ಆ್ಯಪ್ನಗರ

ಸ್ಯಾಂಡಲ್‌ವುಡ್‌ನಲ್ಲಿ ಶ್ರೇಯಸ್ ಮಂಜು ಎರಡನೇ ಇನ್ನಿಂಗ್ಸ್

ಸ್ಯಾಂಡಲ್‌ವುಡ್ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಮಂಜು ಇನ್ನೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ. ಪಡ್ಡೆಹುಲಿ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಹವಾ ಎಬ್ಬಿಸಿದ ಶ್ರೇಯಸ್ ಮಂಜು ಈಗ ವಿಷ್ಣುಪ್ರಿಯನಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

Vijaya Karnataka 23 Jul 2019, 12:34 pm
ಪಡ್ಡೆಹುಲಿ ಸಿನಿಮಾದ ನಂತರ ನಿರ್ಮಾಪಕ ಕೆ.ಮಂಜು ಪುತ್ರ ಮತ್ತೊಂದು ಚಿತ್ರ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ 'ವಿಷ್ಣುಪ್ರಿಯ' ಎಂದು ಹೆಸರಿಡಲಾಗಿದೆ. ಇದೊಂದು ನೈಜ ಘಟನೆಯನ್ನು ಆಧರಿಸಿದ ಸಿನಿಮಾವಾಗಿದ್ದು, ವಿ.ಕೆ.ಪ್ರಕಾಶ್‌ ಅವರ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದೆ. ಮಲೆಯಾಳಂ ಮೂಲದ ಈ ನಿರ್ದೇಶಕರು ಈಗಾಗಲೇ 25ಕ್ಕೂ ಹೆಚ್ಚು ಚಿತ್ರಗಳಿಗೆ ಆ್ಯಕ್ಷನ್‌ ಕಟ್‌ ಹೇಳಿರುವ ಇವರು, ಸಾವಿರಾರು ಜಾಹೀರಾತು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.
Vijaya Karnataka Web shreyas-manju


'ಪಡ್ಡೆ ಹುಲಿ ಸಿನಿಮಾದ ನಂತರ ಹಲವು ಕಥೆಗಳನ್ನು ಕೇಳಿದೆವು. ಅದರಲ್ಲಿ ಧಾರವಾಡದ ಈ ಕಥೆ ನನಗೆ ಇಷ್ಟವಾಯಿತು. ಹಾಗಾಗಿ ನನ್ನದೇ ಬ್ಯಾನರ್‌ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ. ಈ ಚಿತ್ರಕ್ಕೆ ಆಗಸ್ಟ್‌ನಲ್ಲಿ ಮುಹೂರ್ತವಾಗಲಿದ್ದು, ಸೆಪ್ಟಂಬರ್‌ನಿಂದ ಶೂಟಿಂಗ್‌ ಶುರುವಾಗಲಿದೆ' ಎನ್ನುತ್ತಾರೆ ಕೆ.ಮಂಜು.

ಈ ಸಿನಿಮಾದಲ್ಲಿ ಶ್ರೇಯಸ್‌ ಲವರ್‌ಬಾಯ್‌ ರೀತಿಯ ಪಾತ್ರ ಮಾಡುತ್ತಿದ್ದಾರೆ. ಈ ಹೊತ್ತಿನ ಟ್ರೆಂಡನ್‌ಗೆ ತಕ್ಕಂತೆ ಸಿನಿಮಾ ಮೂಡಿ ಬರಲಿದೆಯಂತೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌