ಆ್ಯಪ್ನಗರ

ವಿಷ್ಣುವರ್ಧನ್‌ಗೆ ಅವಹೇಳನ: ತೆಲುಗು ನಟನಿಗೆ ಪುನೀತ್‌ ರಾಜ್‌ಕುಮಾರ್‌ ಖಡಕ್‌ ಎಚ್ಚರಿಕೆ!

ಡಾ. ವಿಷ್ಣುವರ್ಧನ್‌ ಬಗ್ಗೆ ತೆಲುಗು ನಟ ವಿಜಯ್‌ ರಂಗರಾಜು ನೀಡಿರುವ ಅವಹೇಳನಕಾರಿ ಹೇಳಿಕೆಗೆ ಸ್ಯಾಂಡಲ್‌ವುಡ್‌ನ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅನಿರುದ್ಧ, ಜಗ್ಗೇಶ್‌ ಬಳಿಕ ಪುನೀತ್‌ ರಾಜ್‌ಕುಮಾರ್‌ ಕೂಡ ಈ ಕುರಿತು ಮಾತನಾಡಿದ್ದಾರೆ.

Vijaya Karnataka Web 12 Dec 2020, 3:11 pm
ನಟ ವಿಷ್ಣುವರ್ಧನ್‌ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿರುವ ಟಾಲಿವುಡ್‌ ನಟ ವಿಜಯ್‌ ರಂಗರಾಜು ಕೂಡಲೇ ಕ್ಷಮೆ ಕೇಳಬೇಕು ಎಂದು 'ಪವರ್‌ ಸ್ಟಾರ್‌' ಪುನೀತ್‌ ರಾಜ್‌ಕುಮಾರ್‌ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿರುವುದೂ ಅಲ್ಲದೆ, ಖಡಕ್‌ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web ವಿಷ್ಣುವರ್ಧನ್‌ ಪುನೀತ್‌ ರಾಜ್‌ಕುಮಾರ್‌


'ಮೊದಲು ಮಾನವನಾಗು' ಎಂದ ಪುನೀತ್‌
'ನಮ್ಮ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನವಾಗಿ ಮಾತನಾಡಿರುವ ಆ ಕಲಾವಿದ ಕ್ಷಮೆ ಕೇಳಿ, ತನ್ನ ಮಾತುಗಳನ್ನು ಹಿಂಪಡೆಯಬೇಕು. ಭಾರತೀಯ ಚಿತ್ರರಂಗ ನಮ್ಮ ಮನೆ. ಎಲ್ಲ ಕಲಾವಿದರೂ ಒಂದು ಕುಟುಂಬ. ಕಲೆಗೆ, ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ. ಮೊದಲು ಮಾನವನಾಗು' ಎಂದು ಟ್ವೀಟ್‌ ಮಾಡುವ ಮೂಲಕ ಟಾಲಿವುಡ್‌ ನಟನಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ ಪುನೀತ್‌ ರಾಜ್‌ಕುಮಾರ್‌.

'ಗೌರವ ತೋರುವುದು ಮೊದಲ ಅರ್ಹತೆ'
'ಒಬ್ಬ ಕಲಾವಿದ ಆಗಬೇಕಾದರೆ ಅವನಿಗೆ ಇರಬೇಕಾದ ಮೊದಲ ಅರ್ಹತೆ ತನ್ನ ಸಹದ್ಯೋಗಿ ಕಲಾವಿದರ ಬಗ್ಗೆ ಗೌರವ ಹಾಗು ಪ್ರೀತಿಯನ್ನು ತೋರುವುದು. ಯಾವುದೇ ಭಾಷೆಯ ನಟರಾದರೂ ಗೌರವ ಮೊದಲು' ಎಂದು ಪುನೀತ್‌ ಹೇಳಿದ್ದಾರೆ. ಜೊತೆಗೆ ಅವರು ಬಳಸಿರುವ #RespectArtAndArtist ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿದೆ. ಪುನೀತ್‌ ಮಾಡಿರುವ ಈ ಟ್ವೀಟ್‌ ಸಖತ್‌ ವೈರಲ್‌ ಆಗುತ್ತಿದೆ. ತೆಲುಗು ನಟನ ಹೇಳಿಕೆಯನ್ನು ಜಗ್ಗೇಶ್‌, ಅನಿರುದ್ಧ, ಪ್ರಥಮ್‌ ಮುಂತಾದವರು ಸೋಶಿಯಲ್‌ ಮೀಡಿಯಾ ಮೂಲಕ ಖಂಡಿಸಿದ್ದಾರೆ.

also read: 'ಸಾಹಸ ಸಿಂಹ' ವಿಷ್ಣುವರ್ಧನ್ ಕಾಲರ್ ಹಿಡಿಯುವ ಧೈರ್ಯ ಯಾರಿಗಿದೆ? ಅನಿರುದ್ಧ ಪ್ರಶ್ನೆ!

ಏನಿದು ವಿವಾದ?
ತೆಲುಗು ಚಿತ್ರರಂಗದ ನಟ ವಿಜಯ್‌ ರಂಗರಾಜು ದಶಕಗಳ ಹಿಂದೆ ವಿಷ್ಣುವರ್ಧನ್‌ ಜತೆ ತಾವು ನಟಿಸಿದ್ದಾಗಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ವಿಷ್ಣುವರ್ಧನ್‌ ಅವರ ನಡತೆ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ. ಅಲ್ಲದೇ, ಅಂದು ತಾವು ವಿಷ್ಣುವರ್ಧನ್‌ ಅವರ ಕಾಲರ್‌ ಹಿಡಿದು ಜಗಳ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಈ ಸಂದರ್ಶನದ ವಿಡಿಯೋ ತುಣುಕು ಒಂದೆರಡು ದಿನಗಳಿಂದ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ವಿಷ್ಣುವರ್ಧನ್‌ ಅಭಿಮಾನಿಗಳೂ ಸೇರಿದಂತೆ ಕನ್ನಡಿಗರೆಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

also read: ವಿಷ್ಣುವರ್ಧನ್‌ರನ್ನು ಅವಹೇಳನ ಮಾಡಿದ ನಟನ ವಿರುದ್ಧ ಕ್ರಮಕ್ಕೆ ಮುಂದಾದ ವಾಣಿಜ್ಯ ಮಂಡಳಿ!


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌