ಆ್ಯಪ್ನಗರ

ಇಂದು ರೆಬೆಲ್ ಸ್ಟಾರ್ ಅಂಬರೀಶ್‌ರನ್ನು ಎಲ್ಲರೂ ನೆನಪಿಸಿಕೊಳ್ಳಲೇಬೇಕಾದ ದಿನ

ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರು ಕೊನೆಯುಸಿರೆಳೆದು ವರ್ಷವೇ ಉರುಳಿಹೋಯಿತು. ಇಂದು ಅವರ ಮೊದಲ ಪುಣ್ಯತಿಥಿ. ಈ ಸಂದರ್ಭದಲ್ಲಿ ಯಾರೆಲ್ಲ ಬರ್ತಾರೆ? ಈ ಕಾರ್ಯಕ್ರಮ ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Vijaya Karnataka Web 14 Nov 2019, 11:02 am
ನಟ ರೆಬೆಲ್ ಸ್ಟಾರ್ ಅಂಬರೀಶ್ ನಮ್ಮನ್ನೆಲ್ಲ ಅಗಲಿ ಒಂದು ವರ್ಷ ಕಳೆದು ಹೋಯಿತು. ಇಂದು ಅಂಬರೀಶ್ ಅವರ ಮೊದಲ ಪುಣ್ಯ ತಿಥಿ. ಅಂಬರೀಶ್ ಇಹಲೋಕ ತ್ಯಜಿಸಿ ನವೆಂಬರ್ 24ಕ್ಕೆ ಒಂದು ವರ್ಷ ಆಗಲಿದೆ.
Vijaya Karnataka Web ambareesh death anniversary
ಇಂದು ರೆಬೆಲ್ ಸ್ಟಾರ್ ಅಂಬರೀಶ್‌ರನ್ನು ಎಲ್ಲರೂ ನೆನಪಿಸಿಕೊಳ್ಳಲೇಬೇಕಾದ ದಿನ


ಅಂಬರೀಶ್ ಮೊದಲ ಪುಣ್ಯ ತಿಥಿ ಎಲ್ಲಿ ನಡೆಯಲಿದೆ?

ತಿಥಿ ಪ್ರಕಾರ ಗುರುವಾರವೇ ಬಂದಿರೋದರಿಂದ ಅಂಬಿ ಕುಟುಂಬಸ್ಥರು ಹತ್ತು ದಿನ ಮುಂಚಿತವಾಗಿ ಪುಣ್ಯತಿಥಿ ಮಾಡುತ್ತಿದ್ದಾರೆ. ಇಂದು ಇಡೀ ಕನ್ನಡ ಚಿತ್ರರಂಗ ಮತ್ತು ಅಂಬಿ ಅಭಿಮಾನಿಗಳು ಮತ್ತೊಮ್ಮೆ ದೊಡ್ಡಮಟ್ಟದಲ್ಲಿ ರೆಬೆಲ್‌ಸ್ಟಾರ್ ಅವರನ್ನು ಸ್ಮರಿಸಿಕೊಳ್ಳುವ ದಿನ ಇಂದು. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದ ವೃಕ್ಷ ಹಾಲ್‌ನಲ್ಲಿ 'ಸ್ನೇಹ ಸಾಗರ, ಪ್ರೀತಿ ಅಜರಾಮರ' ಎಂಬ ಟೈಟಲ್‌ನೊಂದಿಗೆ ಅಂಬರೀಶ್ ಅವರ ಪುಣ್ಯತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ಇಂದು ಸ್ಯಾಂಡಲ್‌ವುಡ್ ಬಂದ್

ಪುಣ್ಯ ತಿಥಿಗೆ ಯಾರೆಲ್ಲ ಬರ್ತಾರೆ?

ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಗಣ್ಯರು, ಅವರ ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತರು, ಅಭಿಮಾನಿಗಳು ಆಗಮಿಸಲಿದ್ದಾರೆ. ಇವರಿಗೆಲ್ಲ ಅಂಬಿ ಪತ್ನಿ ಸುಮಲತಾ, ಮಗ ಅಭಿಷೇಕ್ ಆಹ್ವಾನ ಪತ್ರಿಕೆ ನೀಡಿದ್ದಾರೆ. ವೃಕ್ಷ ಹಾಲ್‌ನಲ್ಲಿ ಅಂಬರೀಶ್ ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಆಹ್ವಾನಿತರೆಲ್ಲರಿಗೂ ಊಟದ ವ್ಯವಸ್ಥೆಯಿದೆ.

ಅಂಬರೀಶ್ ನಿಧನ: ಕಂಠೀರವ ಕ್ರೀಡಾಂಗಣದಲ್ಲಿ ಮುಗಿದ ಅಂತಿಮ ದರ್ಶನ

ತೀವ್ರ ಉಸಿರಾಟದ ತೊಂದರೆ ಹಾಗೂ ಎದೆ ನೋವು ಕಾಣಿಸಿಕೊಂಡ ಅಂಬಿಯನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದರು. ಕಂಠೀರವ ಕ್ರೀಡಾಂಗಣದಲ್ಲಿ ಸಾವಿರಾರು ಅಭಿಮಾನಿಗಳು, ಸಾವಿರಾರು ಗಣ್ಯರು ಅಂಬರೀಷ್‌ ಅವರ ಅಂತಿಮ ದರ್ಶನ ಪಡೆದರು.

ಬಾಲಿವುಡ್ ದೋಸ್ತ್ ಶತ್ರುಘ್ನ ಸಿನ್ಹಾ ಜತೆಗೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌