ಆ್ಯಪ್ನಗರ

ಅವನೇ ಶ್ರೀಮನ್ನಾರಾಯಣ ಪ್ರದರ್ಶನಕ್ಕೆ 'ಮಹಾ' ಸಂಕಟ! ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಮೇಲೆ ಬೀರಲಿದೆಯಾ ಪರಿಣಾಮ?

ರಕ್ಷಿತ್‌ ಶೆಟ್ಟಿ, ಶಾನ್ವಿ ಶ್ರೀವಾಸ್ತವ ನಟನೆಯ 'ಅವನೇ ಶ್ರೀಮನ್ನಾರಾಯಣ' ಚಿತ್ರ ರಾಜ್ಯದೆಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಆದರೆ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಒಂದು ಕಂಟಕ ಎದುರಾಗಿದೆ.
ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ

Vijaya Karnataka Web 30 Dec 2019, 12:13 pm
'ಅವನೇ ಶ್ರೀಮನ್ನಾರಾಯಣ' ಚಿತ್ರಕ್ಕೂ ಮಹಾರಾಷ್ಟ್ರ ಜನತೆಗೂ ಯಾವುದೇ ಸಂಬಂಧ ಇಲ್ಲ. ಮರಾಠಿ ಭಾಷೆಗೆ ಸಂಬಂಧಿಸಿದಂತೆ ಯಾವುದೇ ಆಕ್ಷಾಪಾರ್ಹ ಅಂಶಗಳೂ ಈ ಸಿನಿಮಾದಲ್ಲಿ ಇಲ್ಲ. ಹಾಗಿದ್ದರೂ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಹಲವೆಡೆ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಉಂಟುಮಾಡಲಾಗಿದೆ. ಅಲ್ಲದೆ, ಪೋಸ್ಟರ್‌ಗಳನ್ನು ತೆರವುಗೊಳಿಸಿದ ಘಟನೆ ಕೂಡ ವರದಿಯಾಗಿದೆ.
Vijaya Karnataka Web karnataka maharashtra border dispute affects avane srimannarayana box office collection
ಅವನೇ ಶ್ರೀಮನ್ನಾರಾಯಣ ಪ್ರದರ್ಶನಕ್ಕೆ 'ಮಹಾ' ಸಂಕಟ! ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಮೇಲೆ ಬೀರಲಿದೆಯಾ ಪರಿಣಾಮ?


ಗಡಿ ಗಲಾಟೆಯಲ್ಲಿ ಸಿಕ್ಕಿಕೊಂಡ ಸಿನಿಮಾ
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ವಿವಾದ ಭುಗಿಲೇಳುತ್ತಿರುವುದು ನಿನ್ನೆ-ಮೊನ್ನೆಯ ಸಂಗತಿ ಅಲ್ಲ. ದಶಕಗಳಿಂದಲೂ ಕರ್ನಾಟಕದ ಬೆಳಗಾವಿ ಹಾಗೂ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಗಲಾಟೆಗಳು ಸಂಭವಿಸುತ್ತಲೇ ಇರುತ್ತವೆ. ಇತ್ತೀಚೆಗೆ ಮತ್ತೆ ಗಡಿ ವಿವಾದ ಹೊಗೆಯಾಡತೊಡಗಿತು. 'ಅವನೇ ಶ್ರೀಮನ್ನಾರಾಯಣ' ಬಿಡುಗಡೆ ಆಗಿರುವ ಸಮಯಕ್ಕೆ ಸರಿಯಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದು ಚಿತ್ರದ ಪ್ರದರ್ಶನಕ್ಕೆ ಮಾರಕವಾಗಿದೆ.

'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 2ನೇ ದಿನ ಕೊಳ್ಳೆ ಹೊಡೆದಿದ್ದು ಎಷ್ಟು?

ಬಾಕ್ಸ್‌ ಆಫೀಸ್‌ ಕಲೆಕ್ಷನ್‌ಗೆ ಪೆಟ್ಟು
ವಿವಾದ ಹೆಚ್ಚಾಗುತ್ತಿದ್ದಂತೆಯೇ ಎರಡೂ ರಾಜ್ಯದ ಗಡಿ ಭಾಗದಲ್ಲಿ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಕನ್ನಡ ಪರ ಸಂಘಟನೆಗಳು ಮತ್ತು ಶಿವಸೇನಾ ಕಾರ್ಯಕರ್ತರ ನಡುವಿನ ವಾಕ್ಸಮರ ಮುಂದುವರಿದಿದೆ. ಜತೆಗೆ ಕನ್ನಡ ಸಿನಿಮಾ ಪ್ರದರ್ಶನಕ್ಕೆ ಶಿವಸೇನಾ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಗಡಿ ಗಲಾಟೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, 'ಮಹಾರಾಷ್ಟ್ರಕ್ಕೆ ಒಂದಿಂಚೂ ಜಾಗ ಬಿಟ್ಟು ಕೊಡುವುದಿಲ್ಲ' ಎಂದಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ತಿಳಿಯಾಗದ ಕಾರಣ, ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗಗಳಲ್ಲಿ 'ಅವನೇ ಶ್ರೀಮನ್ನಾರಾಯಣ'ನ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ಗೆ ಪೆಟ್ಟು ಬಿದ್ದಂತಾಗಿದೆ.

ಅವನೇ ಶ್ರೀಮನ್ನಾರಾಯಣ ಯಾಕೆ ನೋಡಬೇಕು? ಇಲ್ಲಿವೆ 5 ಮುಖ್ಯ ಕಾರಣಗಳು!

ಕರುನಾಡಿನಲ್ಲಿ ಶ್ರೀಮನ್ನಾರಾಯಣನಿಗೆ ಮೆಚ್ಚುಗೆ
ಕರ್ನಾಟಕದ ಬೇರೆಲ್ಲ ಕಡೆಗಳಲ್ಲಿ 'ಅವನೇ ಶ್ರೀಮನ್ನಾರಾಯಣ' ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಾಲ್ಕನೇ ದಿನವಾದ ಸೋಮವಾರವೂ (ಡಿ.30) ಬಹುತೇಕ ಪರದೆಗಳಲ್ಲಿ ಹೌಸ್‌ಫುಲ್‌ ಬೋರ್ಡ್‌ ಬಿದ್ದಿದೆ. ಒಂದು ವಾರ ಪೂರೈಸುವುದರೊಳಗೆ 50 ಕೋಟಿ ರೂ. ಸಂಗ್ರಹ ಆಗುವ ಸಾಧ್ಯತೆ ಇದೆ. ಚಿತ್ರಕ್ಕೆ ಸಚಿನ್‌ ರವಿ ನಿರ್ದೇಶನ ಮಾಡಿದ್ದು, ಪುಷ್ಕರ್‌ ಮಲ್ಲಿಕಾರ್ಜುನಯ್ಯ ಹಾಗೂ ಪ್ರಕಾಶ್‌ ಎಚ್‌ಕೆ ಜೊತೆಯಾಗಿ ಬಂಡವಾಳ ಹೂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌