ಆ್ಯಪ್ನಗರ

ಹೆಸರಘಟ್ಟದಲ್ಲೇ ನಿರ್ಮಾಣವಾಗಲಿದೆ ಸ್ಯಾಂಡಲ್‌ವುಡ್‌ನ ಬಹುನಿರೀಕ್ಷೆಯ ಫಿಲ್ಮ್‌ ಸಿಟಿ

ಕೊರೊನಾ ವೈರಸ್‌ನಿಂದಾಗಿ ಕನ್ನಡ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಟ ಶಿವರಾಜ್‌ಕುಮಾರ್ ಗುರುವಾರ (ಆ.13) ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿದ್ದಾರೆ.

Vijaya Karnataka Web 13 Aug 2020, 10:39 pm
ನಟ ಶಿವರಾಜ್‌ಕುಮಾರ್ ಸ್ಯಾಂಡಲ್‌ವುಡ್‌ನ ಮುಂದಾಳತ್ವ ವಹಿಸಿಕೊಂಡು, ಈಗಾಗಲೇ ಸಾಕಷ್ಟು ಸಭೆಗಳನ್ನು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅವರು ಗುರುವಾರ (ಆ.13) ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ ಮಾತುಕಥೆ ನಡೆಸಿದ್ದಾರೆ. ಕೊರೊನಾ ವೈರಸ್ ಸಮಸ್ಯೆಯಿಂದ ಚಿತ್ರರಂಗ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಕನ್ನಡ ಚಿತ್ರರಂಗದ ಬಹುನಿರೀಕ್ಷೆಯ ಫಿಲ್ಮ್‌ ಸಿಟಿ ನಿರ್ಮಾಣದ ಕುರಿತು ಹೊಸ ಮಾಹಿತಿಯನ್ನು ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ನೀಡಿದ್ದಾರೆ.
Vijaya Karnataka Web shivarajkumar meeting with dcm dr cn ashwath narayan
ಹೆಸರಘಟ್ಟದಲ್ಲೇ ನಿರ್ಮಾಣವಾಗಲಿದೆ ಸ್ಯಾಂಡಲ್‌ವುಡ್‌ನ ಬಹುನಿರೀಕ್ಷೆಯ ಫಿಲ್ಮ್‌ ಸಿಟಿ


ಕನಕಪುರ ರಸ್ತೆಯ ರೋರಿಚ್ ಎಸ್ಟೇಟ್‌ನಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ ಮಾಡಲು ಯೋಜಿಸಲಾಗಿತ್ತು. ಇದೀಗ ಫಿಲ್ಮ್‌ ಸಿಟಿಯು ಹೆಸರಘಟ್ಟದಲ್ಲೇ ನಿರ್ಮಾಣವಾಗಲಿದೆ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. 'ಪಶುಸಂಗೋಪನಾ ಇಲಾಖೆಯ 450 ಎಕರೆ ಭೂಮಿ ಹೆಸರಘಟ್ಟದಲ್ಲಿದ್ದು, ಅದರಲ್ಲಿ 150 ಎಕರೆಯನ್ನು ಫಿಲ್ಮ್‌ ಸಿಟಿ ನಿರ್ಮಾಣಕ್ಕಾಗಿ ನೀಡಲಾಗುವುದು. ಫಿಲ್ಮ್ ಸಿಟಿಗೆ ಸಂಪರ್ಕಕ್ಕೆ ಸರಿಯಾದ ರಸ್ತೆ ನಿರ್ಮಿಸಿ, ಆನಂತರ ಜಾಗವನ್ನು ಫಿಲ್ಮ್‌ ಸಿಟಿಗೆ ಹಸ್ತಾಂತರ ಮಾಡಲಾಗುವುದು. ಯೋಜನೆ ಕುರಿತಂತೆ ಪ್ರಕ್ರಿಯೆಗಳು ಜಾರಿಯಲ್ಲಿವೆ. ಆದಷ್ಟು ಬೇಗ ಬಹುನಿರೀಕ್ಷಿತ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು' ಎಂದು ಅವರು ಮಾಹಿತಿ ನೀಡಿದ್ದಾರೆ.

'ಕನ್ನಡ ಚಿತ್ರರಂಗದಲ್ಲಿ ಅಸಂಘಟಿತ ದಿನಗೂಲಿ ಕಾರ್ಮಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಆದಷ್ಟು ಬೇಗ ಕ್ರಮ ಕೈಗೊಳ್ಳುತ್ತೇವೆ. ಕಾರ್ಮಿಕ ಇಲಾಖೆ ಜೊತೆಗೆ ಮಾತನಾಡಿ ಅವರನ್ನೂ ಅದರ ಅಡಿಗೆ ಸೇರಿಸಿ, ಅವರಿಗೂ ಸರಕಾರದ ಸೌಲಭ್ಯಗಳು. ಸಿಗುವಂತೆ ನೋಡಿಕೊಳ್ಳಲಾಗುವುದು. ಸಿನಿಮಾ ಪ್ರದರ್ಶಕ ವಲಯದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ಕೆಲಸಗಾರರಿಗೂ ಸರ್ಕಾರ ಸಹಾಯ ಮಾಡಲಿದೆ. ಈ ಬಗ್ಗೆ ಸಂಬಂಧಪಟ್ಟವರ ಜತೆ ಶೀಘ್ರವೇ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಸಕಾಲದಲ್ಲಿ ಸಬ್ಸಿಡಿ ಸಿಗುವಂತೆ ಮಾಡುವುದು ಹಾಗೂ ಸಬ್ಸಿಡಿ ಪ್ರಮಾಣವನ್ನು ಹೆಚ್ಚಿಸುವುದರ ಬಗ್ಗೆಯೂ ಚರ್ಚೆ ಮಾಡಲಿದ್ದೇವೆ. ಸಿನಿಮಾ ನಿರ್ಮಾಣಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಸರ್ಕಾರ ಸಹಾಯ ಮಾಡಲಿದೆ. ಜಿಎಸ್‌ಟಿ ವಿಚಾರದಲ್ಲಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಸರಿಪಡಿಸಲಾಗುವುದು' ಎಂದು ಡಾ. ಅಶ್ವತ್ಥನಾರಾಯಣ ತಿಳಿಸಿದರು.

ಚಿತ್ರಮಂದಿರ ತೆರೆಯುವ ಬಗ್ಗೆ ಶಿವರಾಜ್‌ಕುಮಾರ್‌ ಮನೆಯಲ್ಲಿ ನಡೆದಿದೆ ಮಹತ್ವದ ಸಭೆ!

ನಟ ಶಿವರಾಜ್‌ಕುಮಾರ್ ಮಾತನಾಡಿ, 'ಕೊರೊನಾದಿಂದಾಗಿ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಸರ್ಕಾರ ಚಿತ್ರರಂಗದ ಸಹಾಯಕ್ಕೆ ಬರಬೇಕು. ಈಗಾಗಲೇ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಉಪ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಈ ಮಾತುಕತೆ ಸಕಾರಾತ್ಮಕವಾಗಿತ್ತು. ಮುಂದಿನ ವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು' ಎಂದು ಹೇಳಿದರು.

ಶಿವಣ್ಣ ಮನೆಯಲ್ಲಿ ನಡೆದ ಚಿತ್ರರಂಗದ ಸಭೆಗೆ ನಟ ಜಗ್ಗೇಶ್‌ ಗೈರಾಗಿದ್ದಕ್ಕೆ ಇಲ್ಲಿದೆ ಕಾರಣ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌