ಆ್ಯಪ್ನಗರ

ಪ್ರಜ್ವಲ್ ದೇವರಾಜ್ ನಟನೆಯ 'ಅರ್ಜುನ್ ಗೌಡ' ಸಿನಿಮಾ ತಂಡದಿಂದ ಸಿಹಿಸುದ್ದಿ!

'ಡೈನಾಮಿಕ್ ಪ್ರಿನ್ಸ್' ಪ್ರಜ್ವಲ್ ದೇವರಾಜ್ ನಟನೆಯ 'ಅರ್ಜುನ್ ಗೌಡ' ಸಿನಿಮಾದ ಡಬ್ಬಿಂಗ್ ಕೆಲಸ ಮುಗಿದಿದೆ. ಈ ಸಿನಿಮಾದಲ್ಲಿ ಪ್ರಜ್ವಲ್ ಕಿಕ್ ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಈ ಚಿತ್ರದ ಟ್ರೇಲರ್‌ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.

Vijaya Karnataka Web 27 Oct 2020, 8:39 pm
ನಿರ್ಮಾಪಕ ರಾಮು ಅವರು ರಾಮು ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಮತ್ತೊಂದು ಅದ್ದೂರಿ ಸಿನಿಮಾ 'ಅರ್ಜುನ್ ಗೌಡ'. 'ಡೈನಾಮಿಕ್ ಪ್ರಿನ್ಸ್‌' ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಡಬ್ಬಿಂಗ್ ಸಹ ಮುಕ್ತಾಯವಾಗಿದೆ.
Vijaya Karnataka Web actor prajwal devaraj starrer arjun gowda movie dubbing completed
ಪ್ರಜ್ವಲ್ ದೇವರಾಜ್ ನಟನೆಯ 'ಅರ್ಜುನ್ ಗೌಡ' ಸಿನಿಮಾ ತಂಡದಿಂದ ಸಿಹಿಸುದ್ದಿ!


ಲಕ್ಕಿ ಶಂಕರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳಿದೆ.
ಮಾಸ್ ಮಾದ ಅವರ ಸಾಹಸ ನಿರ್ದೇಶನದಲ್ಲಿ ಈ ಆಕ್ಷನ್ ಸನ್ನಿವೇಶ ಮೂಡಿ ಬಂದಿದೆ. ಈಗಾಗಲೇ ಈ ಚಿತ್ರದ ಆಕ್ಷನ್ ಟ್ರೇಲರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ಅನ್ಯ ಭಾಷೆಯ ವಿತರಕರು ಹಾಗೂ ನಿರ್ಮಾಪಕರಿಂದಲೂ ಆಕ್ಷನ್ ಟ್ರೇಲರ್‌ಗೆ ಪ್ರಶಂಸೆ ಸಿಕ್ಕಿದೆ. ಸದ್ಯದಲ್ಲೇ ಮೇಕಿಂಗ್ ಟ್ರೇಲರ್ ಬಿಡುಗಡೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ರಾಹುಲ್ ದೇವ್ ನಟನೆ
ಕೊರೊನಾ ವೈರಸ್ ಹಾವಳಿ ಇಲ್ಲದೇ ಹೋಗಿದ್ದರೆ, ಈ ಚಿತ್ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗಬೇಕಿತ್ತು. ಈ ಸಿನಿಮಾವನ್ನು ನಿಗದಿತ ಸಮಯ ನೋಡಿಕೊಂಡು ಬಿಡುಗಡೆ ಮಾಡುವ ಆಶಯ ನಿರ್ಮಾಪಕರದು. ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಅಭಿನಯಿಸಿದ್ದಾರೆ. ಬಾಲಿವುಡ್‌ನ ರಾಹುಲ್ ದೇವ್, ಸ್ಪರ್ಶ ರೇಖ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭಿತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕಿಕ್ ಬಾಕ್ಸರ್ ಪಾತ್ರ ಮಾಡುತ್ತಿರುವ ಪ್ರಜ್ವಲ್

ರಾಹುಲ್‌ ದೇವ್‌ ಈ ಹಿಂದೆ 'ಅಭಿಮನ್ಯು', 'ಓಂಕಾರ್‌', 'ಬೊಂಬಾಟ್‌' ಚಿತ್ರಗಳಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ಖಡಕ್‌ ವಿಲನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ. ಕಿಕ್‌ ಬಾಕ್ಸರ್‌ ಪಾತ್ರದಲ್ಲಿ ಪ್ರಜ್ವಲ್‌ ನಟಿಸುತ್ತಿದ್ದು, ಮೂರು ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಚಿತ್ರದಲ್ಲಿ ಪ್ರಜ್ವಲ್‌ ಪಾತ್ರ ರಿಯಲಿಸ್ಟಿಕ್‌ ಆಗಿ ಇರಬೇಕು ಎನ್ನುವ ಕಾರಣಕ್ಕೆ ಕಿಕ್‌ ಬಾಕ್ಸರ್‌ ಸಲಹೆಯನ್ನು ಪಡೆದು ಚಿತ್ರೀಕರಣ ಮಾಡಲಾಗಿದೆ. ಪ್ರಜ್ವಲ್ ಕೂಡ ಪಾತ್ರಕ್ಕಾಗಿ ತರಬೇತಿಯನ್ನೂ ಪಡೆದಿದ್ದಾರೆ.

Also Read-ಸ್ಯಾಂಡಲ್‍ವುಡ್‌ನಲ್ಲಿ ಮತ್ತೆ ಅಬ್ಬರಿಸಲಿರುವ ನಟ ರಾಹುಲ್ ದೇವ್

ಅರ್ಜುನ್ ಗೌಡ ಸಿನಿಮಾದ ತಂತ್ರಜ್ಞರು ಯಾರು?
ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ , ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌