ಆ್ಯಪ್ನಗರ

Bha Ma Harish: 'ಮಾಂಕ್ ದಿ ಯಂಗ್' ಚಿತ್ರದ ಹಾಡು ರಿಲೀಸ್ ಮಾಡಿದ ಭಾ ಮ ಹರೀಶ್, ಸುಂದರ್ ರಾಜ್

ಸರೋವರ್, ಸೌಂದರ್ಯ ಗೌಡ, ಉಷಾ ಭಂಡಾರಿ, ಶಿವಪ್ಪ ನಟನೆಯ 'ಮಾಂಕ್ ದಿ ಯಂಗ್' ಸಿನಿಮಾದ 'ಕಣ್ಣುಗಳೆ ಸೋತು' ಎಂಬ ಹಾಡು ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ ಮ ಹರೀಶ್ ಹಾಗೂ ಹಿರಿಯ ನಟ ಸುಂದರರಾಜ್ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

Authored byಪದ್ಮಶ್ರೀ ಭಟ್ | Vijaya Karnataka Web 30 Nov 2022, 8:54 am

ಹೈಲೈಟ್ಸ್‌:

  • 'ಮಾಂಕ್ ದಿ ಯಂಗ್' ಚಿತ್ರದ 'ಕಣ್ಣುಗಳೆ ಸೋತು' ಎಂಬ ಹಾಡು ಬಿಡುಗಡೆಯಾಗಿದೆ
  • ಸುಪ್ರೀತ್ ಫಲ್ಗುಣ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡು
  • ಈ ಚಿತ್ರದಲ್ಲಿ ಎರಡು ಹಾಡುಗಳಿದ್ದು, ಅಶ್ವಿನ್ ಶಾನ್ ಭಾಗ್ ಬರೆದಿದ್ದಾರೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web monk the young
ಹೊಸ ತಂಡದ ಹೊಸ ಪ್ರಯತ್ನ 'ಮಾಂಕ್ ದಿ ಯಂಗ್'. ಇತ್ತೀಚಿಗೆ ಈ ಚಿತ್ರದ 'ಕಣ್ಣುಗಳೆ ಸೋತು' ಎಂಬ ಹಾಡು ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ ಮ ಹರೀಶ್ ಹಾಗೂ ಹಿರಿಯ ನಟ ಸುಂದರರಾಜ್ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ಸುಪ್ರೀತ್ ಫಲ್ಗುಣ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡನ್ನು ಸುಮಧುರ ಕಂಠದ ಗಾಯಕಿ ಐಶ್ವರ್ಯ ರಂಗರಾಜನ್ ಇಂಪಾಗಿ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಹೊರಬಂದಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಮೆಚ್ಚುಗೆ ಪಡೆಯುತ್ತಿದೆ. ಅಶ್ವಿನ್ ಶಾನ್ ಭಾಗ್ ಈ ಹಾಡನ್ನು ಬರೆದಿದ್ದಾರೆ.

ನಮ್ಮ ಚಿತ್ರದಲ್ಲಿ ಎರಡು ಹಾಡುಗಳಿದ್ದು, ಅಶ್ವಿನ್ ಶಾನ್ ಭಾಗ್ ಬರೆದಿದ್ದಾರೆ. ಖ್ಯಾತ ಗಾಯಕಿಯರಾದ ಐಶ್ವರ್ಯ ರಂಗರಾಜನ್ ಹಾಗೂ ಸಾದ್ವಿನಿ ಕೊಪ್ಪ ಈ ಹಾಡುಗಳನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಸುಪ್ರೀತ್ ಫಲ್ಗುಣ ಮಾಹಿತಿ ನೀಡಿದರು.

Rishab Shetty: ಹೊಸಬರ 'ಮಾಂಕ್ ದಿ ಯಂಗ್' ಚಿತ್ರಕ್ಕೆ ಸಾಥ್ ನೀಡಿದ ರಿಷಬ್ ಶೆಟ್ಟಿ

ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ, ಎಲ್ಲರ ಸಹಕಾರದಿಂದ ಚೆನ್ನಾಗಿ ಬಂದಿದೆ‌. ಹಾಡುಗಳಂತೂ ಅದ್ಭುತವಾಗಿದೆ ಎಂದರು ನಿರ್ದೇಶಕ ಮಾಸ್ಚಿತ್ ಸೂರ್ಯ.

ನಾಯಕ ಸರೋವರ್, ನಾಯಕಿ ಸೌಂದರ್ಯ ಗೌಡ, ನಟಿ ಉಷಾ ಭಂಡಾರಿ, ನಟ ಶಿವಪ್ಪ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ಪುನೀತ್ ರಾಜ್‌ಕುಮಾರ್ ಸೆಟ್‌ಗೆ ಬೇಗ ಬರುತ್ತಿದ್ರು, ಅದರಿಂದ ಎಷ್ಟೋ ಸಲ ನಮಗೆ ನಾಚಿಕೆಯಾಗಿದೆ: ಅವಿನಾಶ್

ನಿವೃತ್ತ ಆರ್ಮಿ ಆಫೀಸರ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಸರೋವರ್, ಗೋಪಿಚಂದ್, ಲಾಲ್ ಚಂದ್ ಖತಾರ್ ಐದು ಜನ ಸೇರಿ 'ಮಾಂಕ್ ದಿ ಯಂಗ್' ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಐದು ಜನ ನಿರ್ಮಾಪಕರು ಮಾತನಾಡಿ, ತಮ್ಮ ನೂತನ ಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು. ಛಾಯಾಗ್ರಾಹಕ ಕಾರ್ತಿಕ್ ಶರ್ಮ, ನೃತ್ಯ ನಿರ್ದೇಶಕ ಹರ್ಷವರ್ಧನ್ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಿರ್ಮಾಪಕ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು. ನಾಡಿನ ಪ್ರಸಿದ್ದ ನೃತ್ಯಗಾರರು ಚಿತ್ರದ ಹಾಡುಗಳಿಗೆ ಹೆಜ್ಜೆ ಹಾಕಿದರು.
ಲೇಖಕರ ಬಗ್ಗೆ
ಪದ್ಮಶ್ರೀ ಭಟ್
ವಿಜಯ ಕರ್ನಾಟಕ' ವೆಬ್‌ನಲ್ಲಿ ಸಿನಿಮಾ ಪತ್ರಕರ್ತೆಯಾಗಿ 2019ರಿಂದ ಪದ್ಮಶ್ರೀ ಭಟ್ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯಮಟ್ಟದಲ್ಲಿ ಪತ್ರಿಕೆಯಲ್ಲಿ ಕೆಲಸ ಮಾಡಿದ ಅನುಭವ ಇವರಿಗೆ ಇದೆ. 'ವಿಜಯ ಕರ್ನಾಟಕ' ವೆಬ್‌ನಲ್ಲಿ ಲೇಖನಗಳನ್ನು ಬರೆಯುವುದರ ಜೊತೆಗೆ ಸೆಲೆಬ್ರಿಟಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ಪುಸ್ತಕ ಓದುವುದು, ಪ್ರವಾಸ ಪದ್ಮಶ್ರೀ ಅವರ ಇಷ್ಟದ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌