ಆ್ಯಪ್ನಗರ

ಅಭಿಷೇಕ್ 'ಅಮರ್' ಸಿನಿಮಾಗೆ ವಿಶ್ ಮಾಡಿದ ರಜನಿಕಾಂತ್

ಅಭಿಷೇಕ್ ಅಂಬರೀಷ್ ನಾಯಕತ್ವದ ಮೊಟ್ಟಮೊದಲ ಸಿನಿಮಾ ಅಮರ್ ನಾಡಿದ್ದು, ಅಂದರೆ ಮೇ 31, 2019ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ನಾಗಶೇಖರ್ ನಿರ್ದೇಶನದ ಅಮರ್ ಚಿತ್ರದಲ್ಲಿ ತಾನ್ಯಾ ಹೋಪ್ ನಾಯಕಿಯಾಗಿ ನಟಿಸಿದ್ದಾರೆ. ಅರ್ಜನ್ ಜನ್ಯಾ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಎನಿಸಿವೆ.

Vijaya Karnataka Web 30 May 2019, 5:07 pm
ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಷ್ ನಾಯಕತ್ವದ 'ಅಮರ್' ಚಿತ್ರಕ್ಕೆ ವೀಡೀಯೋ ಮೂಲಕ ವಿಶ್ ಮಾಡಿದ್ದಾರೆ. ರಜನಿಕಾಂತ್ ಅವರು ತಾವು ಕಳುಹಿಸಿರುವ ವೀಡಿಯೋದಲ್ಲಿ "ನನ್ನ ಗೆಳೆಯ ಅಂಬರೀಷ್ ಹಾಗೂ ಸಹೋದರಿ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಷ್ ಅವರ ನಾಯಕತ್ವದ 'ಅಮರ್' ಚಿತ್ರವು ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಾಣಲಿ. ಅಂಬರೀಷ್ ಹೇಗೆ ಕನ್ನಡ ಜನರ ಹೃದಯದಲ್ಲಿ ವಿಜೃಂಭಿಸಿದ್ದಾನೋ ಹಾಗೇ ಅಭಿಷೇಕ್ ಕೂಡ ಸಿನಿಮಾರಂಗದಲ್ಲಿ ಯಶಸ್ಸು ಕಾಣಲಿ ಮತ್ತು ಕರ್ನಾಟಕದ ಜನರ ಮನಮಸ್ಸಿನಲ್ಲಿ ವಿಜೃಂಭಿಸಲಿ ಎಂದು ನಾನು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ..ನಮಸ್ಕಾರ" ಎಂದು ರಜನಿಕಾಂತ್ ಹೇಳಿದ್ದಾರೆ.

ಮಂಡ್ಯದ ಸ್ವಾಭಿಮಾನದ ಗತ್ತು ಏನೆಂದು ಇಂಡಿಯಾಗೆ ತೋರಿಸಿದ್ದೀರಿ: ಅಭಿ ಅಂಬರೀಷ್‌

ಅಭಿಷೇಕ್ ಅಂಬರೀಷ್ ನಾಯಕತ್ವದ ಮೊಟ್ಟಮೊದಲ ಸಿನಿಮಾ ಅಮರ್ ನಾಡಿದ್ದು, ಅಂದರೆ ಮೇ 31, 2019ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ನಾಗಶೇಖರ್ ನಿರ್ದೇಶನದ ಅಮರ್ ಚಿತ್ರದಲ್ಲಿ ತಾನ್ಯಾ ಹೋಪ್ ನಾಯಕಿಯಾಗಿ ನಟಿಸಿದ್ದಾರೆ. ಅರ್ಜನ್ ಜನ್ಯಾ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಎನಿಸಿವೆ. ಬಿಡುಗಡೆ ಕಂಡಿರುವ ಟೀಸರ್ ಮತ್ತು ಟ್ರೇಲರ್‌ಗಳು ಸಹ ಜನಮೆಚ್ಚುಗೆ ಗಳಿಸಿವೆ.

ಒಟ್ಟಿನಲ್ಲಿ ಅಭಿಷೇಕ್ ಅಂಬರೀಷ್ ಅವರ ಅಮರ್ ಚಿತ್ರಕ್ಕೆ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿದೆ. ಘಟಾನಘಟಿಗಳು ಈ ಚಿತ್ರವು ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ. ಇಂದು ಮಂಡ್ಯದಲ್ಲಿ ನಡೆದ, ಸುಮಲತಾ ಅಂಬರೀಷ್ ಅವರ 'ಸ್ವಾಭಿಮಾನ ಸಮಾವೇಶದಲ್ಲಿ ಸ್ವತಃ ನಾಯಕ ನಟ ಅಭಿಷೇಕ್ ಅಂಬರೀಷ್ ಅವರು ಸಿನಿಮಾ ಪ್ರೇಕ್ಷಕರಲ್ಲಿ ತಮ್ಮ ಚಿತ್ರವನ್ನು ನೋಡಿ ಹರಿಸಿ ಹಾರೈಸುವಂತೆ ವಿನಂತಿ ಮಾಡಿಕೊಂಡಿದ್ದಾರೆ. ಇದೀಗ, ಭಾರತದ ಸೂಪರ್ ಸ್ಟಾರ್ ಹಾಗೂ ಅಂಬರೀಷ್ ಗೆಳೆಯ ರಜನಿಕಾಂತ್ ಅವರು ಈ ಚಿತ್ರಕ್ಕೆ ವಿಶ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌