ಆ್ಯಪ್ನಗರ

ಗೃಹಬಂಧನದಲ್ಲಿ ಟಾಲಿವುಡ್ ನಟ ಮೋಹನ್ ಬಾಬು

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪ್ರತಿಭಟನಾ ರ‍್ಯಾಲಿಗೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಶ್ರೀವಿದ್ಯಾನಿಕೇತನ್ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ 19 ಕೋಟಿ ರೂ.ಗಳ ಶುಲ್ಕ ಮರುಪಾವತಿಸಲು ಸರಕಾರ ಹಲವಾರು ವರ್ಷಗಳಿಂದ ಆಲಸ್ಯ ಮಾಡುತ್ತಿದೆ ಎಂದು ಮೋಹನ್ ಬಾಬು ಆರೋಪಿಸಿದ್ದಾರೆ.

Vijaya Karnataka Web 22 Mar 2019, 11:42 am
ಟಾಲಿವುಡ್ ಸಿನಿಮಾ ನಟ, ಶ್ರೀವಿದ್ಯಾನಿಕೇತನ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಮೋಹನ್ ಬಾಬುರನ್ನು ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ. ಸರಕಾರ ತಮ್ಮ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡುತ್ತಿಲ್ಲ ಎಂದು ಆರೋಪಿಸಿರುವ ಮೋಹನ್ ಬಾಬು ಪ್ರತಿಭಟನಾ ರ‍್ಯಾಲಿಗೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಗೃಹಬಂಧನದಲ್ಲಿರಿಸಿದ್ದಾರೆ.
Vijaya Karnataka Web mohan-babu


ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪ್ರತಿಭಟನಾ ರ‍್ಯಾಲಿಗೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಶ್ರೀವಿದ್ಯಾನಿಕೇತನ್ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ 19 ಕೋಟಿ ರೂ.ಗಳ ಶುಲ್ಕ ಮರುಪಾವತಿಸಲು ಸರಕಾರ ಹಲವಾರು ವರ್ಷಗಳಿಂದ ಆಲಸ್ಯ ಮಾಡುತ್ತಿದೆ ಎಂದು ಮೋಹನ್ ಬಾಬು ಆರೋಪಿಸಿದ್ದಾರೆ.

ಇದೇ ವಿಚಾರವಾಗಿ ಹಲವಾರು ಸಲ ಸರಕಾರದ ಗಮನಕ್ಕೂ ತಂದರೂ ಸಮಸ್ಯೆಗೆ ಪರಿಹಾರ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಶುಲ್ಕ ಮರುಪಾವತಿ ಮಾಡಬೇಕು ಎಂದು ಆಗ್ರಹಿಸಿ 10 ಸಾವಿರ ಮಂದಿ ವಿದ್ಯಾರ್ಥಿಗಳ ಜತೆಗೆ ಶಿಕ್ಷಣ ಸಂಸ್ಥೆಯಿಂದ ತಿರುಪತಿವರೆಗೂ ಭಾರಿ ಪ್ರತಿಭಟನಾ ರ‍್ಯಾಲಿಗೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಭಾರಿ ಸಂಖ್ಯೆಯಲ್ಲಿ ಪೊಲೀಸರು ವಿದ್ಯಾನಿಕೇತನ್ ಶಿಕ್ಷಣ ಆಗಮಿಸಿದರು. ಈಗ ಮೋಹನ್ ಬಾಬುರನ್ನು ಗೃಹಬಂಧನದಲ್ಲಿರಿಸಲಾಗಿದೆ. ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮೋಹನ್ ಬಾಬು ಆತ್ಮೀಯ ಗೆಳೆಯ ಎಂಬುದು ಗೊತ್ತಿರುವುದೇ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌