ಆ್ಯಪ್ನಗರ

'ವಿಜಯಾನಂದ' ಸಿನಿಮಾದ ಹಾಡು ಬಿಡುಗಡೆ; ರಿಲೀಸ್‌ ಡೇಟ್‌ ಕೂಡ ಘೋಷಣೆ ಮಾಡಿದ ಚಿತ್ರತಂಡ

ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನವನ್ನು ಆಧರಿಸಿ 'ವಿಜಯಾನಂದ' ಸಿನಿಮಾವನ್ನು ಮಾಡಿದ್ದಾರೆ ನಿರ್ದೇಶಕಿ ರಿಷಿಕಾ ಶರ್ಮಾ. ಈ ಸಿನಿಮಾವನ್ನು ಆನಂದ್ ಸಂಕೇಶ್ವರ ನಿರ್ಮಾಣ ಮಾಡಿದ್ಧಾರೆ. ಸದ್ಯ ಸಿನಿಮಾದ ಹಾಡು ರಿಲೀಸ್ ಆಗಿದ್ದು, ಬಿಡುಗಡೆ ದಿನಾಂಕವೂ ಘೋಷಣೆ ಆಗಿದೆ.

Authored byಅವಿನಾಶ್ ಜಿ. ರಾಮ್ | Vijaya Karnataka Web 7 Nov 2022, 4:03 pm

ಹೈಲೈಟ್ಸ್‌:

  • ವಿಜಯ ಸಂಕೇಶ್ವರ ಅವರ ಬಯೋಪಿಕ್ ಈ 'ವಿಜಯಾನಂದ' ಸಿನಿಮಾ
  • 'ವಿಜಯಾನಂದ' ಸಿನಿಮಾದ ಹಾಡೊಂದು ರಿಲೀಸ್ ಆಗಿದೆ
  • ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ನಿಹಾಲ್ ನಟನೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web vijayanand
'ವಿಜಯಾನಂದ' ಸಿನಿಮಾದ ಹಾಡು ಬಿಡುಗಡೆ; ರಿಲೀಸ್‌ ಡೇಟ್‌ ಕೂಡ ಘೋಷಣೆ ಮಾಡಿದ ಚಿತ್ರತಂಡ
ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನವನ್ನು ಆಧರಿಸಿ ಪ್ಯಾನ್ ಇಂಡಿಯಾ 'ವಿಜಯಾನಂದ' ಸಿದ್ಧವಾಗಿದೆ. ಈ ಸಿನಿಮಾವನ್ನು ಐದು ಭಾಷೆಗಳಲ್ಲಿ ನಿರ್ದೇಶಕಿ ರಿಷಿಕಾ ಶರ್ಮಾ ಮಾಡಿದ್ದಾರೆ. ವಿಜಯ್ ಸಂಕೇಶ್ವರ ಅವರ ಪಾತ್ರದಲ್ಲಿ ನಟ ನಿಹಾಲ್ ಕಾಣಿಸಿಕೊಂಡಿದ್ದಾರೆ. ಸದ್ಯ ಚಿತ್ರದ ಹಾಡನ್ನು ರಿಲೀಸ್ ಮಾಡಿರುವ ಚಿತ್ರತಂಡ, ಜೊತೆಗೆ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಿದೆ. ಡಿಸೆಂಬರ್ 9ರಂದು ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ತೆರೆಗೆ ಬರಲಿದೆ.
ಗೋಪಿ ಸುಂದರ್ ಸಂಗೀತ ನಿರ್ದೇಶನ
'ವಿಜಯಾನಂದ' ಸಿನಿಮಾದ ಹಾಡುಗಳಿಗೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ಸಂಗೀತ ನೀಡಿದ್ದಾರೆ. 'ಗೀತಾ ಗೋವಿಂದಂ' ಸೇರಿದಂತೆ 300ಕ್ಕೂ ಅಧಿಕ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ ಗೋಪಿ ಸುಂದರ್‌. ಕನ್ನಡದಲ್ಲಿ 'ವಿಜಯಾನಂದ' ಇವರ ಮೊದಲ ಚಿತ್ರ. ಈ ಚಿತ್ರದ 'ಹಾಗೆ ಆದ ಆಲಿಂಗನ..' ಎಂಬ ಹಾಡನ್ನು ಧನಂಜಯ್ ರಂಜನ್ ಬರೆದಿದ್ದು, ವಿಜಯ್‌ಪ್ರಕಾಶ್ ಹಾಗೂ ಕೀರ್ತನಾ ವೈದ್ಯನಾಥನ್ ಹಾಡಿದ್ದಾರೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡಿದ್ದಾರೆ.

'ವಿಜಯಾನಂದ' ಬಯೋಪಿಕ್‌ನಲ್ಲಿ 'ಬ್ರಹ್ಮಗಂಟು' ನಟ ಭರತ್‌ ಬೋಪಣ್ಣ; ಪಾತ್ರದ ಫಸ್ಟ್ ಲುಕ್ ರಿಲೀಸ್!
ನಾನು 15ನೇ ವಯಸ್ಸಿಗೆ ಕೆಲಸ ಶುರು ಮಾಡಿದೆ
ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ವಿಜಯ ಸಂಕೇಶ್ವರ, 'ನನ್ನ‌ ಜೀವನಾಧಾರಿತ ಸಿನಿಮಾ ಮಾಡುವುದಾಗಿ ನಿರ್ದೇಶಕಿ ರಿಷಿಕಾ ಶರ್ಮಾ ಕೇಳಿದಾಗ, 'ಈ ಚಿಕ್ಕ ಹುಡುಗಿ ಏನು ಮಾಡುತ್ತಾಳೆ' ಅನ್ನಿಸಿತು. ಆದರೆ ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಷಿಕಾ ಬಹಳ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ನನ್ನ ಮಗ ಆನಂದ್ ಈ ಚಿತ್ರವನ್ನು ನಿರ್ಮಾಣ‌ ಮಾಡಿದ್ದಾರೆ. ನನ್ನ‌ ಕುಟುಂಬವರೆಲ್ಲಾ ಉದ್ಯಮಿಗಳು. ನಮ್ಮ ತಂದೆಯವರು ಸಹ.‌ ನಾನು 15ನೇ ವಯಸ್ಸಿಗೆ ಕೆಲಸ ಶುರು ಮಾಡಿದೆ. ನಮ್ಮ‌ ತಂದೆ ಬಳಿ ಹೋಗಿ ಟ್ರಾನ್ಸ್ ಪೋರ್ಟ್ ಬ್ಯುಸಿನೆಸ್ ಶುರು ಮಾಡುತ್ತೇನೆ ಅಂದಾಗ ಅವರು ಗಾಬರಿಯಾದರು. ಅಂದು ಒಂದು ಲಾರಿಯಿಂದ ಆರಂಭವಾದ ನನ್ನ ಉದ್ಯಮ, ಇಂದು ಬೃಹತ್ತಾಗಿ ಬೆಳೆದಿದೆ' ಎನ್ನುತ್ತಾರೆ.

'ವಿಜಯಾನಂದ' ಬಯೋಪಿಕ್‌ನಲ್ಲಿ ಶೈನ್‌ ಶೆಟ್ಟಿ ವಿಲನ್‌; ಪಾತ್ರದ ಬಗ್ಗೆ 'ಬಿಗ್ ಬಾಸ್' ವಿನ್ನರ್ ಹೇಳಿದ್ದೇನು?
ಡಿ.9ರಂದು ನಮ್ಮ ಚಿತ್ರ ಬಿಡುಗಡೆ
ನನ್ನ ಹಿಂದಿನ ಶಕ್ತಿ ನನ್ನ ಪತ್ನಿ ಲಲಿತಾ ಎಂದರೆ ತಪ್ಪಾಗಲಾರದು. ನನ್ನ ಮಗ ಆನಂದ ಈಗ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾನೆ. ಮೊಮ್ಮಗ ಶಿವ ಸದ್ಯದಲ್ಲೇ ಹೊಸ ಉದ್ಯಮ ಶುರು ಮಾಡಲಿದ್ದಾನೆ. ಈ ಚಿತ್ರ ಮಾಡಬೇಕಾದರೆ ನಾನು ನಿರ್ದೇಶಕರಿಗೆ ಹೇಳಿದ್ದೆ, 'ನನ್ನ‌ ಜೀವನ ಹೇಗಿತ್ತೋ ಹಾಗೆ ತೋರಿಸಬೇಕು, ಬೇರೆ ಏನು ಸೇರಿಸಬಾರದು' ಅಂತ. ನಾನು ಚಿಕ್ಕ ವಯಸ್ಸಿನಲ್ಲಿ ಹೇಗಿದ್ದೇನೋ, ನಾಯಕ ನಿಹಾಲ್ ಹಾಗೆ ಕಾಣುತ್ತಾರೆ. ಆ ಮೀಸೆ, ಬಣ್ಣಬಣ್ಣದ ಅಂಗಿಗಳು ಎಲ್ಲವು.. ಆ ವಯಸ್ಸಿನಲ್ಲಿ ನಾನು ಹಾಗೆ ಇದ್ದೆ. ನಾಯಕಿ ಸಿರಿ ಪ್ರಹ್ಲಾದ್ ಕೂಡ ನನ್ನ ಹೆಂಡತಿಯನ್ನೇ ಹೋಲುತ್ತಾರೆ. ಈ ಚಿತ್ರ ಯುವಕರಿಗೆ ಸ್ಪೂರ್ತಿಯಾಗಲಿ. ಡಿ.9ರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ' ಎಂದು ಹೇಳಿದರು ವಿಜಯ ಸಂಕೇಶ್ವರ.

ವಿಜಯ ಸಂಕೇಶ್ವರ ಅವರ ಬದುಕಿನ ಕಥೆ ‘ವಿಜಯಾನಂದ’ ಚಿತ್ರಕ್ಕೆ ಅದ್ಧೂರಿ ಮುಹೂರ್ತ
ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಶರಣ್, ಹರ್ಷಿಕಾ ಪೂಣಚ್ಛ ಅತಿಥಿಗಳಾಗಿ ಆಗಮಿಸಿ‌ ಚಿತ್ರತಂಡಕ್ಕೆ ಶುಭ ಕೋರಿದರು. ನಾಯಕ ನಿಹಾಲ್, ನಾಯಕಿ ಸಿರಿ ಪ್ರಹ್ಲಾದ್ ಜೊತೆಗೆ ಅನಂತ್ ನಾಗ್, ರವಿಚಂದ್ರನ್,‌ ಭರತ್ ಬೋಪಣ್ಣ, ಅರ್ಚನಾ ಕೊಟ್ಟಿಗೆ, ರಾಜೇಶ್ ನಟರಂಗ, ವಿನಯಾಪ್ರಸಾದ್, ಪ್ರಕಾಶ್ ಬೆಳವಾಡಿ, ರಮೇಶ್ ಭಟ್, ಶೈನ್ ಶೆಟ್ಟಿ, ದಯಾಳ್ ಪದ್ಮನಾಭನ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಲೇಖಕರ ಬಗ್ಗೆ
ಅವಿನಾಶ್ ಜಿ. ರಾಮ್
'ವಿಜಯ ಕರ್ನಾಟಕ' ಡಿಜಿಟಲ್ ವಿಭಾಗದಲ್ಲಿ 2019ರ ಸೆಪ್ಟೆಂಬರ್‌ನಿಂದ ಪತ್ರಕರ್ತನಾಗಿ ಅವಿನಾಶ್ ಜಿ. ರಾಮ್ ಕೆಲಸ ಮಾಡುತ್ತಿದ್ದಾರೆ. ಚಿನ್ನದ ಪದಕದೊಂದಿಗೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರಿಗೆ ಕಳೆದ 10 ವರ್ಷಗಳಿಂದ ಸಿನಿಮಾ ವರದಿಗಾರರಾಗಿ ಕೆಲಸ ಮಾಡಿದ ಅನುಭವವಿದೆ. ರಾಜ್ಯಮಟ್ಟದ ಪತ್ರಿಕೆಯೊಂದರಲ್ಲಿ ನಾಲ್ಕು ವರ್ಷ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಅವಿನಾಶ್‌ ಕಾರ್ಯನಿರ್ವಹಿಸಿದ್ದಾರೆ. ಸಿನಿಮಾ ವರದಿಗಾರಿಕೆ ಜೊತೆಗೆ ಪ್ರವಾಸ, ಓದು, ಸಂಗೀತ ಕೇಳುವುದು ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌