ಆ್ಯಪ್ನಗರ

ಖ್ಯಾತ ನಟ ಮಂಡ್ಯ ರಮೇಶ್‌ ಅವರ ತಂದೆ ಎನ್‌. ಸುಬ್ರಹ್ಮಣ್ಯಂ ನಿಧನ!

ನಟ ಮಂಡ್ಯ ರಮೇಶ್‌ ಅವರ ತಂದೆ ರಂಗಕರ್ಮಿ, ಕಲಾವಿದ ಎನ್‌. ಸುಬ್ರಹ್ಮಣ್ಯಂ ಶುಕ್ರವಾರ (ನ.13) ಕೊನೆಯುಸಿರೆಳೆದರು. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ಶುಕ್ರವಾರ ಸಂಜೆ ಮೈಸೂರಿನ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

Vijaya Karnataka Web 13 Nov 2020, 9:45 pm
ಜನಪ್ರಿಯ ಸಿನಿಮಾ ನಟ, ರಂಗಭೂಮಿ ಕಲಾವಿದ ಮಂಡ್ಯ ರಮೇಶ್‌ ಅವರ ತಂದೆ ಎನ್‌. ಸುಬ್ರಹ್ಮಣ್ಯಂ ಅವರು ಶುಕ್ರವಾರ (ನ.13) ನಿಧನರಾದರು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಸುಬ್ರಹ್ಮಣ್ಯಂ ಅವರಿಗೆ 90 ವರ್ಷ ವಯಸ್ಸಾಗಿತ್ತು.
Vijaya Karnataka Web ಎನ್‌. ಸುಬ್ರಹ್ಮಣ್ಯಂ


ತಂದೆಯ ಅಗಲಿಕೆಯ ಸುದ್ದಿಯನ್ನು ಸೋಶಿಯಲ್‌ ಮೀಡಿಯಾ ಮೂಲಕ ಮಂಡ್ಯ ರಮೇಶ್‌ ಖಚಿತಪಡಿಸಿದ್ದಾರೆ. ಶುಕ್ರವಾರ ಸಂಜೆಯೇ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಮುಕ್ತಿಧಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಮಂಡ್ಯ ರಮೇಶ್‌ ಅವರ 'ನಟನ' ಸಂಸ್ಥೆಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯಂ ರಂಗಭೂಮಿ ಕೆಲಸಗಳಲ್ಲಿ ತೊಡಗಿಕೊಂಡಿದ್ದರು.

'ನನ್ನಪ್ಪ ಮಾತು ನಿಲ್ಲಿಸಿದರು. ಅವರದ್ದು ತೊಂಭತ್ತು ವರ್ಷಗಳ ತುಂಬು ಜೀವನ. ನಲವತ್ತು ವರ್ಷದ ಸರ್ಕಾರಿ ಉದ್ಯೋಗ. ನಿವೃತ್ತಿಯ ನಂತರ ಧಾರ್ಮಿಕ, ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ತೊಡಗಿಕೊಂಡವರು. ನಟನ ಸಂಸ್ಥೆಯ ಅಧ್ಯಕ್ಷರಾಗಿ ಆರಂಭದಿಂದಲೂ ಕಾರ್ಯ ನಿರ್ವಹಣೆ ಮಾಡಿದ್ದರು' ಎಂದು ತಂದೆಗೆ ನುಡಿ ನಮನ ಸಲ್ಲಿಸಿದ್ದಾರೆ ಮಂಡ್ಯ ರಮೇಶ್‌.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌