ಆ್ಯಪ್ನಗರ

ನಟಿ‌ ಜಯಂತಿ ಆರೋಗ್ಯದಲ್ಲಿ ಚೇತರಿಕೆ: ವೈದ್ಯರ ಹೇಳಿಕೆ

ಕನ್ನಡದ ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ ಎಂದು ಪುತ್ರ ಕೃಷ್ಣ ಕುಮಾರ್ ಮತ್ತು ವಿಕ್ರಮ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Vijaya Karnataka Web 28 Mar 2018, 9:33 am
ಬೆಂಗಳೂರು: ಕನ್ನಡದ ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ ಎಂದು ಪುತ್ರ ಕೃಷ್ಣ ಕುಮಾರ್ ತಿಳಿಸಿದ್ದು, ವಿಕ್ರಮ ಆಸ್ಪತ್ರೆಯ ವೈದ್ಯರೂ ಕೂಡ ಇದೇ ಹೇಳಿಕೆ ನೀಡಿದ್ದಾರೆ.
Vijaya Karnataka Web jayanthi

ಜಯಂತಿ ಅವರ ಆರೋಗ್ಯ ಸುಧಾರಿಸುತ್ತಿದ್ದು, ನಿಗಾ ಮುಂದುವರಿಸಲಾಗಿದೆ. ಚೇತರಿಕೆಯನ್ನು ಗಮನಿಸಿ ವೆಂಟಿಲೇಟರ್‌ ಅನ್ನು ತೆಗೆಯುವ ನಿರೀಕ್ಷೆಯಿದೆ ಎಂದು ವಿಕ್ರಮ ಆಸ್ಪತ್ರೆಯ ವೈದ್ಯರ ತಂಡ ಹೇಳಿಕೆ ನೀಡಿದೆ.

ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದೂ ಹೇಳಲಾಗುತ್ತಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಯಂತಿ ಅವರನ್ನು ಬೆಂಗಳೂರು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಇದರಿಂದಾಗಿ ಅಭಿಮಾನಿಗಳಲ್ಲಿ ಕಳವಳ ಮೂಡಿತ್ತು.

ಅಮ್ಮನ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡುಬಂದಿದ್ದು, ಕೈ ಸೆನ್ನೆ ಮೂಲಕ ಮಾತಾಡಿದೆ ಎಂದು ಕೃಷ್ಣ ಕುಮಾರ್ ಮಾಹಿತಿ ನೀಡಿದ್ದಾರೆ.

ಅಭಿನಯ ಶಾರದೆ ಜಯಂತಿ ಅವರಿಗೆ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌