ಕೊರೊನಾ ವೈರಸ್ ಎರಡನೇ ಅಲೆ ಶುರುವಾದಂತಿದೆ. ಮತ್ತೆ ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾದಂತಿದೆ. ಹೀಗಾಗಿ ಕೆಲವು ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿತ್ತು. ಅಂತೆಯೇ ಚಿತ್ರಮಂದಿರದಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂಬ ಮಾತು ಕೇಳಿ ಬಂದಿತ್ತು. ಅದಕ್ಕೀಗ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮಾರ್ಚ್ 19ರಂದು ಡೆಡ್ಲಿ ಆದಿತ್ಯ ಅಭಿನಯದ 'ಮುಂದುವರೆದ ಅಧ್ಯಾಯ' ಸಿನಿಮಾ ರಿಲೀಸ್ ಆಗಿದೆ, ಏಪ್ರಿಲ್ 1 ರಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ 'ಯುವರತ್ನ' ಸಿನಿಮಾ ರಿಲೀಸ್ ಆಗಲಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಟನೆಯ 'ಭಜರಂಗಿ 2' ಸಿನಿಮಾ, ಕಿಚ್ಚ ಸುದೀಪ್ ಅಭಿನಯದ 'ಕೋಟಿಗೊಬ್ಬ 3' ಸಿನಿಮಾ ರಿಲೀಸ್ ಆಗಲಿದೆ. ಹೀಗಾಗಿ ಚಿತ್ರರಂಗ ಚಿಂತಾಕ್ರಾಂತವಾಗಿತ್ತು.
ಕಳೆದ ಒಂದು ವರ್ಷದಿಂದ ಚಿತ್ರರಂಗ ಕಷ್ಟದಲ್ಲಿತ್ತು. ಸಿನಿಮಾ ಶೂಟಿಂಗ್ ನಿಂತು ಹೋಗಿತ್ತು, ಚಿತ್ರಮಂದಿರಗಳು ಆರು ತಿಂಗಳಿಗೂ ಅಧಿಕ ಕಾಲ ಬೀಗ ಹಾಕಿಕೊಂಡಿತ್ತು. ದೊಡ್ಡ ಪ್ರಮಾಣದಲ್ಲಿ ಚಿತ್ರರಂಗಕ್ಕೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಇನ್ನೇನು ಚಿತ್ರರಂಗ ಸುಧಾರಿಸಿಕೊಂಡು ಸಹಜಸ್ಥಿತಿಗೆ ಬರುತ್ತದೆ ಎಂದು ಅಂದುಕೊಳ್ಳುವಷ್ಟರಲ್ಲಿ ಮತ್ತೆ ಚಿತ್ರರಂಗದಲ್ಲಿ 50% ಆಸನ ವ್ಯವಸ್ಥೆ ನೀಡಿದರೆ ಏನು ಮಾಡೋದು ಎಂಬ ಪ್ರಶ್ನೆ ಎದುರಾಗಿತ್ತು.
"ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ" ಎಂದು ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Also Read-ಮುಂದುವರೆದ ಅಧ್ಯಾಯದಲ್ಲಿ ಕುತೂಹಲ ಹುಟ್ಟಿಸುವ ತಿರುವುಗಳು! ಸಿನಿಮಾ ವಿಮರ್ಶೆ
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗಿದ್ದು, ಮತ್ತೆ ಲಾಕ್ಡೌನ್ ಸುಳಿಗೆ ಸಿಲುಕಿದೆ. ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ನಾವೆಲ್ಲರೂ ಎಚ್ಚರವಹಿಸಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ. ಲಾಕ್ಡೌನ್, ಸೀಲ್ಡೌನ್ ಕ್ರಮಗಳನ್ನು ಜಾರಿಗೆ ತರುವುದಿಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ಸ್ಪಷ್ಟಪಡಿಸಲಾಗಿದೆ.
Also Read-ಕೊರೊನಾ ಕಾಟ: ಜನತೆಯಲ್ಲಿ ವಿಶೇಷ ಮನವಿ ಮಾಡಿದ ಸಿಎಂ ಬಿಎಸ್ವೈ!
ಕಳೆದ ಒಂದು ವರ್ಷದಿಂದ ಚಿತ್ರರಂಗ ಕಷ್ಟದಲ್ಲಿತ್ತು. ಸಿನಿಮಾ ಶೂಟಿಂಗ್ ನಿಂತು ಹೋಗಿತ್ತು, ಚಿತ್ರಮಂದಿರಗಳು ಆರು ತಿಂಗಳಿಗೂ ಅಧಿಕ ಕಾಲ ಬೀಗ ಹಾಕಿಕೊಂಡಿತ್ತು. ದೊಡ್ಡ ಪ್ರಮಾಣದಲ್ಲಿ ಚಿತ್ರರಂಗಕ್ಕೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಇನ್ನೇನು ಚಿತ್ರರಂಗ ಸುಧಾರಿಸಿಕೊಂಡು ಸಹಜಸ್ಥಿತಿಗೆ ಬರುತ್ತದೆ ಎಂದು ಅಂದುಕೊಳ್ಳುವಷ್ಟರಲ್ಲಿ ಮತ್ತೆ ಚಿತ್ರರಂಗದಲ್ಲಿ 50% ಆಸನ ವ್ಯವಸ್ಥೆ ನೀಡಿದರೆ ಏನು ಮಾಡೋದು ಎಂಬ ಪ್ರಶ್ನೆ ಎದುರಾಗಿತ್ತು.
"ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ" ಎಂದು ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Also Read-ಮುಂದುವರೆದ ಅಧ್ಯಾಯದಲ್ಲಿ ಕುತೂಹಲ ಹುಟ್ಟಿಸುವ ತಿರುವುಗಳು! ಸಿನಿಮಾ ವಿಮರ್ಶೆ
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗಿದ್ದು, ಮತ್ತೆ ಲಾಕ್ಡೌನ್ ಸುಳಿಗೆ ಸಿಲುಕಿದೆ. ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ನಾವೆಲ್ಲರೂ ಎಚ್ಚರವಹಿಸಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ. ಲಾಕ್ಡೌನ್, ಸೀಲ್ಡೌನ್ ಕ್ರಮಗಳನ್ನು ಜಾರಿಗೆ ತರುವುದಿಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ಸ್ಪಷ್ಟಪಡಿಸಲಾಗಿದೆ.
Also Read-ಕೊರೊನಾ ಕಾಟ: ಜನತೆಯಲ್ಲಿ ವಿಶೇಷ ಮನವಿ ಮಾಡಿದ ಸಿಎಂ ಬಿಎಸ್ವೈ!