ಆ್ಯಪ್ನಗರ

ನಟಿ ಹರ್ಷಿಕಾ ಪೂಣಚ್ಚಗೆ ಕಿರುಕುಳ, ಆರೋಪಿ ಬಂಧನ

ಸಂಬಂಧಿಕರೊಬ್ಬರ ನಿಶ್ಚಿತಾರ್ಥ ನಿಮಿತ್ತ ಮಡಿಕೇರಿಯ ನೀರುಕೊಲ್ಲಿ ಗ್ರಾಮದಲ್ಲಿನ ರೆಸಾರ್ಟ್‌ಗೆ ಹೋಗಿದ್ದರು. ಗುರುವಾರ ರಾತ್ರಿ ಹರ್ಷಿಕಾ ಸಂಬಂಧಿಕರ ನಿಶ್ಚಿತಾರ್ಥ ಇತ್ತು. ಈ ಸಂದರ್ಭದಲ್ಲಿ ಬನ್ಸಿ ಪೊನ್ನಪ್ಪ, ಬಿಪಿನ್ ದೇವಯ್ಯ ಎಂಬುವವರು ಅಸಭ್ಯವಾಗಿ ವರ್ತಿಸಿದ್ದಾರೆ.

Vijaya Karnataka Web 3 May 2019, 6:24 pm
ಸಂಬಂಧಿಕರೊಬ್ಬರ ನಿಶ್ಚಿತಾರ್ಥಕ್ಕೆ ಹೋಗಿದ್ದ ಸ್ಯಾಂಡಲ್‍ವುಡ್ ತಾರೆ ಹರ್ಷಿಕಾ ಪೂಣಚ್ಚಗೆ ಅಹಿತಕರ ಘಟನೆಯೊಂದು ಎದುರಾಗಿದೆ. ಈ ಸಂಬಂಧ ಮಡಿಕೇರಿಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web harshika-poonacha


ಸ್ನೇಹಿತರ ನಿಶ್ಚಿತಾರ್ಥಕ್ಕೆ ತೆರಳಿದ್ದ ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚಗೆ ಯುವಕರು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಓರ್ವನನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ನೆನ್ನೆ ರಾತ್ರಿ ಮಡಿಕೇರಿ ನಗರದ ಹೊರಭಾಗದ ರೆಸಾರ್ಟ್ ಒಂದರಲ್ಲಿ ನಡೆಯುತ್ತಿದ್ದ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ನಟ ಭುವನ್ ಹಾಗೂ ಹರ್ಷಿಕಾ ಪೂಣಚ್ಚ ಭಾಗವಹಿಸಿದ್ದರು. ರಾತ್ರಿ ಸುಮಾರು 11 ಗಂಟೆ ವೇಳೆಗೆ ಬನ್ಸಿ ನಾಣಯ್ಯ ಹಾಗೂ ಬಿಪಿನ್ ದೇವಯ್ಯ ತನ್ನ ಬಳಿ ಮಾತನಾಡಬಾರದು ಅಂತ ಹರ್ಷಿಕಾ ಹೇಳಿದ್ರು ಎನ್ನಲಾಗಿದೆ.‌

ಇದ್ರಿಂದ ಮಾತಿಗೆ ಮಾತು ಬೆಳೆದು ಗಲಾಟೆ ಜೋರಾದಾಗ ನಟ ಭುವನ್, ಹರ್ಷಿಕಾ ಪರ ನಿಂತಿದ್ದಾರೆ. ಆಗ ಹೊಡೆದಾಟ ನಡೆದಿದ್ದು, ಭುವನ್ ಅವರ ಕೈ ಹಾಗೂ ಮುಖಕ್ಕೆ ಗಾಯವಾಗಿದೆ. ರಾತ್ರಿಯೇ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಭುವನ್ ಚಿಕಿತ್ಸೆ ಪಡೆದಿದ್ದಾರೆ. ಅಲ್ಲದೆ ಹರ್ಷಿಕಾ ಜೊತೆ ಮಡಿಕೇರಿ ಗ್ರಾಮಾಂತರ ಠಾಣೆಗೆ ಆಗಮಿಸಿ ಬನ್ಸಿ ಹಾಗೂ ಬಿಪಿನ್ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ‌.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬನ್ಸಿ ನಾಣಯ್ಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮತ್ತೋರ್ವ ಆರೋಪಿ ಬಿಪಿನ್ ದೇವಯ್ಯ ತಲೆಮರೆಸಿಕೊಂಡಿದ್ದು ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಬೆಂಗಳೂರಿಗೆ ತೆರಳಿದ್ದಾರೆ. ಇದರ ನಡುವೆ ಭುವನ್ ಹಾಗೂ ಹರ್ಷಿಕಾ ಪೂಣಚ್ಚ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪ್ರತಿಕ್ರಿಯಿಸಲು ಯಾರಿಗೂ ಸಿಗ್ತಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌