ಐಟಿ ದಾಳಿಗೆ ಸಂಬಂಧಿಸಿದಂತೆ ನನ್ನ ಹತ್ತಿರ ಎಲ್ಲ ದಾಖಲೆಗಳೂ ಇವೆ. ಹಾಗಾಗಿ ಹೆದರಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದಿದ್ದಾರೆ ಪುನೀತ್ ರಾಜ್ಕುಮಾರ್.
ಸೋಮವಾರ ಬೆಂಗಳೂರಿನಲ್ಲಿ ನಡೆದ 'ಎನ್ಟಿಆರ್' ತೆಲುಗು ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪುನೀತ್, ಐಟಿ ದಾಳಿಯ ಬಗ್ಗೆ ಕೆಲ ಮಾಹಿತಿಗಳನ್ನು ಮಾಧ್ಯಮಗಳ ಜತೆ ಹಂಚಿಕೊಂಡರು.
'ಮನೆಗೆ ಬಂದಿದ್ದ ಐಟಿ ಅಧಿಕಾರಿಗಳು ತಮ್ಮ ವೃತ್ತಿಯನ್ನು ಮಾಡಿದ್ದಾರೆ. ನಮ್ಮೊಂದಿಗೆ ಗೌರವಯುತವಾಗಿ ನಡೆದುಕೊಂಡಿದ್ದಾರೆ. ನಾವು ಕೂಡ ಅವರ ಕೆಲಸಕ್ಕೆ ಸ್ಪಂದಿಸಿದ್ದೇವೆ. ತೆರಿಗೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನಾವು ಅಧಿಕಾರಿಗಳಿಗೆ ನೀಡುತ್ತವೆ. ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ಭಯಪಡುವ ಪ್ರಶ್ನೆಯೇ ಇಲ್ಲ' ಎಂದರು ಪುನೀತ್.
ದಾಳಿಗೆ ಸಂಬಂಧಿಸಿದಂತೆ ಈಗಾಗಲೇ ನಿರ್ಮಾಪಕರು ಐಟಿ ಅಧಿಕಾರಿಗಳ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಪುನೀತ್, ಯಶ್, ಸುದೀಪ್, ಶಿವರಾಜ್ ಕುಮಾರ್ ಹಾಜರಾಗಬೇಕಿದೆ.
ಸೋಮವಾರ ಬೆಂಗಳೂರಿನಲ್ಲಿ ನಡೆದ 'ಎನ್ಟಿಆರ್' ತೆಲುಗು ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪುನೀತ್, ಐಟಿ ದಾಳಿಯ ಬಗ್ಗೆ ಕೆಲ ಮಾಹಿತಿಗಳನ್ನು ಮಾಧ್ಯಮಗಳ ಜತೆ ಹಂಚಿಕೊಂಡರು.
'ಮನೆಗೆ ಬಂದಿದ್ದ ಐಟಿ ಅಧಿಕಾರಿಗಳು ತಮ್ಮ ವೃತ್ತಿಯನ್ನು ಮಾಡಿದ್ದಾರೆ. ನಮ್ಮೊಂದಿಗೆ ಗೌರವಯುತವಾಗಿ ನಡೆದುಕೊಂಡಿದ್ದಾರೆ. ನಾವು ಕೂಡ ಅವರ ಕೆಲಸಕ್ಕೆ ಸ್ಪಂದಿಸಿದ್ದೇವೆ. ತೆರಿಗೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನಾವು ಅಧಿಕಾರಿಗಳಿಗೆ ನೀಡುತ್ತವೆ. ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ಭಯಪಡುವ ಪ್ರಶ್ನೆಯೇ ಇಲ್ಲ' ಎಂದರು ಪುನೀತ್.
ದಾಳಿಗೆ ಸಂಬಂಧಿಸಿದಂತೆ ಈಗಾಗಲೇ ನಿರ್ಮಾಪಕರು ಐಟಿ ಅಧಿಕಾರಿಗಳ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಪುನೀತ್, ಯಶ್, ಸುದೀಪ್, ಶಿವರಾಜ್ ಕುಮಾರ್ ಹಾಜರಾಗಬೇಕಿದೆ.