ಆ್ಯಪ್ನಗರ

ರಜನಿಕಾಂತ್ `ದರ್ಬಾರ್' ಸಿನಿಮಾ ಶೂಟಿಂಗ್ ಸ್ಥಳಾಂತರ: ಕಾರಣವೇನು ಗೊತ್ತೇ?

ಶೂಟಿಂಗ್ ಸ್ಥಳಕ್ಕೆ ಸಾರ್ವಜನಿಕರು ಪ್ರವೇಶಿಸುವುದು, ಅಲ್ಲಿ ಫೋಟೋ ತೆಗೆದಯುವುದು, ವೀಡಿಯೋ ಮಾಡಿಕೊಳ್ಳುವುದು, ಗಲಾಟೆ ಮಾಡುವುದು ಇವೆಲ್ಲ ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿದೆ. ಇವೆಲ್ಲವನ್ನೂ ಮೀರಿ ಶೂಟಿಂಗ್ ಮುಗಿಸುವುದು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ ಎನ್ನಲಾಗುತ್ತಿದೆ.

Vijaya Karnataka Web 3 May 2019, 11:20 am
ಇಂಡಿಯನ್ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 'ದರ್ಬಾರ್' ಚಿತ್ರದ ಶೂಟಿಂಗ್ ವೇಳೆ ಯುವಕರ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು, ಚಿತ್ರೀಕರಣ ನಿಲ್ಲಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ದರ್ಬಾರ್ ಚಿತ್ರದ ಶೂಟಿಂಗ್ ನಡೆಯುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಕಾಲೇಜ್ ವಿದ್ಯಾರ್ಥಿಗಳ ಗುಂಪೊಂದು ಸೆಟ್‌ನಲ್ಲಿ ತಮ್ಮ ಮೊಬೈಲ್ ಮೂಲಕ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿಯಲು ತೊಡಗಿದೆ ಎನ್ನಲಾಗಿದೆ. ಈ ವೇಳೆ ಚಿತ್ರತಂಡದ ಸಿಬ್ಬಂದಿ ಫೋಟೋ ತೆಗೆಯದಂತೆ ತಾಕೀತು ಮಾಡಿದ್ದಾರೆ.
Vijaya Karnataka Web rajinikanth0305


ಇದರಿಂದ ಕೆರಳಿದ ವಿದ್ಯಾರ್ಥಿಗಳು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ವಿದ್ಯಾರ್ಥಿಗಳು ಶೂಟಿಂಗ್ ಸೆಟ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಎಷ್ಟೇ ಹೇಳಿದರೂ ಕೇಳದ ವಿದ್ಯಾರ್ಥಿಗಳು ಸಿಬ್ಬಂದಿ ಮಾತನ್ನು ಮೀರಿ ಫೋಟೋ ಮತ್ತು ವೀಡಿಯೋ ತೆಗೆಯುತ್ತಲೇ ಇದ್ದರು ಎನ್ನಲಾಗಿದೆ. ಈ ವೇಳೆ ಚಿತ್ರದ ನಿರ್ದೇಶಕ ಎಆರ್ ಮುರುಗದಾಸ್ ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ತಕ್ಷಣ ಶೂಟಿಂಗ್ ಸ್ಥಳವನ್ನು ಸ್ಥಳಾಂತರ ಮಾಡಲಾಗಿದೆ ಎನ್ನಲಾಗಿದೆ.

ಶೂಟಿಂಗ್ ಸ್ಥಳಕ್ಕೆ ಸಾರ್ವಜನಿಕರು ಪ್ರವೇಶಿಸುವುದು, ಅಲ್ಲಿ ಫೋಟೋ ತೆಗೆದಯುವುದು, ವೀಡಿಯೋ ಮಾಡಿಕೊಳ್ಳುವುದು, ಗಲಾಟೆ ಮಾಡುವುದು ಇವೆಲ್ಲ ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿದೆ. ಇವೆಲ್ಲವನ್ನೂ ಮೀರಿ ಶೂಟಿಂಗ್ ಮುಗಿಸುವುದು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ ಎನ್ನಲಾಗುತ್ತಿದೆ. ಚಿಕ್ಕಪುಟ್ಟ ಬಜೆಟ್ ಸಿನಿಮಾಗಳಿಗೆ ಈ ಮೊದಲು ಇಂಥಹ ತಲೆನೋವುಗಳು ಹೆಚ್ಚಾಗಿ ಕಾಡುತ್ತಿತ್ತು. ಈಗ ದೊಡ್ಡ ಬಜೆಟ್ ಸಿನಿಮಾಗಳಿಗೆ ಕೂಡ ಈ ರೀತಿಯ ತೊಂದರೆಗಳು ಶುರುವಾಗಿರುವುದು ಹಲವು ನಿರ್ಮಾಪಕರ ನಿದ್ದೆ ಕೆಡಿಸಿದೆ ಎನ್ನಬಹುದು.

ಒಟ್ಟಿನಲ್ಲಿ, ಸೂಪರ್ ಸ್ಟಾರ್ ರಜನಿಕಾಂತ್ ಅವರು 'ದರ್ಬಾರ್' ಸಿನಿಮಾ ಶೂಟಿಂಗ್‌ನಲ್ಲಿ ನಿರತರಾಗಿದ್ದು, ಭರ್ಜರಿಯಾಗಿ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದ ನಾಯಕಿಯಾಗಿ ಸೌತ್ ಇಂಡಿಯನ್ ಖ್ಯಾತಿಯ ನಯನತಾರಾ ನಟಿಸುತ್ತಿದ್ದಾರೆ. ಈ ಚಿತ್ರವು ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌