ಆ್ಯಪ್ನಗರ

'ತ್ರಿಬಲ್ ರೈಡಿಂಗ್' ಹೊರಟ 'ಗೋಲ್ಡನ್ ಸ್ಟಾರ್' ಗಣೇಶ್; ಅದು ಅಕ್ಟೋಬರ್‌ ತಿಂಗಳಲ್ಲಿ!

'ಗೋಲ್ಡನ್ ಸ್ಟಾರ್' ಗಣೇಶ್ ಒಂದಾದ ಮೇಲೆ ಒಂದರಂತೆ ಸಿನಿಮಾ ಮಾಡುವುದರಲ್ಲಿ ಬ್ಯುಸಿ ಇರುತ್ತಾರೆ. ಈಗಾಗಲೇ ಅವರ ಕೈಯಲ್ಲಿ ಕೆಲವು ಸಿನಿಮಾಗಳಿವೆ. ಈ ಮಧ್ಯೆ ಅವರು ಅಕ್ಟೋಬರ್ ಎರಡನೇ ವಾರದಲ್ಲಿ ತ್ರಿಬಲ್ ರೈಡಿಂಗ್ ಹೋಗಲಿದ್ದಾರಂತೆ. ಯಾಕೆ?

Vijaya Karnataka 23 Sep 2020, 4:52 pm
ನಟ 'ಗೋಲ್ಡನ್ ಸ್ಟಾರ್' ಗಣೇಶ್ ಅಭಿನಯಿಸುತ್ತಿರುವ ನೂತನ‌ ಚಿತ್ರದ ಹೆಸರು 'ತ್ರಿಬಲ್ ರೈಡಿಂಗ್'. ಈ ಸಿನಿಮಾದ ಚಿತ್ರೀಕರಣ ಅಕ್ಟೋಬರ್ ಎರಡನೇ ವಾರದಲ್ಲಿ ಆರಂಭವಾಗಲಿದೆ. ಮೈಸೂರು, ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಶೂಟಿಂಗ್ ನಡೆಯುವ ಸಾಧ್ಯತೆಯಿದೆಯಂತೆ. ಸದ್ಯ ಹೈದರಾಬಾದ್‌ನಲ್ಲಿ ಹಾಡುಗಳ ಧ್ವನಿಮುದ್ರಣ ನಡೆಯುತ್ತಿದೆ.
Vijaya Karnataka Web kannada actor golden star ganesh new movie is tribble riding
'ತ್ರಿಬಲ್ ರೈಡಿಂಗ್' ಹೊರಟ 'ಗೋಲ್ಡನ್ ಸ್ಟಾರ್' ಗಣೇಶ್; ಅದು ಅಕ್ಟೋಬರ್‌ ತಿಂಗಳಲ್ಲಿ!


ತ್ರಿಬಲ್ ರೈಡಿಂಗ್ ಸಿನಿಮಾದ ವಿಶೇಷ ಏನು?

ಕಾಮಿಡಿ, ಪ್ರೇಮಕಥೆ, ಆಕ್ಷನ್ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರವಿರುವ ಈ ಚಿತ್ರವನ್ನು ಮಹೇಶ್ ಗೌಡ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ವಿನೋದ್ ಪ್ರಭಾಕರ್ ಅಭಿನಯದ 'ರಗಡ್' ಚಿತ್ರವನ್ನು ನಿರ್ದೇಶಿಸಿದ್ದ, ಮಹೇಶ್ ಗೌಡ ಅವರಗೆ ಇದು ಎರಡನೇ ಸಿನಿಮಾ. ಯೋಗರಾಜ್ ಭಟ್ ನಿರ್ದೇಶನದ 'ಮುಂಗಾರು ಮಳೆ' ಚಿತ್ರಕ್ಕೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದ ಮಹೇಶ್ ಗೌಡ ಅವರಿಗೆ ಅಂದಿನಿಂದಲೂ ಗಣೇಶ್ ಅವರಿಗೆ ಒಂದು ಸಿನಿಮಾ ನಿರ್ದೇಶಿಸುವ ಆಸೆ ಇತ್ತಂತೆ. ಅದು ಈಗ ಕೂಡಿ ಬಂದಿದೆ ಎನ್ನುತ್ತಾರೆ ಮಹೇಶ್ ಗೌಡ.

'ತ್ರಿಬಲ್ ರೈಡಿಂಗ್' ಸಿನಿಮಾದಲ್ಲಿ ಯಾರು ಯಾರು ಇರಲಿದ್ದಾರೆ?

'ಕೃಪಾಳು ಎಂಟರ್‌ಟೈನ್‌ಮೆಂಟ್' ಲಾಂಛನದಲ್ಲಿ ರಾಮ್ ಗೋಪಾಲ್ ವೈ ಎಂ ಈ ಚಿತ್ರ ನಿರ್ಮಿಸುತ್ತಿದ್ದಾರೆ.
ಸಾಯಿಕಾರ್ತಿಕ್ ಸಂಗೀತ ನಿರ್ದೇಶನ, ಆನಂದ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿಕ್ರಂ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ರಾಜು, ಭೂಷಣ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಜಯಂತ್ ಕಯ್ಕಿಣಿ, ಡಾ.ವಿ.ನಾಗೇಂದ್ರ ಪ್ರಸಾದ್, ಚೇತನ್ ಕುಮಾರ್, ಮಹೇಶ್ ಗೌಡ ಚಿತ್ರದ ಹಾಡುಗಳನ್ನು ರಚಿಸಿದರೆ, ರಾಜಶೇಖರ್, ಮಹೇಶ್ ಗೌಡ ಸಂಭಾಷಣೆ ಬರೆದಿದ್ದಾರೆ. ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿಯ ಆಯ್ಕೆ ನಡೆಯುತ್ತಿದೆ. ಸಾಧುಕೋಕಿಲ, ರವಿಶಂಕರ್, ಕುರಿ ಪ್ರತಾಪ್ ಮುಂತಾದ ತಾರಾಬಳಗ 'ತ್ರಿಬಲ್ ರೈಡಿಂಗ್' ಚಿತ್ರದಲ್ಲಿ ಇರಲಿದೆ.

Also Read-'ಚಮಕ್‌' ಬಳಿಕ ಮತ್ತೆ ಡಾಕ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ನಟ 'ಗೋಲ್ಡನ್‌ ಸ್ಟಾರ್‌' ಗಣೇಶ್‌!

'ಗಾಳಿಪಟ 2', 'ದಿ ಸ್ಟೋರಿ ಆಫ್ ರಾಯಘಡ', 'ಸಖತ್' ಸಿನಿಮಾಗಳಲ್ಲಿ ಗಣೇಶ್ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಗಳು ನಡೆಯುತ್ತಿವೆ. 2019ರಲ್ಲಿ ಗಣೇಶ್ ನಟನೆಯ 'ಗೀತಾ' ಸಿನಿಮಾ ರಿಲೀಸ್ ಆಗಿತ್ತು. ಈ ಚಿತ್ರ ಅಷ್ಟೇನೂ ಕಮಾಲ್ ಮಾಡಿರಲಿಲ್ಲ.

Also read-ಇದೇನು ಅಭಿಮಾನವೋ, ಅತಿರೇಕವೋ? ಧನ್ಯವಾದದ ಜೊತೆಗೆ ಬುದ್ಧಿಮಾತು ಹೇಳಿದ ಗೋಲ್ಡನ್‌ ಸ್ಟಾರ್‌ ಗಣೇಶ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌