ಆ್ಯಪ್ನಗರ

Jack Manju: 'ವಿಕ್ರಾಂತ್ ರೋಣ' ನಿರ್ಮಾಪಕ ಜಾಕ್ ಮಂಜುಗೆ ಅನಾರೋಗ್ಯ; 'ಕಿಚ್ಚ' ಸುದೀಪ್ ಹೇಳಿದ್ದೇನು?

'ವಿಕ್ರಾಂತ್ ರೋಣ' ಚಿತ್ರದ ನಿರ್ಮಾಪಕ ಜಾಕ್ ಮಂಜು ( Jack Manju) ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಬನ್ನೇರುಘಟ್ಟದ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದ ಬಗ್ಗೆ 'ಕಿಚ್ಚ' ಸುದೀಪ್ (Kiccha Sudeep) ಅವರು ಅಪ್‌ಡೇಟ್ ನೀಡಿದ್ದಾರೆ.

Authored byಅವಿನಾಶ್ ಜಿ. ರಾಮ್ | Vijaya Karnataka Web 15 Jun 2022, 11:15 am

ಹೈಲೈಟ್ಸ್‌:

  • ವಿಕ್ರಾಂತ್ ರೋಣ' ಚಿತ್ರದ ನಿರ್ಮಾಪಕ ಜಾಕ್ ಮಂಜುಗೆ ಆರೋಗ್ಯ ಸಮಸ್ಯೆ
  • ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಿರ್ಮಾಪಕ ಜಾಕ್ ಮಂಜು
  • ಜಾಕ್ ಮಂಜು ಆರೋಗ್ಯದ ಅಪ್‌ಡೇಟ್ ನೀಡಿದ 'ಕಿಚ್ಚ' ಸುದೀಪ್
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Jack Manju
Jack Manju: 'ವಿಕ್ರಾಂತ್ ರೋಣ' ನಿರ್ಮಾಪಕ ಜಾಕ್ ಮಂಜುಗೆ ಅನಾರೋಗ್ಯ; 'ಕಿಚ್ಚ' ಸುದೀಪ್ ಹೇಳಿದ್ದೇನು?
'ವಿಕ್ರಾಂತ್ ರೋಣ' ಚಿತ್ರದ ನಿರ್ಮಾಪಕ, 'ಕಿಚ್ಚ' ಸುದೀಪ್ (Kiccha Sudeep) ಅವರ ಆಪ್ತ ಜಾಕ್ ಮಂಜು ( Jack Manju) ಅವರು ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಇಂದು ಕೇಳಿಬಂದಿತ್ತು. ಬನ್ನೇರುಘಟ್ಟದ ರಸ್ತೆಯ ಅಪೋಲೋ ಆಸ್ಪತ್ರೆಗೆ ಜೂನ್ 10ರಂದೇ ಅವರನ್ನು ದಾಖಲಿಸಲಾಗಿತ್ತು. ಕಳೆದ ನಾಲ್ಕು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಗಂಭೀರವಾದ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗಿತ್ತು. ಜಾಕ್ ಮಂಜು ಅವರ ಒಂದು ಫೋಟೋ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ಆ ಎಲ್ಲ ಅಂತೆ ಕಂತೆಗಳಿಗೆ 'ಕಿಚ್ಚ' ಸುದೀಪ್ ಫುಲ್ ಸ್ಟಾಪ್ ಇಟ್ಟಿದ್ದಾರೆ. 'ನನ್ನ ಪ್ರೀತಿಯ ಸಹೋದರ ಜಾಕ್ ಮಂಜು ಹುಷಾರಾಗಿದ್ದಾರೆ..' ಎಂದು ಟ್ವೀಟ್ ಮಾಡಿದ್ದಾರೆ.
ಸುದೀಪ್ ಮಾಡಿರುವ ಟ್ವೀಟ್‌ನಲ್ಲಿ ಏನಿದೆ?
'ನನ್ನ ಪ್ರೀತಿಯ ಸಹೋದರ ಮತ್ತು ಸ್ನೇಹಿತ ಜಾಕ್ ಮಂಜು ಹುಷಾರಾಗಿದ್ದಾರೆ ಮತ್ತು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಮುನ್ನೆಚ್ಚರಿಕೆಯಿಂದ ಅವರನ್ನು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಭೀರವಾದದ್ದು ಏನೂ ಇಲ್ಲ. ಅವರು ಮಲಗಿರುವಾಗ ಅಲ್ಲಿನ ಸಿಬ್ಬಂದಿ ತೆಗೆದ ಫೋಟೋಗಳು ಲೀಕ್ ಆಗಿದ್ದರಿಂದ, ಗಂಭೀರ ಸಮಸ್ಯೆ ಇದೆಯೇನೋ ಎಂಬ ಬಿಂಬಿತವಾಗಿದೆ ಅಷ್ಟೇ... ನಿಮ್ಮೆಲ್ಲರ ಪ್ರಾರ್ಥನೆ ಮತ್ತು ಹಾರೈಕೆಗಳಿಗೆ ಧನ್ಯವಾದಗಳು...' ಎಂದು 'ಕಿಚ್ಚ' ಸುದೀಪ್ ಟ್ವೀಟ್ ಮಾಡಿದ್ದಾರೆ.

Jack Manju: ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ಕಿಚ್ಚ ಸುದೀಪ್ ಆಪ್ತ, ನಿರ್ಮಾಪಕ ಜಾಕ್ ಮಂಜು

ಜಾಕ್‌ ಮಂಜುಗೆ ಏನಾಗಿತ್ತು?

15 ದಿನಗಳ ಹಿಂದೆ ಮೆಟ್ಟಿಲು ಹತ್ತುವಾಗ ಜಾಕ್ ಮಂಜು ಜಾರಿ ಬಿದ್ದಿದ್ದು, ಆಗ ಅವರ ಕಾಲಿಗೆ ಪೆಟ್ಟಾಗಿತ್ತು. ನೋವು ಕಡಿಮೆ ಆಗದೇ ಇರುವುದರಿಂದ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಮಧ್ಯೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇದೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಆ ರೀತಿ ಏನೂ ಇಲ್ಲ ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಸದ್ಯ ಜಾಕ್ ಮಂಜು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Vikrant Rona: ರಾ.. ರಾ.. ರಕ್ಕಮ್ಮ ಹಾಡಿಗೆ ಡ್ಯಾನ್ಸ್ ಮಾಡಿದ ಅರವಿಂದ್.ಕೆಪಿ, ದಿವ್ಯಾ ಉರುಡುಗ

'ವಿಕ್ರಾಂತ್ ರೋಣ' ರಿಲೀಸ್‌ಗೆ ರೆಡಿ

'ಕಿಚ್ಚ' ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾವನ್ನು ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಜುಲೈ 28ರಂದು ತೆರೆಗೆ ಬರಲಿದೆ. 'ವಿಕ್ರಾಂತ್ ರೋಣ'ಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ 'ರಕ್ಕಮ್ಮ...' ಹಾಡು ಈಗಾಗಲೇ ಭಾರಿ ವೈರಲ್ ಆಗಿದೆ.

ಕಿಚ್ಚ ಸುದೀಪ್‌ಗೆ ವಿಶೇಷ ಉಡುಗೊರೆ ನೀಡಿದ ಜೋಸ್‌ ಬಟ್ಲರ್‌!

ಲೇಖಕರ ಬಗ್ಗೆ
ಅವಿನಾಶ್ ಜಿ. ರಾಮ್
'ವಿಜಯ ಕರ್ನಾಟಕ' ಡಿಜಿಟಲ್ ವಿಭಾಗದಲ್ಲಿ 2019ರ ಸೆಪ್ಟೆಂಬರ್‌ನಿಂದ ಪತ್ರಕರ್ತನಾಗಿ ಅವಿನಾಶ್ ಜಿ. ರಾಮ್ ಕೆಲಸ ಮಾಡುತ್ತಿದ್ದಾರೆ. ಚಿನ್ನದ ಪದಕದೊಂದಿಗೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರಿಗೆ ಕಳೆದ 10 ವರ್ಷಗಳಿಂದ ಸಿನಿಮಾ ವರದಿಗಾರರಾಗಿ ಕೆಲಸ ಮಾಡಿದ ಅನುಭವವಿದೆ. ರಾಜ್ಯಮಟ್ಟದ ಪತ್ರಿಕೆಯೊಂದರಲ್ಲಿ ನಾಲ್ಕು ವರ್ಷ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಅವಿನಾಶ್‌ ಕಾರ್ಯನಿರ್ವಹಿಸಿದ್ದಾರೆ. ಸಿನಿಮಾ ವರದಿಗಾರಿಕೆ ಜೊತೆಗೆ ಪ್ರವಾಸ, ಓದು, ಸಂಗೀತ ಕೇಳುವುದು ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌