ಆ್ಯಪ್ನಗರ

52 ದಿನ ಚಿಕಿತ್ಸೆ ಪಡೆದಿದ್ದ ಎಸ್‌ಪಿಬಿ: ಕುಟುಂಬಕ್ಕೆ ಎಂಜಿಎಂ ಆಸ್ಪತ್ರೆ ನೀಡಿದ ಬಿಲ್‌ ಎಷ್ಟು?

ಎಸ್‌ಪಿ ಬಾಲಸುಬ್ರಹ್ಮಣ್ಯಂ ಅಗಲಿಕೆಯ ನೋವು ಇನ್ನೂ ಹಸಿಯಾಗಿದೆ. ಅವರು ಇಲ್ಲ ಎಂಬ ಸತ್ಯವನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಷ್ಟರಲ್ಲಾಗಲೇ ಆಸ್ಪತ್ರೆಯ ಬಿಲ್‌ ಬಗ್ಗೆ ಒಂದು ಶಾಕಿಂಗ್‌ ಸುದ್ದಿ ಕೇಳಿಬಂದಿದೆ.

Vijaya Karnataka Web 29 Sep 2020, 7:54 am
ಅನಾರೋಗ್ಯದಿಂದ ಬಳಲುತ್ತಿದ್ದ ಗಾಯಕ ಎಸ್‌ಬಿ ಬಾಲಸುಬ್ರಹ್ಮಣ್ಯಂ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಸತತ 52 ದಿನಗಳ ಕಾಲ ಅವರಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆಯು ಎಸ್‌ಪಿಬಿ ಕುಟುಂಬಕ್ಕೆ ನೀಡಿದ ಬಿಲ್‌ ಮೊತ್ತ ಎಷ್ಟು? ಈ ಬಗ್ಗೆ ಒಂದು ವದಂತಿ ಹಬ್ಬಿದೆ. ಅದಕ್ಕೆ ಸ್ವತಃ ಅವರ ಪುತ್ರ ಎಸ್‌ಪಿಬಿ ಚರಣ್‌ ಸ್ಪಷ್ಟನೆ ನೀಡಿದ್ದಾರೆ.
Vijaya Karnataka Web ಎಸ್‌ಪಿ ಬಾಲಸುಬ್ರಹ್ಮಣ್ಯಂ ಎಸ್‌ಪಿಬಿ ಚರಣ್‌


ಶ್ವಾಸಕೋಶ ಸಂಬಂಧಿ ಅನಾರೋಗ್ಯ ಇದ್ದಿದ್ದರಿಂದ ಎಸ್‌ಪಿಬಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಯಿತು. ಒಟ್ಟು 52 ದಿನಗಳ ಚಿಕಿತ್ಸೆಗಾಗಿ ಎಂಜಿಎಂ ಆಸ್ಪತ್ರೆಯು ಬರೋಬ್ಬರಿ 3 ಕೋಟಿ ರೂಪಾಯಿ ಚಾರ್ಜ್‌ ಮಾಡಿದೆ ಎಂಬ ಸುದ್ದಿ ಹರಡಿತ್ತು. ಆ ಮೊತ್ತವನ್ನು ಭರಿಸುವವರೆಗೂ ಅವರ ಪಾರ್ಥಿವ ಶರೀರವನ್ನು ನೀಡುವುದಿಲ್ಲ ಎಂದು ಆಸ್ಪತ್ರೆಯವರು ಹೇಳಿದ್ದರಂತೆ ಎಂಬುದಾಗಿಯೂ ವದಂತಿ ಹರಡಿತ್ತು. ಅದಕ್ಕೆ ಎಸ್‌ಪಿಬಿ ಚರಣ್‌ ಪ್ರತಿಕ್ರಿಯಿಸಿದ್ದಾರೆ.

'ಆ.5ರಿಂದ ಸೆ.26ರವರೆಗೂ ಅಪ್ಪ ಆಸ್ಪತ್ರೆಯಲ್ಲಿ ಇದ್ದರು. ಆಸ್ಪತ್ರೆ ಬಿಲ್‌ ಬಗ್ಗೆ ಗಾಳಿಸುದ್ದಿ ಹಬ್ಬಿದೆ. ಬಿಲ್‌ ಕಟ್ಟಲಾಗದೇ ತಮಿಳುನಾಡು ಸರ್ಕಾರ ಮತ್ತು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಬಳಿ ನಾವು ಸಹಾಯ ಕೇಳಿದೆವು ಎಂಬ ಸುದ್ದಿ ಹರಡಿದೆ. ಆದರೆ ಇದೆಲ್ಲ ಶುದ್ಧ ಸುಳ್ಳು. ಅಂಥದ್ದು ಏನೂ ನಡೆದಿಲ್ಲ. ಜನ ಯಾಕೆ ಇಂಥ ಸುಳ್ಳು ಸುದ್ದಿ ಹಬ್ಬಿಸುತ್ತಾರೋ ಗೊತ್ತಿಲ್ಲ' ಎಂದು ಚರಣ್‌ ಬೇಸರ ವ್ಯಕ್ತಪಡಿಸಿದ್ದಾರೆ.

also read: ಕೆ. ಕಲ್ಯಾಣ್‌ ಅವರಿಂದ ಆಣೆ ಮಾಡಿಸಿಕೊಂಡಿದ್ದರು ಎಸ್‌ಪಿ ಬಾಲಸುಬ್ರಹ್ಮಣ್ಯಂ! ಯಾವ ಕಾರಣಕ್ಕೆ?

'ಆಸ್ಪತ್ರೆಯವರ ಜೊತೆ ಸೇರಿ ನಾನು ಒಂದು ಸುದ್ದಿಗೋಷ್ಠಿ ನಡೆಸುತ್ತೇನೆ. ಅದರಲ್ಲಿ ಎಲ್ಲ ಮಾಹಿತಿಯನ್ನೂ ನೀಡುತ್ತೇನೆ. ಯಾರೋ ಹರಡಿಸಿದ ಸುಳ್ಳು ಸುದ್ದಿಯನ್ನು ತಳ್ಳಿಹಾಕಲು ನಾವು ಇಷ್ಟೆಲ್ಲ ಮಾಡಬೇಕಾಗುತ್ತದೆ ಎಂಬುದು ಬೇಸರದ ಸಂಗತಿ. ಆಸ್ಪತ್ರೆಯವರು ಅಪ್ಪನನ್ನು ಚೆನ್ನಾಗಿಯೇ ನೋಡಿಕೊಂಡಿದ್ದಾರೆ. ಅದಕ್ಕಾಗಿ ನಾನು ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಸುಳ್ಳು ಸುದ್ದಿ ಹಬ್ಬಿಸುವವರನ್ನೂ ನಾನು ಕ್ಷಮಿಸುತ್ತೇನೆ' ಎಂದು ಹೇಳಿದ್ದಾರೆ ಚರಣ್‌. ಆ ಮೂಲಕ ಎಲ್ಲ ವದಂತಿಗಳಿಗೆ ಅವರು ತೆರೆ ಎಳೆದಿದ್ದಾರೆ.

also read: ಉಪೇಂದ್ರ & ಗುರುಕಿರಣ್‌ಗೆ 'A' ಚಿತ್ರದಲ್ಲಿ ಯಶಸ್ಸು ಸಿಗಲು ಕಾರಣವಾಗಿದ್ದ ಎಸ್‌ಪಿ ಬಾಲಸುಬ್ರಹ್ಮಣ್ಯಂ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌