮ್‌ನಲ್ಲಿ ಕುಸಿದು ಬಿದ್ದಿದ್ದಾರೆ.

ರಕ್ತದೊತ್ತಡ ಇಳಿಕೆಯಿಂದ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರಿಂದ ಇಂದು ಆರ್‌ಟಿಪಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ವೈದ್ಯ ಡಾ.ರಮೇಶ ಜಗ್ಲಿ ಚಿಕಿತ್ಸೆ ನೀಡುತ್ತಿದ್ದು ದೊಡ್ಡಣ್ಣ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಇದೀಗ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿಗೆ ರವಾನಿಸಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌