ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದ ಸಲ್ಲಿಸುವ ಸಲುವಾಗಿ ಮನೆಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟಿ ಎಂದು ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಕರೆ ನೀಡದ್ದಕ್ಕೆ ಬಹುತೇಕರು ಬೀದಿಯಲ್ಲಿ ಗುಂಪು ಗುಂಪಾಗಿ ಚಪ್ಪಾಳೆ ತಟ್ಟಿದ್ದರು. ಈಗ ದೀಪ ಹಚ್ಚಿ ಎಂದು ಅವರು ಹೇಳಿರುವುದು ಪರ-ವಿರೋಧದ ಚರ್ಚೆ ಹುಟ್ಟುಹಾಕಿದೆ. ಅದರ ನಡುವೆಯೂ ಸೆಲೆಬ್ರಿಟಿಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ. ಏಪ್ರಿಲ್ 5ರಂದು ರಾತ್ರಿ 9 ಗಂಟೆಗೆ ದೀಪ ಬೆಳಗಿಸಲು ಇಡೀ ದೇಶದ ಜನತೆ ಸಿದ್ಧತೆ ಮಾಡಿಕೊಂಡಿದೆ. ಅದಕ್ಕೆ ಅನೇಕ ಸೆಲೆಬ್ರಿಟಿಗಳು ಸಾಥ್ ನೀಡುತ್ತಿದ್ದಾರೆ. ಡಿ ಬಾಸ್ ದರ್ಶನ್ ಕೂಡ ತಮ್ಮ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ಹೇಳಿದ ಮಾತನ್ನು ಪಾಲಿಸಲು ಅಭಿಮಾನಿಗಳು ಕೂಡ ಸಜ್ಜಾಗಿದ್ದಾರೆ.
'ನಮ್ಮ ಪ್ರಧಾನಿಗಳ ಕರೆಯಂತೆ ಕೊರೋನ ವೈರಸ್ನಿಂದ ತುಂಬಿರುವ ಅಂಧಕಾರವನ್ನು ಏಪ್ರಿಲ್ 5 , ರಾತ್ರಿ 9 ಗಂಟೆಗೆ ನಿಮ್ಮ ಮನೆಯಂಗಳದಿಂದಲೇ ಮೊಂಬತ್ತಿ/ದೀಪಗಳನ್ನು ಹಚ್ಚುವ ಮೂಲಕ ಆದಷ್ಟು ಬೇಗ ಈ ಪಿಡುಗಿನಿಂದ ಪಾರಾಗುವ ಭರವಸೆಯನ್ನು ಎಲ್ಲರಲ್ಲೂ ಮೂಡಿಸೋಣ' ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ. ಜೊತೆಗೆ, 'ಎಲ್ಲಾ ಭಾರತೀಯರ ಒಗ್ಗಟ್ಟಿನಿಂದ ಮಾತ್ರ ಈ ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ. ಮನೆಯಲ್ಲಿಯೇ ಭದ್ರವಾಗಿರಿ. ನಿಮ್ಮ ನೆರೆಹೊರೆಯ ಜನರಿಗೆ ಬೆನ್ನೆಲುಬಾಗಿರಿ' ಎಂಬ ಸಲಹೆಯನ್ನೂ ಅವರು ನೀಡಿದ್ದಾರೆ.
'ಅಕ್ಕಪಕ್ಕದ ಬಡ ಜನರಿಗೆ ಒಪ್ಪೊತ್ತು ಕೂಳಿಗಾದರೂ ನೆರವಾಗಿ' ಎಂದ ಚಾಲೆಂಜಿಂಗ್ ಸ್ಟಾರ್ ದರ್ಶನ್
ದೇಶದಲ್ಲಿ ಕೊರೊನಾ ಹಾವಳಿ ಶುರುವಾದಾಗಿನಿಂದಲೂ ಹಲವು ವಿಚಾರಗಳಲ್ಲಿ ಅಭಿಮಾನಿಗಳಿಗೆ ದರ್ಶನ್ ಸಲಹೆ ನೀಡುತ್ತಲೇ ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ಆಗಿರುವ ಅವರು, ಬಡಜನರಿಗೆ ಆಹಾರದ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು. ಜೊತೆಗೆ, ಈ ಸೋಂಕು ಹರಡದಂತೆ ತಡೆಗಟ್ಟಲು ಏನು ಮಾಡಬೇಕು ಎಂಬ ಬಗ್ಗೆಯೂ ಜನರಿಗೆ ಕಿವಿಮಾತು ಹೇಳಿದ್ದರು. ಅದಕ್ಕೆ ತಕ್ಕಂತೆಯೇ ಅಭಿಮಾನಿಗಳು ನಡೆದುಕೊಂಡಿದ್ದಾರೆ. ಅನೇಕ ಕಡೆಗಳಲ್ಲಿ ಬಡವರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ.
'ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ'! 'ಡಿ ಬಾಸ್' ದರ್ಶನ್ ಹೀಗ್ಯಾಕೆ ಹೇಳಿದ್ರು?
ಇನ್ನು, ಈ ಲಾಕ್ಡೌನ್ನಿಂದಾಗಿ ದರ್ಶನ್ ನಟನೆಯ 'ರಾಬರ್ಟ್' ಚಿತ್ರಕ್ಕೆ ತೊಂದರೆ ಆಗಿದೆ. ಒಂದು ವೇಳೆ ಕೊರೊನಾ ಮಹಾಮಾರಿಯ ಕಾಟ ಇಲ್ಲದಿದ್ದರೆ ಇಷ್ಟ ಹೊತ್ತಿಗಾಗಲೇ 'ರಾಬರ್ಟ್' ಅಬ್ಬರ ಶುರುವಾಗಿರುತ್ತಿತ್ತು. ಏಪ್ರಿಲ್ ಮೊದಲ ವಾರದಲ್ಲಿ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ ಲಾಕ್ಡೌನ್ ಇರುವುದರಿಂದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.
'ನಮ್ಮ ಪ್ರಧಾನಿಗಳ ಕರೆಯಂತೆ ಕೊರೋನ ವೈರಸ್ನಿಂದ ತುಂಬಿರುವ ಅಂಧಕಾರವನ್ನು ಏಪ್ರಿಲ್ 5 , ರಾತ್ರಿ 9 ಗಂಟೆಗೆ ನಿಮ್ಮ ಮನೆಯಂಗಳದಿಂದಲೇ ಮೊಂಬತ್ತಿ/ದೀಪಗಳನ್ನು ಹಚ್ಚುವ ಮೂಲಕ ಆದಷ್ಟು ಬೇಗ ಈ ಪಿಡುಗಿನಿಂದ ಪಾರಾಗುವ ಭರವಸೆಯನ್ನು ಎಲ್ಲರಲ್ಲೂ ಮೂಡಿಸೋಣ' ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ. ಜೊತೆಗೆ, 'ಎಲ್ಲಾ ಭಾರತೀಯರ ಒಗ್ಗಟ್ಟಿನಿಂದ ಮಾತ್ರ ಈ ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ. ಮನೆಯಲ್ಲಿಯೇ ಭದ್ರವಾಗಿರಿ. ನಿಮ್ಮ ನೆರೆಹೊರೆಯ ಜನರಿಗೆ ಬೆನ್ನೆಲುಬಾಗಿರಿ' ಎಂಬ ಸಲಹೆಯನ್ನೂ ಅವರು ನೀಡಿದ್ದಾರೆ.
'ಅಕ್ಕಪಕ್ಕದ ಬಡ ಜನರಿಗೆ ಒಪ್ಪೊತ್ತು ಕೂಳಿಗಾದರೂ ನೆರವಾಗಿ' ಎಂದ ಚಾಲೆಂಜಿಂಗ್ ಸ್ಟಾರ್ ದರ್ಶನ್
ದೇಶದಲ್ಲಿ ಕೊರೊನಾ ಹಾವಳಿ ಶುರುವಾದಾಗಿನಿಂದಲೂ ಹಲವು ವಿಚಾರಗಳಲ್ಲಿ ಅಭಿಮಾನಿಗಳಿಗೆ ದರ್ಶನ್ ಸಲಹೆ ನೀಡುತ್ತಲೇ ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ಆಗಿರುವ ಅವರು, ಬಡಜನರಿಗೆ ಆಹಾರದ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು. ಜೊತೆಗೆ, ಈ ಸೋಂಕು ಹರಡದಂತೆ ತಡೆಗಟ್ಟಲು ಏನು ಮಾಡಬೇಕು ಎಂಬ ಬಗ್ಗೆಯೂ ಜನರಿಗೆ ಕಿವಿಮಾತು ಹೇಳಿದ್ದರು. ಅದಕ್ಕೆ ತಕ್ಕಂತೆಯೇ ಅಭಿಮಾನಿಗಳು ನಡೆದುಕೊಂಡಿದ್ದಾರೆ. ಅನೇಕ ಕಡೆಗಳಲ್ಲಿ ಬಡವರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ.
'ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ'! 'ಡಿ ಬಾಸ್' ದರ್ಶನ್ ಹೀಗ್ಯಾಕೆ ಹೇಳಿದ್ರು?
ಇನ್ನು, ಈ ಲಾಕ್ಡೌನ್ನಿಂದಾಗಿ ದರ್ಶನ್ ನಟನೆಯ 'ರಾಬರ್ಟ್' ಚಿತ್ರಕ್ಕೆ ತೊಂದರೆ ಆಗಿದೆ. ಒಂದು ವೇಳೆ ಕೊರೊನಾ ಮಹಾಮಾರಿಯ ಕಾಟ ಇಲ್ಲದಿದ್ದರೆ ಇಷ್ಟ ಹೊತ್ತಿಗಾಗಲೇ 'ರಾಬರ್ಟ್' ಅಬ್ಬರ ಶುರುವಾಗಿರುತ್ತಿತ್ತು. ಏಪ್ರಿಲ್ ಮೊದಲ ವಾರದಲ್ಲಿ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ ಲಾಕ್ಡೌನ್ ಇರುವುದರಿಂದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.