ಆ್ಯಪ್ನಗರ

ಶ್ರೀಲಂಕಾ ಬಾಂಬ್ ಸ್ಫೋಟ: 'ದಿ ವಿಲನ್' ನಿರ್ಮಾಪಕ ಸಿಆರ್ ಮನೋಹರ್ ಬಚಾವ್

ಶ್ರೀಲಂಕಾಗೆ ತೆರಳಿದ್ದ ವಿಧಾನಪರಿಷತ್ ಸದಸ್ಯ ಹಾಗೂ ಸಿನಿಮಾ ನಿರ್ಮಾಪಕ ಸಿಆರ್ ಮನೋಹರ್ ಅವರು ಅಲ್ಲಿ 'ತಾಜ್ ಹೋಟೆಲ್'ನಲ್ಲಿ ತಂಗಿದ್ದರು. ಅದೇ ಹೋಟೆಲ್ ಪಕ್ಕದಲ್ಲಿ ಬಾಂಬ್ ಬ್ಲಾಸ್ ಆಗಿದೆ. ಇದರಿಂದ ಸಹಜವಾಗಿ ಆತಂಕಗೊಂಡ ಸಿಆರ್ ಮನೋಹರ್ ಅವರು ನಿನ್ನೆ ಸಂಜೆ ಭಾರತಕ್ಕೆ ವಾಪಸ್ ಆಗಿದ್ದಾರೆ.

Vijaya Karnataka Web 22 Apr 2019, 9:18 pm
ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದಿರುವ ಬಾಂಬ್ ಸ್ಫೋಟದಲ್ಲಿ, ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಸಿಆರ್ ಮನೋಹರ್ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ.
Vijaya Karnataka Web manohar2204

ಭಾನುವಾರ ಬೆಳಿಗ್ಗೆ ಶ್ರೀಲಂಕಾದ ಕೊಲೊಂಬೋದಲ್ಲಿ ಸರಣಿ ಬಾಂಬ್ ಸ್ಫೋಟವಾಗಿತ್ತು. ಈ ದುರಂತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಸುಮಾರು 290ಕ್ಕೂ ಅಧಿಕ ಜನರ ಸಾವನ್ನಪ್ಪಿದ್ದಾರೆ.

ಶ್ರೀಲಂಕಾಗೆ ತೆರಳಿದ್ದ ವಿಧಾನಪರಿಷತ್ ಸದಸ್ಯ ಹಾಗೂ ಸಿನಿಮಾ ನಿರ್ಮಾಪಕ ಸಿಆರ್ ಮನೋಹರ್ ಅವರು ಅಲ್ಲಿ 'ತಾಜ್ ಹೋಟೆಲ್'ನಲ್ಲಿ ತಂಗಿದ್ದರು. ಅದೇ ಹೋಟೆಲ್ ಪಕ್ಕದಲ್ಲಿ ಬಾಂಬ್ ಬ್ಲಾಸ್ ಆಗಿದೆ. ಇದರಿಂದ ಸಹಜವಾಗಿ ಆತಂಕಗೊಂಡ ಸಿಆರ್ ಮನೋಹರ್ ಅವರು ನಿನ್ನೆ ಸಂಜೆ ಭಾರತಕ್ಕೆ ವಾಪಸ್ ಆಗಿದ್ದಾರೆ.

ಇನ್ನು, ಬಾಂಬ್ ಸ್ಫೋಟದಿಂದ ತಮಿಳು ನಟಿ ರಾಧಿಕಾ ಶರತ್ ಕುಮಾರ್ ಕೂಡ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ 'ಸಿನ್ನಮೋನ್ ಹೋಟೆಲ್'ನಲ್ಲಿದ್ದ ರಾಧಿಕಾ, ಅಲ್ಲಿಂದ ಹೊರಗೆ ಹೋದ ಕೆಲವೇ ಸಮಯದಲ್ಲಿ ಬಾಂಬ್ ಸ್ಪೋಟವಾಗಿದೆ. ಅದೃಷ್ಟವಶಾತ್ ನಟಿ ರಾಧಿಕಾ ಪಾರಾಗಿದ್ದಾರೆ.

ಸಿ ಆರ್ ಮನೋಹರ್ ಅವರು ವಿಧಾನಪರಿಷತ್ ಸದಸ್ಯ ಹಾಗೂ ಸಿನಿಮಾ ನಿರ್ಮಾಪಕರು. ಕಳೆದ ವರ್ಷ ಅವರು ಕಿಚ್ಚ ಸುದೀಪ್ ಮತ್ತು ಶಿವರಾಜ್ ಕುಮಾರ್ ಅಭಿನಯಿಸಿದ್ದ 'ದಿ ವಿಲನ್' ಸಿನಿಮಾವನ್ನ ನಿರ್ಮಾಣ ಮಾಡಿದ್ದರು. ಇತ್ತೀಚೆಗೆ ಚುನಾವಣೆ ಮುಗಿದ ಬಳಿಕ ಅವರು ಶ್ರೀಲಂಕಾಕ್ಕೆ ತೆರಳಿದ್ದರು ಎನ್ನಲಾಗಿದೆ. ಒಟ್ಟಿನಲ್ಲಿ, ಅಲ್ಲಿ ನಡೆದ ದುರಂತದಲ್ಲಿ ಅವರು ಬಚಾವ್ ಆಗಿ ಭಾರತಕ್ಕೆ ಬಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌