ಆ್ಯಪ್ನಗರ

Rishab Shetty: 'ಕಾಂತಾರ 2' ಸಿನಿಮಾ ಮಾಡಲು ಶುರುವಾಯ್ತು ತಯಾರಿ; ಆದ್ರೆ ಇಲ್ಲಿದೆ ಒಂದು ಸಣ್ಣ ಟ್ವಿಸ್ಟ್‌

ರಿಷಬ್‌ ಶೆಟ್ಟಿ, ಕಿಶೋರ್, ಅಚ್ಯುತ್ ಕುಮಾರ್, ಸಪ್ತಮಿ ಗೌಡ ನಟನೆಯ 'ಕಾಂತಾರ' ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಮಾಡಿದ ಮೋಡಿ ಎಂಥದ್ದು ಎಂಬುದು ಎಲ್ಲರಿಗೂ ಗೊತ್ತಿದೆ. ಇದೀಗ ಈ ಸಿನಿಮಾದ ಭಾಗ 2 ಯಾವಾಗ ಬರಲಿದೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

Authored byಅವಿನಾಶ್ ಜಿ. ರಾಮ್ | Vijaya Karnataka Web 22 Jan 2023, 11:49 am

ಹೈಲೈಟ್ಸ್‌:

  • ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ 'ಕಾಂತಾರ' ಸಿನಿಮಾ
  • 'ಕಾಂತಾರ' ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ 400 ಕೋಟಿ ರೂ.ಗಳಿಗೂ ಅಧಿಕ ಕಲೆಕ್ಷನ್ ಮಾಡಿತ್ತು
  • ಇದೀಗ ರಿಷಬ್ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು 'ಕಾಂತಾರ 2' ಚಿತ್ರ ಮಾಡಲಿದ್ದಾರೆ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ​Rishab Shetty
'ಕಾಂತಾರ 2' ಸಿನಿಮಾ ಮಾಡಲು ಶುರುವಾಯ್ತು ತಯಾರಿ; ಆದ್ರೆ ಇಲ್ಲಿದೆ ಒಂದು ಸಣ್ಣ ಟ್ವಿಸ್ಟ್‌
2022ರಲ್ಲಿ ನಟ/ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಕಾಂಬಿನೆಷನ್‌ನಲ್ಲಿ ಮೂಡಿಬಂದ 'ಕಾಂತಾರ' ಸಿನಿಮಾ ಎಂತಹ ದೊಡ್ಡ ಗೆಲುವನ್ನು ಪಡೆದುಕೊಂಡಿತ್ತು ಎಂಬುದು ನಮ್ಮೆಲ್ಲರಿಗೂ ಗೊತ್ತಿದೆ. ಮೊದಲು ಕನ್ನಡದಲ್ಲಿ ತೆರೆಕಂಡ ಈ ಸಿನಿಮಾ ಆನಂತರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಾಕ್ಸ್ ಆಫೀಸ್‌ನಲ್ಲಿ 400 ಕೋಟಿ ರೂ.ಗಳಿಗೂ ಅಧಿಕ ಹಣವನ್ನು ಗಳಿಕೆ ಮಾಡಿತ್ತು. ಇದೀಗ ಎಲ್ಲೆಡೆ 'ಕಾಂತಾರ 2' ಸಿನಿಮಾ ಬಗ್ಗೆಯೇ ಮಾತು. 'ಕಾಂತಾರ 2' ಯಾವಾಗ ಬರಲಿದೆ? ಯಾವ ರೀತಿಯ ಕಥೆ ಇರಲಿದೆ ಎಂಬ ಚರ್ಚೆಯೂ ಜೋರಾಗಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, 'ಕಾಂತಾರ 2' ಸಿನಿಮಾಗೆ ಸ್ಕ್ರಿಪ್ಟ್‌ ಬರೆಯುವ ಕೆಲಸ ಶುರುವಾಗಿದೆಯಂತೆ. ಆದರೆ ಇಲ್ಲೊಂದು ಸಣ್ಣ ಟ್ವಿಸ್ಟ್ ಇದೆ. ಅದೇನೆಂದರೆ, ಇದು 'ಕಾಂತಾರ' ಸೀಕ್ವೆಲ್‌ ಅಲ್ಲ, ಬದಲಿಗೆ ಪ್ರೀಕ್ವೆಲ್ ಆಗಿರಲಿದೆ.
'ಕಾಂತಾರ 2' ಬಗ್ಗೆ ಮಾಹಿತಿ ನೀಡಿದ ವಿಜಯ್ ಕಿರಗಂದೂರು
ಈಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ನಿರ್ಮಾಪಕ ವಿಜಯ್ ಕಿರಗಂದೂರು, 'ರಿಷಬ್ ಶೆಟ್ಟಿ ಅವರು ಈಗಾಗಲೇ ಕಾಂತಾರ 2ಕ್ಕೆ ಸ್ಕ್ರಿಪ್ಟ್ ಬರೆಯುತ್ತಿದ್ದಾರೆ. ತಮ್ಮ ಬರಹಗಾರರ ಟೀಮ್‌ ಜೊತೆಗೆ ಕರ್ನಾಟಕದ ಕರಾವಳಿ ಭಾಗದ ಕಾಡಿನಲ್ಲಿ ಸಂಶೋಧನೆ ಮಾಡುತ್ತಿದ್ದು, ಸ್ಕ್ರಿಪ್ಟ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. 'ಕಾಂತಾರ 2' ಸಿನಿಮಾದ ಕೆಲ ಭಾಗದ ಚಿತ್ರೀಕರಣವನ್ನು ಮಳೆಗಾಲದಲ್ಲಿ ಮಾಡಬೇಕಿದೆ. ಅದಕ್ಕಾಗಿ ಜೂನ್ ತಿಂಗಳಿನಲ್ಲಿ ಶೂಟಿಂಗ್ ಆರಂಭಿಸುವ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಈ ಸಿನಿಮಾವನ್ನು ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ 2024ರ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿಕೊಂಡಿದ್ದೇವೆ..' ಎಂದು ಮಾಹಿತಿ ನೀಡಿದ್ದಾರೆ.

Kantara: ‘ಕಾಂತಾರ’ ಚಿತ್ರದ ಬಗ್ಗೆ ರಿಷಬ್ ಶೆಟ್ಟಿಗೆ ಕಮಲ್ ಹಾಸನ್‌ರಿಂದ ಮೆಚ್ಚುಗೆಯ ಪತ್ರ
ಈಗ ಮಾಡಲು ಹೊರಟಿರುವ ಕಥೆ ‘ಕಾಂತಾರ 2’ ಸಿನಿಮಾವು ಪ್ರೀಕ್ವೆಲ್‌ ಆಗಿರುವುದರಿಂದ, ‘ಕಾಂತಾರ’ ಸಿನಿಮಾದಲ್ಲಿ ಆರಂಭದಲ್ಲಿ ಬರುವ ಶಿವನ ತಂದೆಯ ಪಾತ್ರದ ಮೇಲೆ ಹೆಚ್ಚು ಕಥೆ ಇರಲಿದೆಯಂತೆ. ಶಿವನ ತಂದೆ ಕೋಲ ಕಟ್ಟಿಕೊಂಡು ಕಾಡಿನೊಳಗೆ ಹೋಗಿ ಕಾಣೆಯಾಗುತ್ತಾರೆ. ಅವರು ಹೋಗಿದ್ದೆಲ್ಲಿಗೆ? ಆ ನಂತರ ಏನಾಯಿತು ಎಂಬ ಬಗೆಗಿನ ಕಥೆಯನ್ನು ಈ ಬಾರಿ ತೆರೆಮೇಲೆ ತರಲು ರಿಷಬ್‌ ಸಜ್ಜಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ತಮ್ಮ ಹುಟ್ಟೂರು ಅಥವಾ ನೆಟ್‌ವರ್ಕ್ ಸಿಗದೇ ಇರುವಂತಹ ಜಾಗಕ್ಕೆ ಹೋಗಿ ಸ್ಕ್ರಿಪ್ಟ್ ಕೆಲಸ ಮುಗಿಸಿಕೊಂಡು 2023ರ ಮಧ್ಯದಿಂದ ಚಿತ್ರೀಕರಣ ಆರಂಭಿಸಲಿದ್ದಾರೆ ರಿಷಬ್‌.

Kantara: ಆಸ್ಕರ್ ಪ್ರಶಸ್ತಿಯ ಎರಡು ವಿಭಾಗಕ್ಕೆ ಅರ್ಹತೆ ಪಡೆದ ಕನ್ನಡದ 'ಕಾಂತಾರ' ಸಿನಿಮಾ
ಕೆಲ ದಿನಗಳ ಹಿಂದೆಯಷ್ಟೇ ನಟ ದಿಗಂತ್‌ ಅವರು 'ಬ್ಯಾಚುಲರ್‌ ಪಾರ್ಟಿ' ಸಿನಿಮಾದ ಬಗ್ಗೆ ಕೇಳಿದಾಗ, ‘ರಿಷಬ್‌ ಶೆಟ್ಟಿ ಸದ್ಯ 'ಕಾಂತಾರ 2' ಮಾಡಲಿದ್ದು, ಅದಾದ ನಂತರ ‘ಬ್ಯಾಚುಲರ್‌ ಪಾರ್ಟಿ’ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ..' ಎಂದಿದ್ದರು. ಆದರೆ ನಂತರ ನಡೆದ ಬದಲಾವಣೆಯಲ್ಲಿ 'ಬ್ಯಾಚುಲರ್‌ ಪಾರ್ಟಿ' ಸಿನಿಮಾದಿಂದ ರಿಷಬ್‌ ಶೆಟ್ಟಿ ಸಂಪೂರ್ಣವಾಗಿ ಹೊರಬಂದಿದ್ದರು. ಅವರ ಜಾಗಕ್ಕೆ ಲೂಸ್ ಮಾದ ಯೋಗಿ ಎಂಟ್ರಿ ಆಗಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಸದ್ಯದ ಬೆಳವಣಿಗೆಗಳನ್ನು ನೋಡಿದರೆ, ತಮ್ಮ ಎಲ್ಲ ಪ್ರಾಜೆಕ್ಟ್‌ಗಳನ್ನು ಬದಿಗಿರಿಸಿ, 'ಕಾಂತಾರ 2' ಬಗ್ಗೆ ಮಾತ್ರವೇ ಜಾಸ್ತಿ ಗಮನ ನೀಡುವ ಸಾಧ್ಯತೆಗಳಿವೆ.
ಲೇಖಕರ ಬಗ್ಗೆ
ಅವಿನಾಶ್ ಜಿ. ರಾಮ್
'ವಿಜಯ ಕರ್ನಾಟಕ' ಡಿಜಿಟಲ್ ವಿಭಾಗದಲ್ಲಿ 2019ರ ಸೆಪ್ಟೆಂಬರ್‌ನಿಂದ ಪತ್ರಕರ್ತನಾಗಿ ಅವಿನಾಶ್ ಜಿ. ರಾಮ್ ಕೆಲಸ ಮಾಡುತ್ತಿದ್ದಾರೆ. ಚಿನ್ನದ ಪದಕದೊಂದಿಗೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರಿಗೆ ಕಳೆದ 10 ವರ್ಷಗಳಿಂದ ಸಿನಿಮಾ ವರದಿಗಾರರಾಗಿ ಕೆಲಸ ಮಾಡಿದ ಅನುಭವವಿದೆ. ರಾಜ್ಯಮಟ್ಟದ ಪತ್ರಿಕೆಯೊಂದರಲ್ಲಿ ನಾಲ್ಕು ವರ್ಷ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಅವಿನಾಶ್‌ ಕಾರ್ಯನಿರ್ವಹಿಸಿದ್ದಾರೆ. ಸಿನಿಮಾ ವರದಿಗಾರಿಕೆ ಜೊತೆಗೆ ಪ್ರವಾಸ, ಓದು, ಸಂಗೀತ ಕೇಳುವುದು ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌