ಆ್ಯಪ್ನಗರ

ಯಶ್‌ ಕಾರಿನ ಗಾಜು ಪುಡಿ ಪುಡಿ!

ರಾಕಿಂಗ್‌ ಸ್ಟಾರ್‌ ಯಶ್‌ ಕಾರ್ಯಕ್ರಮಕ್ಕೆ ತಡವಾಗಿ ಬಂದ ಕಾರಣ ಅಭಿಮಾನಿಗಳ ಕೋಪಕ್ಕೆ ಗುರಿಯಾದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ವಿಕ ಸುದ್ದಿಲೋಕ 28 Feb 2017, 10:57 am
ಯಾದಗಿರಿ: ರಾಕಿಂಗ್‌ ಸ್ಟಾರ್‌ ಯಶ್‌ ಕಾರ್ಯಕ್ರಮಕ್ಕೆ ತಡವಾಗಿ ಬಂದ ಕಾರಣ ಅಭಿಮಾನಿಗಳ ಕೋಪಕ್ಕೆ ಗುರಿಯಾದ ಘಟನೆ ನಿನ್ನೆ ಫೆಬ್ರವರಿ 27ರ ರಾತ್ರಿ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
Vijaya Karnataka Web yashs car glass broken
ಯಶ್‌ ಕಾರಿನ ಗಾಜು ಪುಡಿ ಪುಡಿ!


ಯಾದಗಿರಿ ಜಿಲ್ಲೆಯ ಸುರುಪುರದಲ್ಲಿ ಆಯೋಜಿಸಲಾದ ರೈತರ ಸಂವಾದ ಕಾರ್ಯಕ್ರಮಕ್ಕೆ ಯಶ್‌ ತಡವಾಗಿ ಬಂದಿದ್ದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯಿತು ಎಂದು ಹೇಳಲಾಗುತ್ತಿದೆ.

ಹೀಗಾಗಿ ಅಭಿಮಾನಿಗಳು ಯಶ್‌ ಕಾರಿನ ಮೇಲೆ ಮುಗಿಬಿದ್ದ ಕಾರಣ ವಾಹನದ ಗಾಜು ಪುಡಿ ಪುಡಿಯಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಯಶ್‌, ಅಭಿಮಾನಿಗಳಾದರೂ, ಈ ರೀತಿ ಆಕ್ರೋಶ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ 'ಯಶೋಮಾರ್ಗ' ಕಾರ್ಯಕ್ರಮದ ಅಂಗವಾಗಿ ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಬರ ಅಧ್ಯಯನದಲ್ಲಿ ತೊಡಗಿರುವ ಯಶ್‌, ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ, ರೈತರ ಜತೆ ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌