ಆ್ಯಪ್ನಗರ

Nandamuri Harikrishna: ಅಪಘಾತದಲ್ಲಿ ಎನ್‌ಟಿಆರ್ ಪುತ್ರ, ನಟ ನಂದಮೂರಿ ಹರಿಕೃಷ್ಣ ದುರ್ಮರಣ

ನಲ್ಲಗೊಂಡ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಟಾಲಿವುಡ್ ಸಿನಿಮಾ ನಟ, ಮಾಜಿ ಸಂಸದ ನಂದಮೂರಿ ಹರಿಕೃಷ್ಣ (61) ಮೃತಪಟ್ಟಿದ್ದಾರೆ . ನಲ್ಲಗೊಂಡ ಜಿಲ್ಲೆ ಅನ್ನೇಪರ್ತಿ ಬಳಿ ಅಪಘಾತ ನಡೆದಿದೆ.

Samayam Telugu 29 Aug 2018, 10:40 am
ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಭಾವಮೈದುನ ಹಾಗೂ ಆಂಧ್ರದ ಮಾಜಿ ಮುಖ್ಯಮಂತ್ರಿ ಎನ್‍ಟಿ ರಾಮಾರಾವ್ ಪುತ್ರ ನಂದಮೂರಿ ಹರಿಕೃಷ್ಣ (61) ಬುಧವಾರ (ಆಗಸ್ಟ್ 29) ಮುಂಜಾನೆ ತೆಲಂಗಾಣದ ನಲ್ಗೊಂಡ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Vijaya Karnataka Web nandamuri-harikrishna


ನಲ್ಗೊಂಡ ಪೊಲೀಸ್ ವರಿಷ್ಠಾಧಿಕಾರಿ ಎವಿ ರಂಗನಾಥ್ ಮಾತನಾಡುತ್ತಾ, "ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟ, ರಾಜಕೀಯ ಮುಖಂಡ ಎನ್ ಹರಿಕೃಷ್ಣ ಅವರು ನಾರ್ಕೆಟ್‌ಪಲ್ಲಿಯ ಕಾಮಿನೇನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ" ಎಂದು ತಿಳಿಸಿದ್ದಾರೆ.


ಕಾರಿನಲ್ಲಿ ನೆಲ್ಲೂರಿನಿಂದ ಅವರು ಹೈದರಾಬಾದ್‌ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ಮಗುಚಿ ಬಿದ್ದಿದೆ. ಕಾರನ್ನು ಬಹುಶಃ ಹರಿಕೃಷ್ಣ ಅವರೇ ಚಾಲನೆ ಮಾಡುತ್ತಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


ಹರಿಕೃಷ್ಣ ಇಬ್ಬರು ಪುತ್ರರಾದ ಜೂನಿಯರ್ ಎನ್‌ಟಿಆರ್ ಮತ್ತು ನಂದಮೂರಿ ಕಲ್ಯಾಣರಾಮ್ ಸಹ ಟಾಲಿವುಡ್‌ನಲ್ಲಿ ಜನಪ್ರಿಯ ನಟರು. ಘಟನೆ ವಿವರ ತಿಳಿಯುತ್ತಿದ್ದಂತೆ ಅವರು ಆಸ್ಪತ್ರೆಗೆ ಧಾವಿಸಿದ್ದಾರೆ.


ನಟ ಜೂನಿಯರ್ ಎನ್‍ಟಿಆರ್ ಸಹ 2009ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ನಂದಮೂರಿ ಹರಿಕೃಷ್ಣ ಅವರ ಪುತ್ರ ನಂದಮೂರಿ ಜಾನಕಿರಾಮ್ ಅವರು 2014ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌