ಆ್ಯಪ್ನಗರ

ಗೋಡ್ಸೆ ವಿವಾದ; ಕಮಲ್ ಹಾಸನ್ ಮೇಲೆ ಚಪ್ಪಲಿ ಎಸೆತ

ಕಮಲ್ ಹಾಸನ್ ಬುಧವಾರ ಮಧುರೈ ವಿಧಾನಸಭಾ ಚುನಾವಣೆ ಕ್ಷೇತ್ರದ ವ್ಯಾಪ್ತಿಯಲ್ಲಿನ ತಿರುಪ್ಪರಾನ್‌ಕುಂದ್ರಮ್‌ನಲ್ಲಿ ಚುನಾವಣಾ ರ‍್ಯಾಲಿ ಹಮ್ಮಿಕೊಂಡಿದ್ದರು. ವಾಹನದ ಮೇಲೆ ನಿಂತು ಕಮಲ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕೆಲವರು ಅವರ ಮೇಲೆ ಚಪ್ಪಲಿ ಎಸೆದಿದ್ದಾರೆ. ಆದರೆ ಅವು ಕಮಲ್ ವಾಹನಕ್ಕೆ ತಾಗಿ ಕೆಳಕ್ಕೆ ಬಿದ್ದಿವೆ.

Vijaya Karnataka Web 16 May 2019, 3:51 pm
ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಕಾಲಿವುಡ್ ನಟ, ಮಕ್ಕಳ್ ನೀದಿ ಮಯ್ಯಂ ಅಧ್ಯಕ್ಷ ಕಮಲ್ ಹಾಸನ್‌ಗೆ ಕಹಿ ಘಟನೆಯೊಂದು ಎದುರಾಗಿದೆ. ಕಮಲ್ ಹಾಸನ್ ಚುನಾವಣಾ ರ‍್ಯಾಲಿಯಲ್ಲಿ ಭಾಷಣ ಮಾಡುತ್ತಿರಬೇಕಾದರೆ ಅವರ ಮೇಲೆ ಚಪ್ಪಲಿ ಎಸೆದ ಘಟನೆ ನಡೆದಿದೆ.
Vijaya Karnataka Web kamal-haasan


ಆದರೆ ಆ ಚಪ್ಪಲಿ ಅವರಿಗೆ ತಾಕಿಲ್ಲ. ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಎಂದು ಇತ್ತೀಚೆಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರುವುದು ಗಮನಾರ್ಹ ಸಂಗತಿ.

ಕಮಲ್ ಹಾಸನ್ ಬುಧವಾರ ಮಧುರೈ ವಿಧಾನಸಭಾ ಚುನಾವಣೆ ಕ್ಷೇತ್ರದ ವ್ಯಾಪ್ತಿಯಲ್ಲಿನ ತಿರುಪ್ಪರಾನ್‌ಕುಂದ್ರಮ್‌ನಲ್ಲಿ ಚುನಾವಣಾ ರ‍್ಯಾಲಿ ಹಮ್ಮಿಕೊಂಡಿದ್ದರು. ವಾಹನದ ಮೇಲೆ ನಿಂತು ಕಮಲ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕೆಲವರು ಅವರ ಮೇಲೆ ಚಪ್ಪಲಿ ಎಸೆದಿದ್ದಾರೆ. ಆದರೆ ಅವು ಕಮಲ್ ವಾಹನಕ್ಕೆ ತಾಗಿ ಕೆಳಕ್ಕೆ ಬಿದ್ದಿವೆ.

ಈ ಘಟನೆ ಬಗ್ಗೆ ಕಮಲ್ ಹಾಸನ್ ಅಭಿಮಾನಿಗಳು, ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟು 11 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಇವರಲ್ಲಿ ಬಿಜೆಪಿ ಮುಖಂಡರು, ಹನುಮಾನ್ ಸೇನೆ ಕಾರ್ಯಕರ್ತರು ಸಹ ಇದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ.

"ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದು. ಅವರ ಹೆಸರು ನಾಥೂರಾಮ್ ಗೋಡ್ಸೆ" ಎಂದು ಕಮಲ್ ಹಾಸನ್ ಹೇಳಿದ್ದರು. ಅವರ ಹೇಳಿಕೆ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಕಮಲ್ ಹಾಸನ್ ವಿರುದ್ಧ ಪ್ರಕರಣ ಸಹ ದಾಖಲಾಗಿದೆ. ಮದ್ರಾಸ್ ಹೈಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಕಮಲ್.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌