ಆ್ಯಪ್ನಗರ

'ಅಪ್ಪ ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂಬ ನಂಬಿಕೆ ಇದೆ'- ಎಸ್‌ಪಿಬಿ ಪುತ್ರ ಚರಣ್ ಹೇಳಿಕೆ

ಭಾರತೀಯ ಚಿತ್ರರಂಗದ ಜನಪ್ರಿಯ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರು ಅನಾರೋಗ್ಯದಿಂದಾಗಿ ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅವರ ಪುತ್ರ ಚರಣ್ ಮಾಹಿತಿ ನೀಡಿದ್ದಾರೆ.

Vijaya Karnataka Web 31 Aug 2020, 7:56 pm
ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಅವರು ಗುಣಮುಖರಾಗುವ ಸೂಚನೆ ನೀಡಿದ್ದಾರೆ. ಅವರ ಆರೋಗ್ಯದ ಕುರಿತು ಪುತ್ರ ಚರಣ್ ಮಾಹಿತಿ ನೀಡಿದ್ದಾರೆ. 'ನಾನು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚೆ ಮಾಡಿದ್ದೇನೆ. ಅವರು ಲಂಗ್ಸ್‌ನ ಎಕ್ಸ್‌ರೇಯನ್ನು ತೋರಿಸಿದರು. ಉತ್ತಮ ಬೆಳವಣಿಗೆ ಕಂಡುಬಂದಿದೆ. ಅಪ್ಪನ ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡುಬರುತ್ತಿದೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ' ಎಂದು ಮಾಹಿತಿ ನೀಡಿದ್ದಾರೆ.
Vijaya Karnataka Web ಅಪ್ಪ ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂಬ ನಂಬಿಕೆ ಇದೆ- ಎಸ್‌ಪಿಬಿ ಪುತ್ರ ಚರಣ್ ಹೇಳಿಕೆ


'ತುಂಬ ಸಮಯದಿಂದ ಮಲಗಿಕೊಂಡೇ ಇದ್ದಿದ್ದರಿಂದ ಈಗ ಒಂದಷ್ಟು ವ್ಯಾಯಾಮಗಳನ್ನು ಮಾಡಿಸಲಾಗುತ್ತಿದೆ. ಉಸಿರಾಟ ಕೂಡ ತುಂಬ ಚೆನ್ನಾಗಿ ಮಾಡುತ್ತಿದ್ದಾರೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಅವರು ಆದಷ್ಟು ಬೇಗ ಇದರಿಂದ ಹೊರಬರಲಿದ್ದಾರೆ ಎಂಬ ನಂಬಿಕೆ ಇದೆ. ಎಷ್ಟು ಸಾಧ್ಯವೋ ಅಷ್ಟು ಬೇಗ ಅವರು ಮನೆಗೆ ಮರಳಲಿದ್ದಾರೆ' ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

'ನಾಳೆಯಿಂದ ಲಾಕ್‌ಡೌನ್‌ ಇನ್ನಷ್ಟು ಸಡಿಲಿಕೆ ಆಗಲಿದೆ. ಹಾಗಾಗಿ, ನೀವು ಇನ್ನಷ್ಟು ಹುಷಾರಾಗಿರಿ. ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ನಾನು ಇದನ್ನು ಹೇಳಬೇಕಿಲ್ಲ. ಆದರೆ, ಕೋವಿಡ್‌ನಿಂದ ಏನೆಲ್ಲ ಆಗಿದೆ ಎಂಬುದನ್ನು ನಾನು ನೋಡಿದ್ದೇನೆ. ಅದು ಯಾರಿಗೂ ಆಗದೇ ಇರಲಿ. ಹಾಗಾಗಿ, ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ನಿಮ್ಮೆಲ್ಲರ ಪ್ರೀತಿ, ಹಾರೈಕೆಗಳಿಗೆ ಧನ್ಯವಾದಗಳು' ಎಂದು ಹೇಳಿದ್ದಾರೆ ಚರಣ್.

ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ; ಮಾಹಿತಿ ನೀಡಿದ ಪುತ್ರ ಚರಣ್‌

ಇದೇ ವೇಳೆ ತಮ್ಮ ತಾಯಿ ಸಾವಿತ್ರಿ ಅವರ ಆರೋಗ್ಯದ ಬಗ್ಗೆಯೂ ಚರಣ್ ಮಾಹಿತಿ ನೀಡಿದ್ದಾರೆ. 'ನನ್ನ ತಾಯಿ ಚೆನ್ನಾಗಿದ್ದಾರೆ. ಅವರೀಗ ಗುಣಮುಖರಾಗುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆಯೂ ಅನೇಕರು ಮಾಹಿತಿ ಕೇಳಿದ್ದೀರಿ. ಅದಕ್ಕಾಗಿ ಇದನ್ನು ಹೇಳುತ್ತಿದ್ದೇನೆ. ಅವರೀಗ ಮನೆಯಲ್ಲಿ ಹುಷಾರಾಗಿ ಇದ್ದಾರೆ' ಎಂದು ತಿಳಿಸಿದ್ದಾರೆ. ಆಗಸ್ಟ್‌ 5ರಂದು ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಆಗ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ; ಗುಣಮುಖರಾಗುವತ್ತ ಮೊದಲ ಹೆಜ್ಜೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌