ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ಗೆ ಶಸ್ತ್ರಚಿಕಿತ್ಸೆ ಸಕ್ಸಸ್
ಬಲಭುಜದ ನೋವಿನಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಲಂಡನ್ನಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈಗವರು ಚೇತರಿಸಿಕೊಳ್ಳುತ್ತಿದ್ದು ಆದಷ್ಟು ಬೇಗ ವಾಪಸ್ ಆಗಲಿದ್ದಾರೆ. ಸಾಹಸ ಸನ್ನಿವೇಶದ ಚಿತ್ರೀಕರಣದಲ್ಲಿ ಶಿವಣ್ಣ ಗಾಯಗೊಂಡಿದ್ದರು.
Vijaya Karnataka Web 11 Jul 2019, 4:12 pm
ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದ್ದು ಈಗವರು ಲಂಡನ್ನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆಂದು ಕೆಪಿ ಶ್ರೀಕಾಂತ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಶಿವಣ್ಣನಿಗೆ ಚಿಕಿತ್ಸೆ ಯಶಸ್ವಿಯಾಗಲಿ ಎಂದು ರಾಘವೇಂದ್ರ ರಾಜ್ಕುಮಾರ್ ಹಾಗೂ ಶಿವಣ್ಣ ಅಭಿಮಾನಿಗಳು ಪೂಜೆ, ಹೋಮ ಹವನಗಳನ್ನು ಮಾಡಿದ್ದರು.
ತಮ್ಮ ಬಲಭುಜದ ನೋವಿನ ಚಿಕಿತ್ಸೆಗಾಗಿ ಲಂಡನ್ಗೆ ತೆರಳಿದ್ದ ಶಿವಣ್ಣ, ಅಲ್ಲಿ ಭುಜದ ನೋವಿನ ಹಿನ್ನೆಲೆಯಲ್ಲಿ ಆಪರೇಷನ್ಗೆ ಒಳಗಾಗಿದ್ದಾರೆ. ಸಿನಿಮಾ ಸಾಹಸ ದೃಶ್ಯದ ಶೂಟಿಂಗ್ ವೇಳೆ ಅವರ ಬಲ ಭುಜಕ್ಕೆ ಗಾಯವಾಗಿದ್ದು ಸಾಹಸ ದೃಶ್ಯಗಳಲ್ಲಿ ಪಾಲ್ಗೊಳ್ಳಲು ಕಷ್ಟಪಡುವಂತಾಗಿತ್ತು.
ಜುಲೈ 10ರಂದು ಶಿವಣ್ಣ ಆಪರೇನ್ಗೆ ಒಳಗಾಗಿದ್ದಾರೆ. ಇನ್ನು 3 ತಿಂಗಳುಗಳ ಕಾಲ ಯಾವುದೇ ಚಿತ್ರದ ಸಾಹಸ ದೃಶ್ಯಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲವಂತೆ. ಹೀಗಾಗಿ ತಮ್ಮ ಚಿತ್ರದ ಸಾಹಸ ದಶ್ಯಗಳನ್ನು ಆದಷ್ಟು ಬೇಗ ಮುಗಿಸಿಕೊಂಡು ನಟ ಶಿವಣ್ಣ ಲಂಡನ್ ತಲುಪಿದ್ದರು. [ಲಂಡನ್ ತಲುಪಿದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್]
ವಿಶೇಷ ಎಂದರೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹಾಗೂ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಈ ಮೊದಲು ಲಂಡನ್ನಲ್ಲಿ ಟ್ರೀಟ್ಮೆಂಟ್ ಮಾಡಿದ್ದ ವೈದ್ಯರೇ ನಟ ಶಿವಣ್ಣ ಅವರನ್ನು ಟ್ರೀಟ್ ಮಾಡಿರುವುದು.
ತಮ್ಮ ಬಲಭುಜದ ನೋವಿನ ಚಿಕಿತ್ಸೆಗಾಗಿ ಲಂಡನ್ಗೆ ತೆರಳಿದ್ದ ಶಿವಣ್ಣ, ಅಲ್ಲಿ ಭುಜದ ನೋವಿನ ಹಿನ್ನೆಲೆಯಲ್ಲಿ ಆಪರೇಷನ್ಗೆ ಒಳಗಾಗಿದ್ದಾರೆ. ಸಿನಿಮಾ ಸಾಹಸ ದೃಶ್ಯದ ಶೂಟಿಂಗ್ ವೇಳೆ ಅವರ ಬಲ ಭುಜಕ್ಕೆ ಗಾಯವಾಗಿದ್ದು ಸಾಹಸ ದೃಶ್ಯಗಳಲ್ಲಿ ಪಾಲ್ಗೊಳ್ಳಲು ಕಷ್ಟಪಡುವಂತಾಗಿತ್ತು.
ಜುಲೈ 10ರಂದು ಶಿವಣ್ಣ ಆಪರೇನ್ಗೆ ಒಳಗಾಗಿದ್ದಾರೆ. ಇನ್ನು 3 ತಿಂಗಳುಗಳ ಕಾಲ ಯಾವುದೇ ಚಿತ್ರದ ಸಾಹಸ ದೃಶ್ಯಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲವಂತೆ. ಹೀಗಾಗಿ ತಮ್ಮ ಚಿತ್ರದ ಸಾಹಸ ದಶ್ಯಗಳನ್ನು ಆದಷ್ಟು ಬೇಗ ಮುಗಿಸಿಕೊಂಡು ನಟ ಶಿವಣ್ಣ ಲಂಡನ್ ತಲುಪಿದ್ದರು. [ಲಂಡನ್ ತಲುಪಿದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್]
ವಿಶೇಷ ಎಂದರೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹಾಗೂ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಈ ಮೊದಲು ಲಂಡನ್ನಲ್ಲಿ ಟ್ರೀಟ್ಮೆಂಟ್ ಮಾಡಿದ್ದ ವೈದ್ಯರೇ ನಟ ಶಿವಣ್ಣ ಅವರನ್ನು ಟ್ರೀಟ್ ಮಾಡಿರುವುದು.