ಆ್ಯಪ್ನಗರ

ದುರ್ಗದ ಹುಲಿ ಸಿನಿಮಾ ಮಾಡ್ತಾರಾ ಸುದೀಪ್‌

ಒಂದೇ ವಿಷಯ, ಒಬ್ಬನೇ ವ್ಯಕ್ತಿಯ ಮೇಲೆ ಈಗಾಗಲೇ ಒಂದಕ್ಕಿಂತ ಹೆಚ್ಚು ಸಿನಿಮಾಗಳು ತೆರೆಕಂಡ ಉದಾಹರಣೆಗಳಿವೆ. ನಾನೊಬ್ಬನೇ ಮದಕರಿ ನಾಯಕನ ಪಾತ್ರ ನಿರ್ವಹಿಸಬೇಕು ಎಂಬುದು ಎಷ್ಟು ಸರಿ? ಆತ ಕರ್ನಾಟಕದ ವೀರಪುತ್ರ. ಅವರ ಬಗ್ಗೆ ಸಿನಿಮಾ ಯಾರಾದರೂ ಮಾಡಬಹುದು ಎಂದಿದ್ದಾರೆ ಸುದೀಪ್.

Vijaya Karnataka 5 Oct 2018, 10:05 am
ಕಿಚ್ಚ ಸುದೀಪ್‌ 100 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗದ ವೀರ ಮದಕರಿ ನಾಯಕನ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದಂತೆ, ಈ ಬಗ್ಗೆ ಸ್ವತಃ ಸುದೀಪ್‌ ಅವರೇ ಸ್ಪಷ್ಟನೆ ನೀಡಿದ್ದಾರೆ. ಏಕೆಂದರೆ ದರ್ಶನ್‌ ನಾಯಕತ್ವದಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುವುದಾಗಿ ರಾಕ್‌ಲೈನ್‌ ವೆಂಕಟೇಶ್‌ ಈ ಹಿಂದೆಯೇ ಅನೌನ್ಸ್‌ ಮಾಡಿದ್ದರು. ಎಲ್ಲ ವಿಚಾರಗಳನ್ನು ಪ್ರಸ್ತಾಪ ಮಾಡಿರುವ ಸುದೀಪ್‌ ಟ್ವೀಟರ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ.
Vijaya Karnataka Web sudeep


ನಾನು ನನ್ನ ತಂಡ ಹಾಗೂ ಕೆಲವು ಲೇಖಕರ ಬಳಗವು ಈಗ್ಗೆ ಒಂದು-ಒಂದೂವರೆ ವರ್ಷದಿಂದ ವೀರ ಮದಕರಿ ನಾಯಕ ಸಿನಿಮಾ ನಿರ್ಮಾಣದ ದಿಸೆಯಲ್ಲಿ ಕೆಲಸ ಮಾಡುತ್ತಿದೇವೆ. ಈಗಾಗಲೇ ಒಂದಷ್ಟು ಸಂಶೋಧನೆ ಮತ್ತೂ ಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ. ವೀರ ಮದಕರಿ ಸಿನಿಮಾ ಮಾಡುವ ನಮ್ಮ ಆಲೋಚನೆ ವರ್ಷಗಳ ಹಿಂದೆಯೇ ಹುಟ್ಟಿದಂತಹುದು. ಆದರೆ, ಈ ದಿಸೆಯಲ್ಲಿ ಕೆಲಸ ಮಾಡಲು ಒಂದಷ್ಟು ಸಮಯ ಬೇಕಾಯಿತು. ಹೀಗಾಗಿ ಈ ಸಿನಿಮಾ ನಿರ್ದೇಶನ ಕೂಡ ಮಾಡುವ ಸ್ಫೂರ್ತಿ ಚಿಗುರೊಡೆಸಿತ್ತು.

ಇತ್ತೀಚೆಗೆ ಇದೇ ಕಥೆಯ ಆಧಾರಿತ ಮತ್ತೊಂದು ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ ಎಂಬ ಸುದ್ದಿ ನನಗೆ ನಿಜಕ್ಕೂ ಆಶ್ಚರ್ಯ ಉಂಟು ಮಾಡಿತು. ಸಹಜವಾಗಿಯೇ ನನಗೆ ಇದರಲ್ಲಿ ಏನಿದೆ ಎಂಬ ಪ್ರಶ್ನೆ ಹುಟ್ಟು ಹಾಕಿತು. ಯಾರೇ ಆಗಲೀ, ಇತಿಹಾಸದ ವಿಷಯಗಳ ಮೇಲೆ ಸಿನಿಮಾ ನಿರ್ಮಿಸಲು ಅರ್ಹರಿದ್ದಾರೆ. ಒಂದೇ ವಿಷಯ, ಒಬ್ಬನೇ ವ್ಯಕ್ತಿಯ ಮೇಲೆ ಈಗಾಗಲೇ ಒಂದಕ್ಕಿಂತ ಹೆಚ್ಚು ಸಿನಿಮಾಗಳು ತೆರೆಕಂಡ ಉದಾಹರಣೆಗಳಿವೆ. ನಾನೊಬ್ಬನೇ ಮದಕರಿ ನಾಯಕನ ಪಾತ್ರ ನಿರ್ವಹಿಸಬೇಕು ಎಂಬುದು ಎಷ್ಟು ಸರಿ? ಆತ ಕರ್ನಾಟಕದ ವೀರಪುತ್ರ. ಅವರ ಬಗ್ಗೆ ಸಿನಿಮಾ ಯಾರಾದರೂ ಮಾಡಬಹುದು.

ರಾಕ್‌ಲೈನ್ ವೆಂಕಟೇಶ್‌ ಅವರ ಸಿನಿಮಾ ಆಸಕ್ತಿ ಅದ್ವಿತೀಯವಾದದ್ದು. ಇದನ್ನೊಂದು ಅತ್ಯುತ್ತಮ ಚಿತ್ರವಾಗಿ ತೆರೆಯ ಮೇಲೆ ತರುತ್ತಾರೆ ಎಂಬುದಕ್ಕೆ ಅನುಮಾನವೇ ಇಲ್ಲ. ಇನ್ನು ಈ ತಂಡದ ಕನಸನ್ನು ಭಗ್ನಗೊಳಿಸಲು ನಾನು ಇಚ್ಚಿಸುವುದಿಲ್ಲ. ಅದೇ ರೀತಿ ನನ್ನ ನಿರ್ಣಯವನ್ನು ನೀವೆಲ್ಲರೂ ಸಮ್ಮತಿಸುತ್ತೀರೆಂದು ನಂಬಿರುವೆ ಎಂದು ಹೇಳಿದ್ದಾರೆ. ಇದರರ್ಥ ಸುದೀಪ್‌ ಮದಕರಿ ಸಿನಿಮಾವನ್ನು ಮಾಡಿಯೇ ತೀರುತ್ತೇನೆ ಎಂಬುದಾಗಿದೆ. ಮದಕರಿ ಸಿನಿಮಾದ ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೋ ಈಗ ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌