ಆ್ಯಪ್ನಗರ

Arjun Janya: 'ಗ್ರೂಫಿ' ಹಾಡುಗಳನ್ನು ರಿಲೀಸ್ ಮಾಡಿ, ಚಿತ್ರತಂಡಕ್ಕೆ ಹಾರೈಸಿದ ಅರ್ಜುನ್ ಜನ್ಯ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಗೆಳೆಯರೆಲ್ಲ ಸೇರಿ ಹೊಸದೊಂದು ಸಿನಿಮಾ ಮಾಡಿದ್ದಾರೆ. ಅದರ ಆಡಿಯೋ ಈಚೆಗೆ ಲಾಂಚ್ ಆಗಿದೆ.

Curated byಅವಿನಾಶ್ ಜಿ. ರಾಮ್ | Vijaya Karnataka Web 6 Aug 2021, 4:28 pm
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸ್ನೇಹಿತರು ಹೊಸದೊಂದು ಸಿನಿಮಾ ಮಾಡಿದ್ದಾರೆ. ಸಿನಿಮಾದ ಶೀರ್ಷಿಕೆ 'ಗ್ರೂಫಿ'. 'ಅರೇ, ಇದೇನಿದು ಗ್ರೂಫಿ' ಅನ್ನೋ ಪ್ರಶ್ನೆ ನಿಮಗೆ ಮೂಡಿದರೆ, ಅದಕ್ಕುತ್ತರ ಇಲ್ಲಿದೆ. ಒಬ್ಬರೇ ಫೋಟೋ ತೆಗೆದುಕೊಂಡರೆ ಸೆಲ್ಫಿ. ಗುಂಪಾಗಿ ತೆಗೆದುಕೊಳ್ಳುವುದನ್ನು ಗ್ರೂಫಿ ಅಂತ ಕರೆಯುತ್ತಾರಂತೆ. ಅದಕ್ಕೆ ಚಿತ್ರತಂಡ, ಗ್ರೂಫಿ ಅಂತ ಟೈಟಲ್ ಇದೆ. ಸದ್ಯ ಈ ಸಿನಿಮಾದ ಹಾಡುಗಳನ್ನು ಈಚೆಗಷ್ಟೇ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಹಾರೈಸಿದರು. ಇನ್ನು, ಚಿತ್ರತಂಡ 'ಗ್ರೂಫಿ' ಹಾಡುಗಳನ್ನು ಅರ್ಜುನ್ ಜನ್ಯ ಅವರಿಗೆ ಅರ್ಪಿಸಿದೆ. 'ನನ್ನ ಗುರುಗಳಾದ ಅರ್ಜುನ್ ಜನ್ಯ ಅವರು ನಾನು ಸಂಗೀತ ನೀಡಿರುವ ಚಿತ್ರದ ಆಡಿಯೋ ರಿಲೀಸ್ ಮಾಡಿದ್ದು, ಎಲ್ಲಕ್ಕಿಂತ ಸಂತೋಷ ತಂದಿದೆ' ಎಂದರು ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ.
Vijaya Karnataka Web groufie kannada movie songs released by music director arjun janya
Arjun Janya: 'ಗ್ರೂಫಿ' ಹಾಡುಗಳನ್ನು ರಿಲೀಸ್ ಮಾಡಿ, ಚಿತ್ರತಂಡಕ್ಕೆ ಹಾರೈಸಿದ ಅರ್ಜುನ್ ಜನ್ಯ


​ಸ್ನೇಹಿತನ ಸಿನಿಮಾಕ್ಕೆ ಶುಭವಾಗಲಿ

ಹಾಡುಗಳನ್ನು ರಿಲೀಸ್ ಮಾಡಿ ಮಾತನಾಡಿದ ಅರ್ಜುನ್ ಜನ್ಯ, 'ಈ ಚಿತ್ರದ ಹಾಡುಗಳು ಕೇಳಲು ಹಾಗೂ ನೋಡಲು ಮಧುರವಾಗಿದೆ. 'ಗ್ರೂಫಿ' ಎಂದರೆ ನನಗನಿಸಿದ್ದು ಹೆಮ್ಮೆ ಅಂತ. ಚಿತ್ರದ ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಹಾಗೂ ನಿರ್ದೇಶಕ ರವಿ ಅರ್ಜುನ್ ಅವರು ನನಗೆ ಬಹಳ ವರ್ಷಗಳ ಸ್ನೇಹಿತರು. ಇಪ್ಪತ್ತು ವರ್ಷದ ಹಿಂದೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ವಿ. ಮನೋಹರ್ ಅವರ ಬಳಿ ನನ್ನ ಸಂಗೀತ ಪಯಣ ಆರಂಭವಾಗಿತ್ತು. ನನ್ನ ಸ್ನೇಹಿತನ ಮೊದಲ ಸಿನಿಮಾ ಆಡಿಯೋ ರಿಲೀಸ್ ಇಲ್ಲೇ ಆಗುತ್ತಿರುವುದು ಕಾಕತಾಳೀಯ. ಇಡೀ ತಂಡಕ್ಕೆ ಶುಭವಾಗಲಿ. 'ಗ್ರೂಫಿ' ನಿರ್ಮಾಪಕರಿಗೆ ನಿರೀಕ್ಷೆಗೂ ಮೀರಿ ಲಾಭ ತರಲಿ' ಎಂದು ಹಾರೈಸಿದರು.

ಆರೋಗ್ಯ, ಕುಟುಂಬದ ಬಗ್ಗೆ ಹಬ್ಬಿದ ಸುಳ್ಳು ಸುದ್ದಿಗಳಿಗೆ ಸ್ಪಷ್ಟನೆ ನೀಡಿದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ!

​ಗುಂಪಾಗಿ ಫೋಟೋ ತೆಗೆದುಕೊಳ್ಳುವುದೇ 'ಗ್ರೂಫಿ'

'ಗ್ರೂಫಿ' ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆ ಆಧಾರಿತ ಸಿನಿಮಾ. ಒಬ್ಬರೆ ಫೋಟೋ ತೆಗೆದುಕೊಂಡರೆ ಸೆಲ್ಫಿ. ಗುಂಪಾಗಿ ಫೋಟೋ ತೆಗೆದುಕೊಳ್ಳುವುದನ್ನು 'ಗ್ರೂಫಿ' ಎನ್ನುತ್ತಾರೆ. ಚಿತ್ರದ ಶೀರ್ಷಿಕೆಗೆ ಹಾಗೂ ಕಥೆಗೆ ಸಂಬಂಧವಿದೆ ಹಾಗಾಗಿ ಈ ಹೆಸರಿಟ್ಟಿದ್ದೇವೆ. ಈ ಚಿತ್ರದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನವನ್ನೂ ಮಾಡಿದ್ದೇವೆ. ಬೆಂಗಳೂರು, ಹೊನ್ನಾವರ, ಮಡಿಕೇರಿ ಹಾಗೂ ಪಶ್ಚಿಮ ಘಟ್ಟಗಳ ಸುಂದರ ಪರಿಸರದಲ್ಲಿ ಸುಮಾರು ಐವತ್ತು ದಿನಗಳ ಚಿತ್ರೀಕರಣ ನಡೆದಿದೆ. ನಮ್ಮ ಚಿತ್ರವನ್ನು ಪ್ರಕೃತಿ ಸೊಬಗಿನೊಂದಿಗೆ ಸುಂದರ ಪಯಣ ಅನ್ನಬಹುದು. ನಮ್ಮ ತಂಡದ ಮೇಲೆ ಅಭಿಮಾನವಿಟ್ಟು ಬಂದಿರುವ ಅರ್ಜುನ್ ಜನ್ಯ ಅವರಿಗೆ 'ಗ್ರೂಫಿ' ಚಿತ್ರದ ಹಾಡುಗಳನ್ನು ಅರ್ಪಿಸುತ್ತಿದ್ದೇವೆ ' ಎನ್ನುತ್ತಾರೆ ನಿರ್ದೇಶಕ ರವಿ ಅರ್ಜುನ್. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರೊಂದಿಗೆ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸಿ ಅನುಭವವಿರುವ ರವಿ ಅರ್ಜುನ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕೊರೊನಾದಿಂದ ಸಾವು!

ಹೀರೋಗೆ ಫೋಟೋಗ್ರಾಫರ್ ಪಾತ್ರ

ಚಿತ್ರದ ನಾಯಕ ಆರ್ಯನ್, ಇಲ್ಲಿ ಛಾಯಾಗ್ರಾಹಕನ ಪಾತ್ರದಲ್ಲಿ ಕಾಣಸಿಕೊಂಡಿದ್ದಾರಂತೆ. 'ನನ್ನದು ಈ ಚಿತ್ರದಲ್ಲಿ ವಿಭಿನ್ನ ಪಾತ್ರ. ಎಲ್ಲರೊಂದಿಗೆ ಸೆಲ್ಫಿ ತೆಗೆದುಕೊಂಡು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು. ಎಷ್ಟು ಲೈಕ್ ಹಾಗೂ ಕಾಮೆಂಟ್ ಬರುತ್ತದೆ ಎಂದು ಕಾಯುವ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ' ಎಂದು ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದರು ನಾಯಕಿ ಪದ್ಮಶ್ರೀ ಸಿ. ಜೈನ್. 'ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ವರಮಹಾಲಕ್ಷ್ಮೀ ಹಬ್ಬದಂದು ಸುಮಾರು 120ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಮಾಡುತ್ತಿದ್ದೇವೆ. ಉತ್ತಮ ಸಂದೇಶವುಳ್ಳ ಈ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ' ಎನ್ನುತ್ತಾರೆ ನಿರ್ಮಾಪಕ ಕೆ.ಜಿ. ಸ್ವಾಮಿ.

ಸ್ವಾಮೀಜಿ ಆಗಿಬಿಟ್ರಾ ಅರ್ಜುನ್ ಜನ್ಯ! ಮ್ಯಾಜಿಕಲ್ ಕಂಪೋಸರ್ ಬಗ್ಗೆ 'ಜೋಗಿ' ಪ್ರೇಮ್‌ ಹೇಳಿದ್ದೇನು?

​ಚಿತ್ರದಲ್ಲಿವೆ 4 ಹಾಡುಗಳು

ಅಜಯ್ ಲಕ್ಷ್ಮೀಕಾಂತ್ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ ಮತ್ತು ಇಮ್ರಾನ್ ಸರ್ದಾರಿಯಾ, ಮೋಹನ್ ನೃತ್ಯ ನಿರ್ದೇಶನವಿರುವ ಈ ಚಿತ್ರದ ಉಳಿದ ತಾರಾಬಳಗದಲ್ಲಿ ಗಗನ್ , ಉಮಾ ಮಯೂರಿ, ಪ್ರಜ್ವಲ್, ಸಂಧ್ಯಾ, ಶ್ರೀಧರ್, ಹನುಮಂತೇ ಗೌಡ, ಸಂಗೀತ, ರಜನಿಕಾಂತ್ ಮುಂತಾದವರಿದ್ದಾರೆ. ನಾಲ್ಕು ಹಾಡುಗಳಿದ್ದು ಜಯಂತ ಕಾಯ್ಕಿಣಿ, ಹೃದಯ ಶಿವ, ಚೇತನ್ ಕುಮಾರ್, ರವಿ ಅರ್ಜುನ್ ಬರೆದಿದ್ದಾರೆ. ಸಂತೋಷ್ ವೆಂಕಿ, ಮಾನಸ ಹೊಳ್ಳ, ಅನಿರುದ್ಧ ಶಾಸ್ತ್ರಿ, ವಿಜೇತ್ ಕೃಷ್ಣ ಹಾಗೂ ರಕ್ಷಾ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ.

ಅರ್ಜುನ್ ಜನ್ಯ ಈಸ್ ಬ್ಯಾಕ್‌! ಗುಣಮುಖರಾಗಿ ಕೆಲಸ ಶುರು ಮಾಡಿದ 'ಮ್ಯಾಜಿಕಲ್ ಕಂಪೋಸರ್‌'

ಲೇಖಕರ ಬಗ್ಗೆ
ಅವಿನಾಶ್ ಜಿ. ರಾಮ್
'ವಿಜಯ ಕರ್ನಾಟಕ' ಡಿಜಿಟಲ್ ವಿಭಾಗದಲ್ಲಿ 2019ರ ಸೆಪ್ಟೆಂಬರ್‌ನಿಂದ ಪತ್ರಕರ್ತನಾಗಿ ಅವಿನಾಶ್ ಜಿ. ರಾಮ್ ಕೆಲಸ ಮಾಡುತ್ತಿದ್ದಾರೆ. ಚಿನ್ನದ ಪದಕದೊಂದಿಗೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರಿಗೆ ಕಳೆದ 10 ವರ್ಷಗಳಿಂದ ಸಿನಿಮಾ ವರದಿಗಾರರಾಗಿ ಕೆಲಸ ಮಾಡಿದ ಅನುಭವವಿದೆ. ರಾಜ್ಯಮಟ್ಟದ ಪತ್ರಿಕೆಯೊಂದರಲ್ಲಿ ನಾಲ್ಕು ವರ್ಷ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಅವಿನಾಶ್‌ ಕಾರ್ಯನಿರ್ವಹಿಸಿದ್ದಾರೆ. ಸಿನಿಮಾ ವರದಿಗಾರಿಕೆ ಜೊತೆಗೆ ಪ್ರವಾಸ, ಓದು, ಸಂಗೀತ ಕೇಳುವುದು ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌