ಆ್ಯಪ್ನಗರ

ಸುದೀಪ್ ಹುಟ್ಟುಹಬ್ಬಕ್ಕೆ 'ಸೈರಾ' ಚಿತ್ರತಂಡ ಕೊಟ್ಟ ಗಿಫ್ಟ್ ಇದು

ಕಿಚ್ಚ ಸುದೀಪ್ ಹುಟ್ಟುಹಬ್ಬದ ನಿಮಿತ್ತ ಸೈರಾ ನರಸಿಂಹ ರೆಡ್ಡಿ ಚಿತ್ರತಂಡ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಖಡಕ್ ಲುಕ್‌ನಲ್ಲಿ ಬಿಳಿ ಕುದುರೆ ಏರಿ ಬರುತ್ತಿರುವ ಸುದೀಪ್ ಪೋಸ್ಟರ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Vijaya Karnataka Web 2 Sep 2019, 5:48 pm

ಸೈರಾ ನರಸಿಂಹ ರೆಡ್ಡಿ ಟಾಲಿವುಡ್ ಅಂಗಳದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ. ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿಚ್ಚ ಸುದೀಪ್ ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದರಿಂದ ಇದು ಕರ್ನಾಟಕದವರ ಪಾಲಿಗೆ ವಿಶೇಷವೂ ಹೌದು. ಕಿಚ್ಚನ ಹುಟ್ಟುಹಬ್ಬದ ನಿಮಿತ್ತ ಇಂದು 'ಸೈರಾ ನರಸಿಂಹ ರೆಡ್ಡಿ' ಚಿತ್ರತಂಡ ಹಾಗೂ ನಿರ್ದೇಶಕ ಸುರೇಂದರ್ ರೆಡ್ಡಿ ಕಿಚ್ಚನ ಹೊಸ ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ್ದಾರೆ.
Vijaya Karnataka Web sudeep-sye-raa


ಕಳೆದ ವರ್ಷ ಕೂಡ ಸೈರಾ ತಂಡ ಕಿಚ್ಚನ ಪೋಸ್ಟರ್ ಬಿಡುಗಡೆಗೊಳಿಸಿ ಕಿಚ್ಚನ ಬರ್ತಡೇ ಸಂಭ್ರಮವನ್ನು ಇಮ್ಮಡಿಗೊಳಿಸಿತ್ತು. 'ಸೈರಾ ನರಸಿಂಹ ರೆಡ್ಡಿ' ಚಿತ್ರ ಬಿಗ್ ಬಜೆಟ್ ಸಿನೆಮಾ. ಮೆಗಾಸ್ಟಾರ್ ಚಿರಂಜೀವಿ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ, ಅಮಿತಾಭ್ ಬಚ್ಚನ್ ರಾಜಗುರು ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಅವುಕು ಪ್ರಾಂತ್ಯದ ರಾಜನ ಪೋಷಾಕು ತೊಟ್ಟಿದ್ದಾರೆ ಕಿಚ್ಚ ಸುದೀಪ್. ಖಡಕ್ ಲುಕ್ ಕೊಟ್ಟು ಕುದುರೆ ಏರಿ ಬರುತ್ತಿರುವ ಕಿಚ್ಚನ ವೇಷ ನೋಡಿದ ಅಭಿಮಾನಿಗಳು ಬಹುಪರಾಕ್ ಎಂದಿದ್ದಾರೆ. ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ನಯನತಾರಾ ರಾಣಿ ಪಾತ್ರ ಮಾಡಿದ್ದಾರೆ. ವಿಜಯ್ ಸೇತುಪತಿ ಮತ್ತು ನಿಹಾರಿಕಾ ಸ್ವಾತಂತ್ರ್ಯ ಹೋರಾಟಕ್ಕೆ ಕೈ ಜೋಡಿಸಿದ ಆದಿವಾಸಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.
ಕನ್ನಡದಲ್ಲೂ ನೋಡಬಹುದು ಚಿರಂಜೀವಿ ಮೆಗಾ ಸಿನಿಮಾ 'ಸೈರಾ'

ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲವಾಡ ನರಸಿಂಹ ರೆಡ್ಡಿ ಜೀವನ ಚರಿತ್ರೆಯನ್ನು ತಿಳಿಸಲಿರುವ ವಿಡಿಯೋ ತುಣುಕನ್ನು ಚಿತ್ರತಂಡ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬಿಡುಗಡೆ ಮಾಡಿತ್ತು. ಅದರಲ್ಲಿ ಪ್ರಮುಖ ಪಾತ್ರಗಳ ಝಲಕ್‌ಗಳ ಅನಾವರಣ ಮಾಡಿತ್ತು. ಆಗ ಕಿಚ್ಚನ ಬಾದ್ ಷಾ ಅವತಾರ ನೋಡಿ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದವರು ಈ ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಾರಣ ಅಭಿನಯ ಚಕ್ರವರ್ತಿ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು. ಹೀಗಾಗಿ ಕರ್ನಾಟಕದಲ್ಲಿ ಪರಭಾಷೆಯ ಚಿತ್ರ 30 ಕೋಟಿ ರೂಪಾಯಿಗೂ ಅಧಿಕ ಮೊತ್ತಕ್ಕೆ ಮಾರಾಟವಾಗಿದೆ. ಈ ಹಿಂದೆ ರಾಜಮೌಳಿ ಅಭಿನಯದ ಬಾಹುಬಲಿ 2 ಚಿತ್ರ 36 ಕೋಟಿ ರೂಪಾಯಿಗೂ ಅಧಿಕ ಮೊತ್ತಕ್ಕೆ ಮಾರಾಟವಾಗಿತ್ತು. ಈ ಚಿತ್ರಕ್ಕೆ ನಟ ರಾಮಚರಣ್ ತೇಜ ಬಂಡವಾಳ ಹೂಡುತ್ತಿದ್ದಾರೆ. ಈ ಐತಿಹಾಸಿಕ ಚಿತ್ರ ಅಕ್ಟೋಬರ್ 2ಕ್ಕೆ ತೆರೆಗೆ ಬರುವ ನಿರೀಕ್ಷೆಯಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌