ಶ್ರುತಿ ಹರಿಹರನ್ #MeToo ಪ್ರಕರಣ: ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲು
ಪ್ರಶಾಂತ್ ಸಂಬರಗಿ ತನ್ನ ವೈಯಕ್ತಿಕ ಜೀವನಕ್ಕೆ ಹಾನಿ ಮಾಡಿದ್ದಾರೆ ಹಾಗೂ ಜೀವ ಬೆದರಿಕೆ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Vijaya Karnataka Web 26 Oct 2018, 5:25 pm
ನಟ ಅರ್ಜುನ್ ಸರ್ಜಾ ಅವರ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ನಟಿ ಶ್ರುತಿ ಹರಿಹರನ್ ದೂರು ದಾಖಲಿಸಿದ್ದಾರೆ. ಪ್ರಶಾಂತ್ ಸಂಬರಗಿ ತನ್ನ ವೈಯಕ್ತಿಕ ಜೀವನಕ್ಕೆ ಹಾನಿ ಮಾಡಿದ್ದಾರೆ ಹಾಗೂ ಜೀವ ಬೆದರಿಕೆ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಶಾಂತ್ ಸಂಬರಗಿ ವಿರುದ್ಧ ಐಪಿಸಿ ಸೆಕ್ಷನ್ 506 (ಬೆದರಿಗೆ) ಮತ್ತು 509 (ಮಹಿಳೆಯ ಗೌರವಕ್ಕೆ ಚ್ಯುತಿ ಬರುವಂತೆ ನಡೆದುಕೊಳ್ಳುವುದು) ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಗುರುವಾರ ಫಿಲಂ ಚೇಂಬರ್ನಲ್ಲಿ ಶ್ರುತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ನಡುವೆ ಸಂಧಾನ ಮಾತುಕತೆಗೆ ಆಹ್ವಾನಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಶಾಂತ್ ಸಂಬರಗಿ ಮಾಧ್ಯಮಗಳ ಜತೆಗೆ ಮಾತನಾಡುತ್ತಾ ಶ್ರುತಿ ವಿರುದ್ಧ ಆರೋಪಗಳನ್ನು ಮಾಡಿದ್ದರು.
"ಅಂತಾರಾಷ್ಟ್ರೀಯ ಸಂಸ್ಥೆಯಿಂದ ಶ್ರುತಿ ಹರಿಹರನ್ಗೆ ಪೇಯ್ಡ್ ಕ್ಯಾಂಪೇನ್ ನಡೆಯುತ್ತಿದೆ. ನ್ಯೂಯಾರ್ಕ್, ವಾಷಿಂಗ್ಟನ್ನಲ್ಲಿ ಶ್ರುತಿ ಹರಿಹರನ್ ಸಾಮಾಜಿಕ ಜಾಲತಾಣ ಅಪ್ಡೇಟ್ ಆಗುತ್ತಿದೆ. ಈ ಎಲ್ಲ ಪ್ರಕರಣದ ಹಿಂದೆ ಕನ್ನಡ ಹಿರಿಯ ಚಲನಚಿತ್ರ ನಟರಿಬ್ಬರು ಭಾಗಿಯಾಗಿದ್ದಾರೆ" ಎಂದು ಆರೋಪಿಸಿದ್ದರು.
ಇದಕ್ಕೂ ಮುನ್ನ ಅರ್ಜುನ್ ಸರ್ಜಾ ಅವರು ಶ್ರುತಿ ಹರಿಹರನ್ ವಿರುದ್ಧ ಸೈಬರ್ ಕ್ರೈಂ ಪೊಲೀಸರಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಿಟಿ ಸಿವಿಲ್ ನ್ಯಾಯಾಲಯದಲ್ಲಿ 5 ಕೋಟಿ ರೂ. ಮಾನನಷ್ಟ ಮೊಕದ್ದಮೆಯನ್ನೂ ಹೂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಶಾಂತ್ ಸಂಬರಗಿ ವಿರುದ್ಧ ಐಪಿಸಿ ಸೆಕ್ಷನ್ 506 (ಬೆದರಿಗೆ) ಮತ್ತು 509 (ಮಹಿಳೆಯ ಗೌರವಕ್ಕೆ ಚ್ಯುತಿ ಬರುವಂತೆ ನಡೆದುಕೊಳ್ಳುವುದು) ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಗುರುವಾರ ಫಿಲಂ ಚೇಂಬರ್ನಲ್ಲಿ ಶ್ರುತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ನಡುವೆ ಸಂಧಾನ ಮಾತುಕತೆಗೆ ಆಹ್ವಾನಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಶಾಂತ್ ಸಂಬರಗಿ ಮಾಧ್ಯಮಗಳ ಜತೆಗೆ ಮಾತನಾಡುತ್ತಾ ಶ್ರುತಿ ವಿರುದ್ಧ ಆರೋಪಗಳನ್ನು ಮಾಡಿದ್ದರು.
"ಅಂತಾರಾಷ್ಟ್ರೀಯ ಸಂಸ್ಥೆಯಿಂದ ಶ್ರುತಿ ಹರಿಹರನ್ಗೆ ಪೇಯ್ಡ್ ಕ್ಯಾಂಪೇನ್ ನಡೆಯುತ್ತಿದೆ. ನ್ಯೂಯಾರ್ಕ್, ವಾಷಿಂಗ್ಟನ್ನಲ್ಲಿ ಶ್ರುತಿ ಹರಿಹರನ್ ಸಾಮಾಜಿಕ ಜಾಲತಾಣ ಅಪ್ಡೇಟ್ ಆಗುತ್ತಿದೆ. ಈ ಎಲ್ಲ ಪ್ರಕರಣದ ಹಿಂದೆ ಕನ್ನಡ ಹಿರಿಯ ಚಲನಚಿತ್ರ ನಟರಿಬ್ಬರು ಭಾಗಿಯಾಗಿದ್ದಾರೆ" ಎಂದು ಆರೋಪಿಸಿದ್ದರು.
ಇದಕ್ಕೂ ಮುನ್ನ ಅರ್ಜುನ್ ಸರ್ಜಾ ಅವರು ಶ್ರುತಿ ಹರಿಹರನ್ ವಿರುದ್ಧ ಸೈಬರ್ ಕ್ರೈಂ ಪೊಲೀಸರಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಿಟಿ ಸಿವಿಲ್ ನ್ಯಾಯಾಲಯದಲ್ಲಿ 5 ಕೋಟಿ ರೂ. ಮಾನನಷ್ಟ ಮೊಕದ್ದಮೆಯನ್ನೂ ಹೂಡಿದ್ದಾರೆ.