ಆ್ಯಪ್ನಗರ

4 ಭಾಷಾ ಚಿತ್ರರಂಗಕ್ಕೆ 'ಜ್ಯೂನಿಯರ್' ಆಗಿ ಎಂಟ್ರಿ ಕೊಡಲಿರುವ ಜನಾರ್ಧನ್ ರೆಡ್ಡಿ ಪುತ್ರ ಕಿರೀಟಿ

Kireeti Reddy First Movie Junior: ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಅವರು ಸಂಪೂರ್ಣ ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಕಿರೀಟಿ ಮೊದಲ ಚಿತ್ರದ ಮೂಲಕ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಟೀಸರ್ ಝಲಕ್‌ನಲ್ಲೇ ಎಲ್ಲರ ಗಮನ ಸೆಳೆಯುತ್ತಿರುವ ಈ ಚಿತ್ರದ ಟೈಟಲ್ ಏನು ಎಂಬುದು ಹೊರಬಿದ್ದಿದೆ.

Authored byಪದ್ಮಶ್ರೀ ಭಟ್ | Vijaya Karnataka Web 29 Sep 2022, 9:53 pm

ಹೈಲೈಟ್ಸ್‌:

  • ಚಿತ್ರರಂಗಕ್ಕೆ ಕಾಲಿಡುತ್ತಿರುವ ಗಾಲಿ ಜನಾರ್ಧನ್ ರೆಡ್ಡಿ ಪುತ್ರ ಕಿರೀಟಿ
  • ಕಿರೀಟಿ ಅವರು ಎಲ್ಲ ತಯಾರಿ ಮಾಡಿಕೊಂಡು ಸಿನಿಮಾ ಲೋಕಕ್ಕೆ ಎಂಟ್ರಿ ನೀಡುತ್ತಿದ್ದಾರೆ
  • ಕಿರೀಟಿ ಅವರ ಮೊದಲ ಸಿನಿಮಾಕ್ಕೆ 'ಜ್ಯೂನಿಯರ್' ಎಂದು ಹೆಸರು ಇಡಲಾಗಿದೆ
  • ಕಿರೀಟಿ ಅವರ ಜತೆ ಈ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ಶ್ರೀಲೀಲಾ ನಟಿಸುತ್ತಿದ್ದಾರೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web kireeti
ಗಾಲಿ ಜನಾರ್ಧನ ರೆಡ್ಡಿ ( Janardhan Reddy ) ಪುತ್ರ ಕಿರೀಟಿ ( Kireeti Reddy ) ಅದ್ದೂರಿಯಾಗಿ ಸ್ಯಾಂಡಲ್‌ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟಿದ್ದು ಗೊತ್ತೇ ಇದೆ. ಟೀಸರ್ ಝಲಕ್‌ನಲ್ಲೇ ಎಲ್ಲರ ಗಮನ ಸೆಳೆದಿರೋ ಕಿರೀಟಿ ಮೊದಲ ಚಿತ್ರದ ಮೂಲಕ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಡ್ತಿದ್ದಾರೆ.
ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಅದ್ದೂರಿಯಾಗಿ ಮೂಡಿ ಬರ್ತಿರುವ ಈ ಚಿತ್ರ ಬಿರುಸಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಇಷ್ಟು ದಿನ ಟೈಟಲ್ ರಿವೀಲ್ ಮಾಡದೇ ಚಿತ್ರೀಕರಣದಲ್ಲಿ ತೊಡಗಿದ್ದ ಚಿತ್ರತಂಡ ಕೊನೆಗೂ ಸಿನಿಮಾ ಟೈಟಲ್ ರಿವೀಲ್ ಮಾಡಿದೆ. ಆ ಮೂಲಕ ಇಷ್ಟು ದಿನದ ಕುತೂಹಲಕ್ಕೆ ಚಿತ್ರತಂಡ ತೆರೆ ಎಳೆದಿದೆ.

ಇಂದು ನಾಯಕ ನಟ ಕಿರೀಟಿ ಹುಟ್ಟುಹಬ್ಬ. ಆದ್ದರಿಂದ ಚಿತ್ರತಂಡ ಕಿರೀಟಿ ಹುಟ್ಟುಹಬ್ಬಕ್ಕೆ ಟೈಟಲ್ ರಿವೀಲ್ ಮಾಡಲು ಮೊದಲೇ ತಯಾರಿ ಮಾಡಿಕೊಂಡಿತ್ತು. ಅದರಂತೆ ವಾರಾಹಿ ಯೂಟ್ಯೂಬ್ ಚಾನೆಲ್‌ನಲ್ಲಿ ಇಂದು ಸಂಜೆ 6.39ಕ್ಕೆ ಟೈಟಲ್ ವೀಡಿಯೋ ಬಿಡುಗಡೆ ಮಾಡಲಾಗುತ್ತಿದೆ. ಈ ಮೂಲಕ ಕಿರೀಟಿಗೆ ಶುಭಕೋರಿ ಟೈಟಲ್ ಉಡುಗೊರೆಯಾಗಿ ನೀಡಲಿದೆ ಚಿತ್ರತಂಡ.

Kireeti: ಜನಾರ್ದನ ರೆಡ್ಡಿ ಪುತ್ರನ ಸಿನಿಮಾದ ಶೀರ್ಷಿಕೆ ಏನು? ಟೈಟಲ್ ಲಾಂಚ್‌ಗೆ ಮುಹೂರ್ತ ಫಿಕ್ಸ್

ಈ ಚಿತ್ರಕ್ಕೆ ‘ಜ್ಯೂನಿಯರ್’ ಎಂದು ಚಿತ್ರತಂಡ ಟೈಟಲ್ ಫಿಕ್ಸ್ ಮಾಡಿದೆ. ಈ ಮೂಲಕ ಇಷ್ಟು ದಿನ ಸಿನಿರಸಿಕರಲ್ಲಿ ಟೈಟಲ್ ಬಗ್ಗೆ ಇದ್ದ ಕುತೂಹಲಕ್ಕೆ ಉತ್ತರ ನೀಡಿದೆ ಚಿತ್ರತಂಡ. ‘ಜೂನಿಯರ್’ ಮೂಲಕ ಕಿರೀಟಿ ಕೇವಲ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಮಲಯಾಳಂ ಚಿತ್ರರಂಗಕ್ಕೂ ನಾಯಕ ನಟನಾಗಿ ಪರಿಚಿತನಾಗುತ್ತಿದ್ದಾರೆ.

'ಮಾಯಾಬಜಾರ್' ಸಿನಿಮಾ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರವಿದು. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡಿದ್ದು ಬಿಗ್ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದೆ. ಬಹುದೊಡ್ಡ ಹಾಗೂ ಸ್ಟಾರ್ ತಾರಾಗಣ ಈ ಸಿನಿಮಾದ ಮತ್ತೊಂದು ಹೈಲೈಟ್.

Genelia: ನಟ ಶಿವರಾಜ್‌ಕುಮಾರ್ ಮನೆಗೆ ಭೇಟಿ ನೀಡಿದ 'ಸತ್ಯ ಇನ್ ಲವ್' ಸುಂದರಿ ಜೆನಿಲಿಯಾ

'ಕ್ರೇಜಿಸ್ಟಾರ್' ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ಇನ್ನೂ ಹಲವು ತಾರೆಯರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಹಾಗೆಯೇ ಚಿತ್ರದ ತಾಂತ್ರಿಕ ಬಳಗ ಕೂಡ ಅಷ್ಟೇ ಶ್ರೀಮಂತವಾಗಿದ್ದು ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ರಾಕ್ ಸ್ಟಾರ್ ಖ್ಯಾತಿಯ ದೇವಿಶ್ರೀ ಪ್ರಸಾದ್ ಸಂಗೀತ, 'ಬಾಹುಬಲಿ' ಸಿನಿಮಾ ಖ್ಯಾತಿಯ ಕಣ್ಣು ಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ನಿರ್ದೇಶನ, ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಪೀಟರ್ ಹೆನ್ ಸಾಹಸ ಚಿತ್ರಕ್ಕಿದೆ.
ಲೇಖಕರ ಬಗ್ಗೆ
ಪದ್ಮಶ್ರೀ ಭಟ್
ವಿಜಯ ಕರ್ನಾಟಕ' ವೆಬ್‌ನಲ್ಲಿ ಸಿನಿಮಾ ಪತ್ರಕರ್ತೆಯಾಗಿ 2019ರಿಂದ ಪದ್ಮಶ್ರೀ ಭಟ್ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯಮಟ್ಟದಲ್ಲಿ ಪತ್ರಿಕೆಯಲ್ಲಿ ಕೆಲಸ ಮಾಡಿದ ಅನುಭವ ಇವರಿಗೆ ಇದೆ. 'ವಿಜಯ ಕರ್ನಾಟಕ' ವೆಬ್‌ನಲ್ಲಿ ಲೇಖನಗಳನ್ನು ಬರೆಯುವುದರ ಜೊತೆಗೆ ಸೆಲೆಬ್ರಿಟಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ಪುಸ್ತಕ ಓದುವುದು, ಪ್ರವಾಸ ಪದ್ಮಶ್ರೀ ಅವರ ಇಷ್ಟದ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌