ಆ್ಯಪ್ನಗರ

ಕನ್ನಡದಲ್ಲಿ ತಯಾರಾದ ಹಾಲಿವುಡ್‌ ಮಾದರಿ ಚಿತ್ರ ಉದ್ಘರ್ಷ : ದೇವರಾಜ್‌

ಮಾ.22 ರಂದು 'ಉದ್ಘರ್ಷ' ಸಿನಿಮಾ ಏಕಕಾಲಕ್ಕೆ ನಾಲ್ಕು ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ. ನಿರ್ದೇಶಕ ಸುನೀಲ್‌ ಕುಮಾರ್‌ ದೇಸಾಯಿ ಎಲ್ಲ ಭಾಷೆಗಳಿಗೂ ಸಲ್ಲುವಂಥ ಸಿನಿಮಾ ಮಾಡಿದ್ದಾರೆ ಎಂದಿದ್ದಾರೆ ನಿರ್ಮಾಪಕ ದೇವರಾಜ್‌.

Vijaya Karnataka 21 Mar 2019, 5:00 am
* ಹರೀಶ್‌ ಬಸವರಾಜ್‌
Vijaya Karnataka Web udhgarsha


ಕನ್ನಡ ಸೇರಿದಂತೆ ಏಕಕಾಲಕ್ಕೆ ನಾಲ್ಕು ಭಾಷೆಗಳಲ್ಲಿ 'ಉದ್ಘರ್ಷ' ಸಿನಿಮಾ ರಿಲೀಸ್‌ ಮಾಡುವುದಾಗಿ ಹೇಳಿದ್ದಾರೆ ನಿರ್ಮಾಪಕ ದೇವರಾಜ್‌. ತಮ್ಮ ಚಿತ್ರಕ್ಕೆ ಕರ್ನಾಟಕದಲ್ಲಿ ಮಾತ್ರವಲ್ಲ ಹೊರ ರಾಜ್ಯಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸ್ವತಃ ವಿತರಕರು ಮುಂದೆ ಬಂದು ಸಿನಿಮಾವನ್ನು ಬಿಡುಗಡೆ ಮಾಡಲು ಉತ್ಸುಕರಾಗಿದ್ದಾರೆ' ಎನ್ನುತ್ತಾರೆ ನಿರ್ಮಾಪಕರು.

'ಉದ್ಘರ್ಷ ಸಿನಿಮಾವನ್ನು ಕರ್ನಾಟಕದಲ್ಲಿ 250 ಥಿಯೇಟರ್‌ನಲ್ಲಿ ರಿಲೀಸ್‌ ಮಾಡಲು ಪ್ಲಾನ್‌ ಮಾಡಿದ್ದೇವೆ. ತಮಿಳಿನ ಹೆಸರಾಂತ ವಿತರಣಾ ಸಂಸ್ಥೆ ಅಲ್ಲಿಯೂ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿದೆ. ತೆಲುಗು ಮತ್ತು ಮಲೆಯಾಳಂನಲ್ಲಿಯೂ ಚಿತ್ರ ರಿಲೀಸ್‌ ಆಗುತ್ತಿದೆ. ಎಲ್ಲ ಭಾಷೆಗಳಲ್ಲೂ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುವ ವಿಶ್ವಾಸ ನಮ್ಮದು' ಎಂದರು ದೇವರಾಜ್‌.

'ನಟಿ ಧನ್ಸಿಕಾ ತಮಿಳು ನಾಡಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಚಿತ್ರದ ನಾಯಕ ಠಾಕೂರ್‌ ಅನೂಪ್‌ ಸಿಂಗ್‌ ಪಾದರಸದಂತೆ ಎಲ್ಲ ಕಡೆಯೂ ಓಡಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಹೊಸ ರೀತಿಯ ಸ್ಕ್ರೀನ್‌ ಪ್ಲೇ ಇದೆ. ಒಮ್ಮೆ ಚಿತ್ರಮಂದಿರಕ್ಕೆ ಎಂಟ್ರಿ ಕೊಟ್ಟರೆ ಮೈಮರೆತು ಸಿನಿಮಾ ನೋಡಬಹುದು. ಅಷ್ಟರ ಮಟ್ಟಿಗೆ ನಿರ್ದೇಶಕ ಸುನೀಲ್‌ ಕುಮಾರ್‌ ದೇಸಾಯಿವರು ಸಿನಿಮಾ ಮಾಡಿದ್ದಾರೆ' ಎನ್ನುತ್ತಾರೆ ನಿರ್ಮಾಪಕರು.

ಡಿ ಕ್ರಿಯೇಶನ್ಸ್‌ ಬ್ಯಾನರ್‌ನಡಿ ಈ ಚಿತ್ರವನ್ನು ದೇವರಾಜ್‌ ನಿರ್ಮಾಣ ಮಾಡಿದ್ದು, ಠಾಕೂರ್‌ ಅನೂಪ್‌ ಸಿಂಗ್‌, ಸಾಯಿ ಧನ್ಸಿಕಾ, ಶ್ರದ್ಧಾ ದಾಸ್‌ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿ ಇದ್ದಾರೆ.

ಹಾಲಿವುಡ್‌ ಮಾದರಿಯಲ್ಲಿ ಈ ಚಿತ್ರ ಮೂಡಿ ಬಂದಿದೆ. ಉದ್ಘರ್ಷ ಬೇರೆ ರೀತಿಯ ಫೀಲ್‌ ಇರುವ ಸಿನಿಮಾ. ಮುಂದಿನ ದಿನಗಳಲ್ಲಿ ನನ್ನ ಪ್ರೊಡಕ್ಷನ್‌ ಹೌಸ್‌ನಿಂದ ಒಂದಷ್ಟು ಒಳ್ಳೆಯ ಚಿತ್ರಗಳನ್ನು ನಿರ್ಮಾಣ ಮಾಡುತ್ತೇನೆ.

-ದೇವರಾಜ್‌, ನಿರ್ಮಾಪಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌