ಆ್ಯಪ್ನಗರ

'ದುರ್ಯೋಧನ-ಭೀಷ್ಮ'ರನ್ನು ನೋಡಲು ಕಾಯುತ್ತಿರುವೆ: ಸುಮಲತಾ ಅಂಬರೀಷ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ ಭೂಮಿಕೆಯ 'ಕುರುಕ್ಷೇತ್ರ' ಚಿತ್ರವನ್ನು ಮುನಿರತ್ನ ಅವರು ನಿರ್ಮಾಣ ಮಾಡಿದ್ದಾರೆ. ನಾಗಣ್ಣ ಹಾಗೂ ವಿ ನಾಗೇಂದ್ರ ಪ್ರಸಾದ್ ಸೇರಿದಂತೆ, 5 ಮಂದಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ವಿ ಹರಿಕೃಷ್ಣ ಸಂಗೀತ ಸಂಯೋಜನೆಯ ಈ ಚಿತ್ರವನ್ನು ಅದ್ದೂರಿ ಮೇಕಿಂಗ್ ಹಾಗೂ ಭಾರೀ ಬಜೆಟ್ ಮೂಲಕ ತೆರೆಗೆ ತರಲಾಗುತ್ತಿದೆ. ಕುರುಕ್ಷೇತ್ರ ಚಿತ್ರವು ಆಗಸ್ಟ್ 2 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

Vijaya Karnataka Web 20 Jul 2019, 5:49 pm
ಕನ್ನಡದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ 'ಕುರುಕ್ಷೇತ್ರ' ಸಿನಿಮಾ ಆಗಸ್ಟ್ 2, 2019ರಂದು ಬಿಡುಗಡೆಯಾಗಲಿದೆ. ಬಹುತಾರಾಗಣವನ್ನು ಹೊಂದಿರುವ 'ಕುರುಕ್ಷೇತ್ರ' ಚಿತ್ರವನ್ನು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಷ್ ಅವರು ನೋಡಲು ಕಾತುರದಿಂದ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ದಿವಂಗತ ನಟ ಅಂಬರೀಷ್ ಅಭಿನಯದ ಕಟ್ಟಕಡೆಯ ಚಿತ್ರವೇ ಈ ಕುರುಕ್ಷೇತ್ರ. ಈ ಚಿತ್ರವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಬಹುನಿರೀಕ್ಷೆ ಮೂಡಿದೆ.
Vijaya Karnataka Web sumalatha2007


ದಿವಂಗತ ಅಂಬರೀಷ್ ಅವರ ಪತ್ನಿ, ನಟಿ ಹಾಗೂ ಸಂಸದೆ ಸುಮಲತಾ ಅಂಬರೀಷ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ "ನಾನು 'ಕುರುಕ್ಷೇತ್ರ' ಚಿತ್ರದಲ್ಲಿ ದುರ್ಯೋಧನ ಹಾಗೂ ಭೀಷ್ಮ ಪಾತ್ರಧಾರಿಗಳನ್ನು ಒಟ್ಟಿಗೇ ತೆರೆಯ ಮೇಲೆ ನೋಡಲು ಕಾತುರದಿಂದ ಕಾಯುತ್ತಿರುವೆ" ಎಂದು ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಮಾಡಿರುವ ತಮ್ಮ ಹೇಳಿಕೆಯ ಟ್ವೀಟ್‌ಅನ್ನು ನಟ ದರ್ಶನ್ ಅವರಿಗೂ ಸಹ ಸುಮಲತಾ ಅಂಬರೀಷ್ ಅವರು ಟ್ಯಾಗ್ ಮಾಡಿದ್ದಾರೆ.

ಕುರುಕ್ಷೇತ್ರ ಚಿತ್ರವನ್ನು ಮುನಿರತ್ನ ಅವರು ನಿರ್ಮಾಣ ಮಾಡಿದ್ದಾರೆ. ನಾಗಣ್ಣ ಹಾಗೂ ವಿ ನಾಗೇಂದ್ರ ಪ್ರಸಾದ್ ಸೇರಿದಂತೆ, 5 ಮಂದಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ವಿ ಹರಿಕೃಷ್ಣರವರ ಸಂಗೀತ ಸಂಯೋಜನೆಯಿದ್ದು, ಚಿತ್ರವನ್ನು ಅದ್ದೂರಿ ಮೇಕಿಂಗ್ ಹಾಗೂ ಭಾರೀ ಬಜೆಟ್ ಮೂಲಕ ತೆರೆಗೆ ತರಲಾಗುತ್ತಿದೆ. ಕುರುಕ್ಷೇತ್ರ ಚಿತ್ರವು ಆಗಸ್ಟ್ 2 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಈ ಚಿತ್ರದ ಬಗ್ಗೆ ಇಡೀ ಇಂಡಿಯಾ ತುಂಬ ಬಹಳಷ್ಟು ನಿರೀಕ್ಷೆ ವ್ಯಕ್ತವಾಗುತ್ತಿದ್ದು, ಬಿಡುಗಡೆಯಾಗಿರುವ ಟೀಸರ್, ಟ್ರೇಲರ್ ಮತ್ತು ಹಾಡುಗಳು ಸಿನಿಮಾ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ. ದರ್ಶನ್, ಅಂಬರೀಷ್ ಸೇರಿದಂತೆ, ಸಾಯಿ ಕುಮಾರ್, ನಿಖಿಲ್ ಕುಮಾರ್, ಸ್ನೇಹಾ, ಮೇಘನಾ ರಾಜ್, ಹರಿಪ್ರಿಯಾ, ಸೋನು ಸೂದ್, ಶಶಿಕುಮಾರ್, ರವಿಚಂದ್ರನ್, ರಮೇಶ್ ಭಟ್, ಶ್ರೀನಿವಾಸ ಮೂರ್ತಿ ಹಾಗೂ ಬಹಳಷ್ಟು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಒಟ್ಟಿನಲ್ಲಿ, ಮಂಡ್ಯ ಸಂಸದೆ ಸುಮಲತಾ ಅವರು 'ಕುರುಕ್ಷೇತ್ರ' ಚಿತ್ರ ನೋಡಲು ಕಾಯುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌