ಆ್ಯಪ್ನಗರ

ಶೀಘ್ರದಲ್ಲೇ ಬೆಳ್ಳಿಪರದೆಗೆ ಸೂಪರ್ ಸ್ಟಾರ್ ರಜನಿಕಾಂತ್ ಗುಡ್ ಬೈ?

ತನಗೆ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ಕೆ ಎಸ್ ರವಿಕುಮಾರ್ ನಿರ್ದೇಶನದ ಒಂದು ಸಿನಿಮಾ, ವಿನೋದ್ ನಿರ್ದೇಶನದ ಇನ್ನೊಂದು ಸಿನಿಮಾ ಮಾಡಿದ ಬಳಿಕ ರಜನಿಕಾಂತ್ ನಿವೃತ್ತಿ ಘೋಷಿಸಲಿದ್ದಾರಂತೆ. ಆದರೆ ಈ ಬಗ್ಗೆ ರಜನಿಕಾಂತ್ ಮಾತ್ರ ಯಾವುದೇ ರೀತಿಯ ಅಧಿಕೃತ ಪ್ರಕಟಣೆ ನೀಡಿಲ್ಲ.

Vijaya Karnataka Web 13 Apr 2019, 12:51 pm
ದಕ್ಷಿಣದ ಸೂಪರ್ ಸ್ಟಾರ್ ರಜನಿಕಾಂತ್ ನಿವೃತ್ತಿ ಬಗ್ಗೆ ಸುದೀರ್ಘ ಸಮಯದಿಂದ ಸುದ್ದಿ ಹರಿದಾಡುತ್ತಲೇ ಇದೆ. 'ಬಾಬಾ' ಸಿನಿಮಾ ಸಮಯದಲ್ಲಿ ನಿವೃತ್ತಿ ಬಗ್ಗೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದರೆ ರಜನಿ ಮಾತ್ರ ಅದನ್ನು ಮುಂದೂಡುತ್ತಲೇ ಬಂದರು.
Vijaya Karnataka Web rajinikanth


ಇದೀಗ ಮತ್ತೊಮ್ಮೆ ರಜನಿಕಾಂತ್ ರಿಟೈರ್‌‍ಮೆಂಟ್ ಸುದ್ದಿ ಮುನ್ನೆಲೆಗೆ ಬಂದಿದೆ. ಸದ್ಯಕ್ಕೆ ಎ ಆರ್ ಮುರುಗದಾಸ್ ನಿರ್ದೇಶನದ 'ದರ್ಬಾರ್' ಸಿನಿಮಾದಲ್ಲಿ ರಜನಿಕಾಂತ್ ನಟಿಸುತ್ತಿದ್ದಾರೆ. ಇದಾದ ಬಳಿಕ ಇನ್ನೆರಡು ಸಿನಿಮಾಗಳಲ್ಲಿ ಮಾತ್ರ ರಜನಿಕಾಂತ್ ಬಣ್ಣ ಹಚ್ಚಲಿದ್ದಾರೆ ಎಂದಿವೆ ಮೂಲಗಳು.

ತನಗೆ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ಕೆ ಎಸ್ ರವಿಕುಮಾರ್ ನಿರ್ದೇಶನದ ಒಂದು ಸಿನಿಮಾ, ವಿನೋದ್ ನಿರ್ದೇಶನದ ಇನ್ನೊಂದು ಸಿನಿಮಾ ಮಾಡಿದ ಬಳಿಕ ರಜನಿಕಾಂತ್ ನಿವೃತ್ತಿ ಘೋಷಿಸಲಿದ್ದಾರಂತೆ. ಆದರೆ ಈ ಬಗ್ಗೆ ರಜನಿಕಾಂತ್ ಮಾತ್ರ ಯಾವುದೇ ರೀತಿಯ ಅಧಿಕೃತ ಪ್ರಕಟಣೆ ನೀಡಿಲ್ಲ.

ಈಗಾಗಲೆ ರಾಜಕೀಯ ಪಕ್ಷವನ್ನು ಘೋಷಿಸಿರುವ ರಜನಿಕಾಂತ್ ಈ ಲೋಕಸಭೆ ಚುನಾವಣೆಯಿಂದ ದೂರ ಉಳಿದಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ವೇಳೆಗೆ ನಟನೆಗೆ ಗುಡ್ ಬೈ ಹೇಳಿ ಸಂಪೂರ್ಣವಾಗಿ ರಾಜಕೀಯದ ಮೇಲೆ ತಮ್ಮ ದೃಷ್ಟಿ ಹರಿಸುವ ಆಲೋಚನೆಯಲ್ಲಿ ರಜನಿಕಾಂತ್ ಇದ್ದಾರೆ ಎನ್ನುತ್ತಿವೆ ಕಾಲಿವುಡ್ ಮೂಲಗಳು.

ಇತ್ತೀಚೆಗೆ ರಜನಿಕಾಂತ್ ಅವರು ಬಿಜೆಪಿ ಪ್ರಣಾಳಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ನದಿಗಳ ಜೋಡಣೆ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಬಿಜೆಪಿ ತನ್ನ 2019ರ ಪ್ರಣಾಳಿಕೆಯಲ್ಲಿ ಹೇಳಿದೆ. ಇದು ಜಾರಿಯಾದರೆ ಅದಕ್ಕಿಂತಲೂ ಜನಕ್ಕೆ ಇನ್ನೇನು ಬೇಕು. ಇದು ಕೈಗೂಡಿದರೆ ಜನ ಸಂತೋಷವಾಗಿ ಇರುತ್ತಾರೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌