ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸುದೀಪ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಿಚ್ಚ ಸುದೀಪ್ ಸೋಮವಾರ ಭೇಟಿ ಮಾಡಿ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಪುಣ್ಯಭೂಮಿಯಾಗಿ ನಿರ್ಮಿಸುವಂತೆ ಮನವಿ ಮಾಡಿದ್ದಾರೆ.
TNN 11 Dec 2017, 5:45 pm
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಿಚ್ಚ ಸುದೀಪ್ ಸೋಮವಾರ ಭೇಟಿ ಮಾಡಿ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಪುಣ್ಯಭೂಮಿಯಾಗಿ ನಿರ್ಮಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಯಿಸಿದ್ದಾಗಿ ಸುದೀಪ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿರುವ ಸುದೀಪ್, 'ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಬೇರೆಡೆಗೆ ಸ್ಥಳಾಂತರ ಮಾಡುವುದು ಬೇಡ. ಈ ಸ್ಥಳವನ್ನು ಪುಣ್ಯಭೂಮಿಯಾಗಿ ಅಭಿವೃದ್ಧಿಪಡಿಸುವಂತೆ ಮುಖ್ಯಮಂತ್ರಿಗಳನ್ನು ಕೋರಲಾಯಿತು' ಎಂದಿದ್ದಾರೆ.
ಅವರ ಸಮಾಧಿ ಸ್ಥಳದಲ್ಲಿ 100 ಎಕರೆ ಜಮೀನನ್ನು ಖರೀದಿಸುವುದಾಗಿ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಅದನ್ನು ಅಭಿವೃದ್ಧಿಪಡಿಸುವ ಬಗ್ಗೆ ಮುಖ್ಯಮಂತ್ರಿಗಳು ಸಹ ಭರವಸೆ ನೀಡಿದ್ದಾರೆ ಎಂದು ಕಿಚ್ಚ ತಿಳಿಸಿದರು. ಅವರ ಸಮಾಧಿ ಸ್ಥಳದಲ್ಲಿ ಪುಣ್ಯಭೂಮಿಯನ್ನು ನಿರ್ಮಿಸಿ, ಸ್ಮಾರಕ ಬೇಕಿದ್ದರೆ ಮೈಸೂರಿನಲ್ಲಿ ನಿರ್ಮಿಸಲು ಭಾರತಿ ವಿಷ್ಣುವರ್ಧನ್ ಅವರ ಅಭ್ಯಂತರವೇನಿಲ್ಲ ಎಂಬುದನ್ನು ಸಿಎಂಗೆ ಮನವರಿಕೆ ಮಾಡಿಕೊಟ್ಟಿದ್ದಾಗಿ ಅವರು ವಿವರ ನೀಡಿದರು.
ಇದೇ ಡಿಸೆಂಬರ್ 30ರಂದು ವಿಷ್ಣುವರ್ಧನ್ ಅವರ 8ನೇ ಪುಣ್ಯಸ್ಮರಣೆ ಇದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದೇವೆ ಎಂದು ಸುದೀಪ್ ತಿಳಿಸಿದರು. ಬೆಂಗಳೂರು ಉತ್ತರಹಳ್ಳಿಯ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ಇದೆ.
ಈ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿರುವ ಸುದೀಪ್, 'ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಬೇರೆಡೆಗೆ ಸ್ಥಳಾಂತರ ಮಾಡುವುದು ಬೇಡ. ಈ ಸ್ಥಳವನ್ನು ಪುಣ್ಯಭೂಮಿಯಾಗಿ ಅಭಿವೃದ್ಧಿಪಡಿಸುವಂತೆ ಮುಖ್ಯಮಂತ್ರಿಗಳನ್ನು ಕೋರಲಾಯಿತು' ಎಂದಿದ್ದಾರೆ.
ಅವರ ಸಮಾಧಿ ಸ್ಥಳದಲ್ಲಿ 100 ಎಕರೆ ಜಮೀನನ್ನು ಖರೀದಿಸುವುದಾಗಿ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಅದನ್ನು ಅಭಿವೃದ್ಧಿಪಡಿಸುವ ಬಗ್ಗೆ ಮುಖ್ಯಮಂತ್ರಿಗಳು ಸಹ ಭರವಸೆ ನೀಡಿದ್ದಾರೆ ಎಂದು ಕಿಚ್ಚ ತಿಳಿಸಿದರು. ಅವರ ಸಮಾಧಿ ಸ್ಥಳದಲ್ಲಿ ಪುಣ್ಯಭೂಮಿಯನ್ನು ನಿರ್ಮಿಸಿ, ಸ್ಮಾರಕ ಬೇಕಿದ್ದರೆ ಮೈಸೂರಿನಲ್ಲಿ ನಿರ್ಮಿಸಲು ಭಾರತಿ ವಿಷ್ಣುವರ್ಧನ್ ಅವರ ಅಭ್ಯಂತರವೇನಿಲ್ಲ ಎಂಬುದನ್ನು ಸಿಎಂಗೆ ಮನವರಿಕೆ ಮಾಡಿಕೊಟ್ಟಿದ್ದಾಗಿ ಅವರು ವಿವರ ನೀಡಿದರು.
ಇದೇ ಡಿಸೆಂಬರ್ 30ರಂದು ವಿಷ್ಣುವರ್ಧನ್ ಅವರ 8ನೇ ಪುಣ್ಯಸ್ಮರಣೆ ಇದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದೇವೆ ಎಂದು ಸುದೀಪ್ ತಿಳಿಸಿದರು. ಬೆಂಗಳೂರು ಉತ್ತರಹಳ್ಳಿಯ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ಇದೆ.