ಆ್ಯಪ್ನಗರ

ಆರ್ಯನ್ ಸಂತೋಷ್ ನಟನೆಯ 'ಡಿಯರ್ ಸತ್ಯ' ಟೀಸರ್ ರಿಲೀಸ್ ಮಾಡಿದ ಶಿವರಾಜ್‌ಕುಮಾರ್!

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಜೊತೆಗೆ ಕೆಲ ರಿಯಾಲಿಟಿ ಶೋಗಳ ನಿರೂಪಕರಾಗಿ ಕೆಲಸ ಮಾಡಿದ್ದ ನಟ ಆರ್ಯನ್ ಸಂತೋಷ್ ಅಭಿನಯದ 'ಡಿಯರ್ ಸತ್ಯ' ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ಮೂಲಕ ಅವರ ಕನಸು ಈಡೇರಿದೆ.

Vijaya Karnataka Web 16 Aug 2020, 3:03 pm
ಪರ್ಪಲ್ ರಾಕ್ ಎಂಟರ್ ಟೈನರ್ಸ್ ಮತ್ತು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ 'ಡಿಯರ್ ಸತ್ಯ'. ಈಗಾಗಲೇ ಶೇ. 90ರಷ್ಟು ಪೂರ್ಣಗೊಂಡಿರುವ ಈ ಚಿತ್ರದ ಟೀಸರ್ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ರಿಲೀಸ್ ಆಗಿದೆ.
Vijaya Karnataka Web shiva rajkumar release aryan santosh starrer dear satya movie teaser
ಆರ್ಯನ್ ಸಂತೋಷ್ ನಟನೆಯ 'ಡಿಯರ್ ಸತ್ಯ' ಟೀಸರ್ ರಿಲೀಸ್ ಮಾಡಿದ ಶಿವರಾಜ್‌ಕುಮಾರ್!


ಡಿಯರ್ ಸತ್ಯ ಸಿನಿಮಾದ ಟೀಸರ್ ಬಿಡುಗಡೆ ಮಾಡಿರುವ ಡಾ. ಶಿವರಾಜ್ ಕುಮಾರ್ ʻಟೀಸರ್ ಅದ್ಭುತವಾಗಿ ಬಂದಿದೆ. ಸಂತೋಷ್ ಈ ಚಿತ್ರದಲ್ಲಿ ಬೇರೆಯದ್ದೇ ರೀತಿಯಲ್ಲಿ ಕಾಣುತ್ತಿದ್ದಾರೆ. ಹೊಸಬರು ಚಿತ್ರರಂಗದಲ್ಲಿ ಗೆಲ್ಲಬೇಕು. ಈಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿʼ ಎಂದು ಹಾರೈಸಿದ್ದಾರೆ.

ನಟ ಆರ್ಯನ್ ಸಂತೋಷ್ ಅವರು ಶಿವರಾಜ್ ಕುಮಾರ್ ಅವರ ಓಂ ಚಿತ್ರವನ್ನು ನೋಡಲು ಥಿಯೇಟರಿನ ಮುಂದೆ ಜಗಳ ಆಡಿಕೊಂಡು, ನೂಕು ನುಗ್ಗಲಿನಲ್ಲಿ ನಿಂತಿದ್ದರಂತೆ. ಎಂದಾದರೂ ಒಂದು ದಿನ ನನ್ನ ಸಿನಿಮಾಗೆ ಶಿವಣ್ಣನ ಆಶೀರ್ವಾದ ಪಡೆಯಬೇಕು ಎನ್ನುವ ಕನಸು ಅವರಿಗೆ ಇತ್ತು. ಅದು ಈಗ 'ಡಿಯರ್ ಸತ್ಯ' ಟೀಸರ್ ರಿಲೀಸ್ ಮಾಡಿಸುವ ಮೂಲಕ ನನಸಾಗುತ್ತಿದೆ ಎಂದು ಸಂತೋಷ್ ಹೇಳಿದ್ದಾರೆ.

'ಡಿಯರ್ ಸತ್ಯ' ಸಿನಿಮಾ ಕ್ಲಾಸಿಕ್ ಕಮರ್ಷಿಯಲ್ ಅಂಶ ಇರಲಿದೆ. ಈಗಾಗಲೇ ಇದರ 90% ಭಾಗ ಶೂಟಿಂಗ್ ಪೂರ್ಣಗೊಂಡಿದೆ. 'ಡಿಯರ್ ಸತ್ಯ'ಚಿತ್ರಕ್ಕೆ ಉತ್ತಮ ಬೇಡಿಕೆ ಇದ್ದು, ಕೊರೊನಾದಿಂದ ಎದುರಾಗಿರುವ ಚಿತ್ರಮಂದಿರಗಳ ಸಮಸ್ಯೆ ಬಗೆಹರಿದರೆ ಥಿಯೇಟರ್‌ನಲ್ಲಿ ಬಿಡುಗಡೆ ಮಾಡುತ್ತೇವೆ. ಇಲ್ಲದಿದ್ದರೆ ನೇರವಾಗಿ ಓಟಿಟಿಯಲ್ಲೇ ರಿಲೀಸ್ ಮಾಡಬೇಕಾಗುತ್ತದೆʼ ಎನ್ನುವುದು ಸಿನಿಮಾ ತಂಡದ ಯೋಚನೆ.

Also Read-ನಟ ಶಿವರಾಜ್‌ಕುಮಾರ್ ಮನೆಯಲ್ಲಿ ಸಭೆ ನಡೆಸಿದ್ದೇಕೆ ಕನ್ನಡದ ಸ್ಟಾರ್ ನಟರು?

'ನೂರು ಜನ್ಮಕೂ' ಚಿತ್ರದ ಮೂಲಕ ಹೀರೋ ಆಗಿ ಲಾಂಚ್ ಆಗಿದ್ದವರು ಆರ್ಯನ್ ಸಂತೋಷ್. 'ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು', 'ಹಳ್ಳಿ ಹೈದ ಪ್ಯಾಟೇಗ್ ಬಂದ' ರಿಯಾಲಿಟಿ ಶೋಗಳ ನಿರೂಪಕರಾಗಿ, ಬಿಗ್ ಬಾಸ್ ಸೀಸನ್-2 ನ ಸ್ಪರ್ಧಿಯಾಗಿದ್ದವರು ಆರ್ಯನ್ ಸಂತೋಷ್. ಈಗ 'ಡಿಯರ್ ಸತ್ಯ'ನಾಗಿ ಹೊಸ ಲುಕ್‌ನಲ್ಲಿ ಮತ್ತೆ ಹಾಜರಾಗಿದ್ದಾರೆ. ಈ ಚಿತ್ರದಲ್ಲಿ ಸತ್ಯ ಮತ್ತು ರಿವೇಂಜ್ ಸತ್ಯ ಎಂಬ ಎರಡು ಶೇಡ್‌ಗಳಿವೆ. ಈ ಸಿನಿಮಾದಲ್ಲಿನ ಪೊಲೀಸ್ ಪಾತ್ರವನ್ನು ಅರವಿಂದ್ ರಾವ್ ನಿಭಾಯಿಸಿದ್ದಾರೆ. ನಾಯಕಿಯಾಗಿ ಅರ್ಚನಾ ಕೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಅವರ ಪುತ್ರ ಯತೀಶ್ ಕೂಡಾ ಈ ಚಿತ್ರದ ನಿರ್ಮಾಪಕರಲ್ಲೊಬ್ಬರು.

Also Read-ಸ್ವಾತಂತ್ರ್ಯ ದಿನಾಚರಣೆಯಂದು 'ಡಿಯರ್ ಸತ್ಯ' ಟೀಸರ್ ರಿಲೀಸ್‌!

ಬೆಂಗಳೂರೆಂಬ ಮಹಾನಗರದಲ್ಲಿ ಪ್ರೀತಿಯನ್ನು ಉಳಿಸಿಕೊಳ್ಳಲು ಹೆಣಗಾಡುವ, ತನ್ನ ಕನಸುಗಳನ್ನು ಈಡೇರಿಸಿಕೊಳ್ಳಲು ಯತ್ನಿಸುವ ಹುಡುಗನ ಕಥೆ 'ಡಿಯರ್ ಸತ್ಯʼದಲ್ಲಿ ಜೀವ ಪಡೆದಿದೆ. 'ಡಿಯರ್ ಸತ್ಯ' ಚಿತ್ರದಲ್ಲಿ ಅರುಣಾ ಬಾಲರಾಜ್, ಅಶ್ವಿನ್ ರಾವ್ ಪಲ್ಲಕ್ಕಿ, ಅರವಿಂದ್ ರಾವ್, ಅಪ್ಪಣ್ಣ, ಗುರುರಾಜ ಹೊಸಕೋಟೆ, ಆದರ್ಶ್ ಚಂದ್ರಕರ್ ಮುಂತಾದವರು ಪಾತ್ರ ನಿರ್ವಹಿಸಿದ್ದಾರೆ. ಶಿವಗಣೇಶ್ 'ಡಿಯರ್ ಸತ್ಯ' ಚಿತ್ರವನ್ನು ನಿರ್ದೇಶಿಸಿದ್ದಾರೆ. 'ಭಿನ್ನ' ಚಿತ್ರದ ಗೆಲುವಿನ ನಂತರ ಯತೀಶ್ ವೆಂಕಟೇಶ್, ಬಿ.ಎಸ್. ಶ್ರೀನಿವಾಸ್, ಗಣೇಶ್ ಪಾಪಣ್ಣ ಮತ್ತು ಅಜಯ್ ಅಪ್ಪರೂಪ್ ಪರ್ಪಲ್ ರಾಕ್ ಎಂಟರ್ ಟೈನರ್ಸ್ ಮತ್ತು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಸಹಯೋಗದಲ್ಲಿ ನಿರ್ಮಾಣ ಮಾಡುತ್ತಿರುವ ಮತ್ತೊಂದು ಆಕ್ಷನ್ ರಿವೇಂಜ್, ಥ್ರಿಲ್ಲರ್ ಚಿತ್ರ 'ಡಿಯರ್ ಸತ್ಯ'.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌